ಧರ್ಮದರ್ಶಿಯನ್ನು ಅಡ್ಡಗಟ್ಟಿ SUV ಕಾರು,20 ಲಕ್ಷ ರೂಪಾಯಿ ದರೋಡೆ
Team Udayavani, Jun 10, 2018, 10:21 AM IST
ತುಮಕೂರು: ಕುಣಿಗಲ್ನ ಬಿದನಗೆರೆಯಲ್ಲಿ ದರೋಡೆಕೋರರು ಶನಿಮಹಾತ್ಮ ದೇವಾಲಯದ ಧರ್ಮದರ್ಶಿಯನ್ನು ಅಡ್ಡಗಟ್ಟಿ 20 ಲಕ್ಷ ರೂಪಾಯಿ ಮತ್ತು ಕಾರನ್ನು ದರೋಡೆಗೈದಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ವರದಿಯಾದಂತೆ ಕಾರಿನಲ್ಲಿ ತೆರಳುತ್ತಿದ್ದ ಧನಂಜಯ ಸ್ವಾಮೀಜಿ ಅವರನ್ನು ಅಡ್ಡಗಟ್ಟಿ ದ 6 ಮಂದಿ ದುಷ್ಕರ್ಮಿಗಳು ಕಣ್ಣಿಗೆ ರಾಸಾಯನಿಕ ಸಿಂಪಡಿಸಿ 20 ಲಕ್ಷ ರೂಪಾಯಿ ಹಣ ಮತ್ತು ಕಾರನ್ನು ದರೋಡೆಗೈದು ಪರಾರಿಯಾಗಿದ್ದಾರೆ.
ಸ್ವಾಮೀಜಿ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.