ಪುರಾತನ ಈಜುಕೊಳದ ಜಾಗ ಉಳಿಸಿ

ಸಾರ್ವಜನಿಕ ಈಜುಕೊಳ ಸಂರಕ್ಷಿಸುವಲ್ಲಿ ಪುರಸಭೆ ವಿಫ‌ಲ , ಕೋಟ್ಯಂತರ ಮೌಲ್ಯದ ಆಸ್ತಿ ಕೈ ತಪ್ಪುವ ಆತಂಕ

Team Udayavani, Feb 28, 2021, 3:21 PM IST

ಪುರಾತನ ಈಜುಕೊಳದ ಜಾಗ ಉಳಿಸಿ

ಮಧುಗಿರಿ: ಸ್ವತಂತ್ರ ಪೂರ್ವದಲ್ಲಿ ಗ್ರಾಮೀಣ ಕ್ರೀಡಾ ಉತ್ತೇಜನಕ್ಕಾಗಿ ನಿರ್ಮಿಸಿದ್ದ ಪುರಾತನ ಈಜುಕೊಳ,ಹಿಂದಿನ ಪುರಸಭೆಯಿಂದ ನಾಶವಾಗಿದೆ. ಆ ಜಾಗದಲ್ಲಿ ಮತ್ತೆ ಈಜುಕೊಳ ನಿರ್ಮಿಸದೆ ಪುರಸಭೆ ಕೋಟ್ಯಂತರ ಬೆಲೆ ಬಾಳುವ ಭೂಮಿಯನ್ನು ನಿರ್ಲಕ್ಷಿಸಿದೆ. ಇದರಿಂದ ಈಜುಕೊಳದ ಜಾಗ ಪುರಸಭೆ ಕೈ ತಪ್ಪಲು ಷಡ್ಯಂತ್ರ ನಡೆದಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಮಾಸ್ತಿ ವೆಂಕಟೇಶ ಅಯ್ನಾಂಗಾರ್‌ 1939ರಲ್ಲಿ ಮತ್ತೆ ತುಮಕೂರಿಗೆ ಜಿಲ್ಲಾಧಿಕಾರಿಯಾಗಿ ಬಂದ ನಂತರ, ಮಧುಗಿರಿಯ ನಂಟು ಉಳಿಸಲು ಪಟ್ಟಣದ ಆರಂಭದಲ್ಲೇ “ಪಬ್ಲಿಕ್‌ ಸ್ವಿಮ್ಮಿಂಗ್‌ ಪೂಲ್‌’ ಎಂದು ಸಾರ್ವಜನಿಕರ ಬಳಕೆಗೆ ಈಜುಕೊಳ ಸ್ಥಾಪಿಸಿ, ಮಧುಗಿರಿ ಇತಿಹಾಸಕ್ಕೆ ಸಾಕ್ಷಿ ನೀಡಿದರು. ಆದರೆ, ಕಳೆದ ಐದು ವರ್ಷ ಹಿಂದಿನ ಪುರಸಭೆ ಆಡಳಿತದಿಂದ ಪಾರಂಪಾರಿಕ ಪಟ್ಟಿಯಲ್ಲಿದ್ದ ಈಜುಕೊಳವನ್ನು ನಾಶಗೊಳಿಸಲು ಅಥವಾಪುನರ್‌ ನಿರ್ಮಿಸಲು, ಪುರಾತತ್ವ ಇಲಾಖೆಯಿಂದ ಅನುಮತಿ ಪಡೆಯದೆ ನೆಲಸಮಗೊಳಿಸಲಾಗಿದೆ.

ಶ್ಯಾನುಭೋಗ ಕುಟುಂಬದಿಂದ ಭೂಮಿ ದಾನ: ಮೈಸೂರು ಮಹಾರಾಜರ ಕಾಲದಲ್ಲಿ ಈ ಜಾಗವನ್ನು ಹಿಂದೆ ಪಟ್ಟಣದ ಶ್ಯಾನುಭೋಗ ಎಂ.ಪಿ.ಶಿವರಾಂ, ಎಂ.ಪಿ.ಸತೀಶ್‌, ಎಂ.ಪಿ.ಮಂಜುಳಾ ಕುಟುಂಬದ ಹಿರಿಯರಿಂದ ದಾನ ಪಡೆದು 1939ರಲ್ಲಿ ನಿರ್ಮಿಸಿದ್ದರು. ಅವರು ದಾನ ನೀಡುವಾಗ ಈ ಜಾಗದಲ್ಲಿ ಈಜುಕೊಳ ನಿರ್ಮಿಸಲು ಮಾತ್ರ ಒಪ್ಪಿದ್ದು, ಬೇರೆ ಉದ್ದೇಶಕ್ಕಾಗಿ ಬಳಸುವಂತಿಲ್ಲ. ಬಳಸಿದರೆ ಮತ್ತೆ ಆ ಜಾಗ ಕುಟುಂಬಕ್ಕೆ ವಾಪಸ್‌ ನೀಡುವಂತೆ ಬರೆದುಕೊಟ್ಟಿದ್ದರು ಎನ್ನಲಾಗಿದೆ. ಆದರೆ, ಹಿಂದಿನ ಪುರಸಭೆ ಆಡಳಿತ ಈಜುಕೊಳ ನಿರ್ಮಿಸದೆ, ವೃಥಾ ಕಾಲಹರಣ ನಡೆಸಿ ಮೂಲ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ಪುರಸಭೆಗೆ ಆಸ್ತಿ ತಪ್ಪಿಸುವ ಹುನ್ನಾರ ನಡೆಸಲಾಗಿತ್ತು ಎನ್ನಲಾಗಿದೆ.

ವಾಣಿಜ್ಯ ಮಳಿಗೆಗೆ ಸಿದ್ಧತೆ: ಕಳೆದ ಅವಧಿಯಲ್ಲಿ ಈಜುಕೊಳ ನೆಲಸಮಗೊಳಿಸಿದ ಪುರಸಭೆ, ಇಲ್ಲಿ ಮತ್ತೆ ಈಜುಕೊಳ ನಿರ್ಮಿಸುತ್ತೇವೆಂದು ತಿಳಿಸಿ ತಂತಿಬೇಲಿ ಹಾಕಿದ್ದರು. ಆಗ ಜಾಗದ ಮೂಲ ಮಾಲೀಕರು ಇಲ್ಲಿ ಬೇರೆ ಉದ್ದೇಶಕ್ಕೆ ಜಾಗ ಬಳಸುವಂತಿಲ್ಲ. ಬಳಸಿದರೆ, ನಾವು ಕೋರ್ಟ್‌ ಮೆಟ್ಟಿಲೇರುವುದಾಗಿ ಎಚ್ಚರಿಸಿದ್ದು,ಪುರಸಭೆ ಮೇಲೆ ನಂಬಿಕೆಯಿಲ್ಲದೆ ದಾವೆ ಹೂಡಿದ್ದಾರೆ. ಅದರಂತೆ ಪಟ್ಟಣದ ಹಿರಿಯ ಶ್ರೇಣಿ ನ್ಯಾಯಾಧೀಶ ಸಾಗರ ಗುರುಗೌಡ ಪಾಟೀಲ ಆದೇಶ ಹೊರಡಿಸಿದ್ದು,ಸ್ಥಳವನ್ನು ವಾಣಿಜ್ಯ ಹಾಗೂ ಇತರೆ ಉದ್ದೇಶಕ್ಕೆ ಬಳಕೆ ಮಾಡಬಾರದು. ಈಜುಕೊಳ ಮಾತ್ರ ನಿರ್ಮಿಸುವಂತೆ ಪ್ರತಿಬಂದಕಾಜ್ಞೆ ಹೊರಡಿಸಿದ್ದಾರೆ. ಆದರೆ, ಈ ಜಾಗ ದಲ್ಲಿ ವಾಣಿಜ್ಯ ಮಳಿಗೆ ನಿರ್ಮಿಸಲು ಪುರಸಭೆ ಚಿಂತಿಸಿದೆ ಎನ್ನಲಾಗಿದೆ.

ಈ ಸ್ಥಳದಲ್ಲಿ ಮಧುಗಿರಿ ಇತಿಹಾಸ ನೆನಪಿ ಸುವಂತೆ “ಸಾರ್ವಜನಿಕ ಈಜುಕೊಳ’ ನಿರ್ಮಿಸ ಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಈಜಲು ಹಣ ವಸೂಲಿ: ಸಾರ್ವಜನಿಕ ಈಜುಕೊಳಕ್ಕೆ ಮುಂದಾಗದ ಪುರಸಭೆ ಹಣ ಕೊಟ್ಟು ಈಜಲು ಪುರಸಭೆ ಆವರಣದಲ್ಲೇ ಕಳೆದ 5 ವರ್ಷದ ಹಿಂದೆಯೇ ಈಜುಕೊಳ ನಿರ್ಮಾಣ ಮಾಡಿದ್ದು, ಟೆಂಡರ್‌ ಕರೆಯದೆ ಹಣ ವಸೂಲಿಗೆ ಇಳಿದಿದೆ. ಯಾವುದೇ ಟಿಕೆಟ್‌ ನೀಡದೆ, ಹಣ ವಸೂಲಿ ಮಾಡಲಾಗುತ್ತಿದೆ. ನೂತನ ಅಧ್ಯಕ್ಷರು ಈ ಬಗ್ಗೆ ಗಮನ ಹರಿಸಿ, ಕ್ರಮವಹಿಸಬೇಕು ಎಂದು ತಿಳಿಸಿದೆ.

ಜಾಗವನ್ನು ಈಜುಕೊಳ ನಿರ್ಮಾಣಕ್ಕಾಗಿ ನೀಡಲಾಗಿದೆ. ನ್ಯಾಯಾಲಯದ ಯಾವುದೇ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ಹಿಂದಿನವರು ಜಾಗ ಕಬಳಿಸಲು ಹುನ್ನಾರ ನಡೆಸಿದ್ದು, ಈ ರೀತಿ ಆಗಲು ಬಿಡುವುದಿಲ್ಲ. ಈ ಜಾಗದಲ್ಲಿ ಈಜುಕೊಳ ನಿರ್ಮಿಸುವ ಬಗ್ಗೆ ತೀರ್ಮಾನ ಕೈಗೊಂಡು, ಜಾಗ ಉಳಿಸಿಕೊಳ್ಳಲಾಗುವುದು. ತಿಮ್ಮರಾಜು, ಪುರಸಭೆ ಅಧ್ಯಕ್ಷ, ಮಧುಗಿರಿ

ಈಜುಕೊಳದ ಜಾಗವನ್ನು ಯಾವುದೇ ವಾಣಿಜ್ಯ ಉದ್ದೇಶಕ್ಕೆ ಬಳಸುವಂತಿಲ್ಲ. ಸಾರ್ವಜನಿಕರ ಶಂಕೆಯಂತೆ ಯಾವುದೇ ಒಪ್ಪಂದಗಳಿಗೆ ಅವಕಾಶ ನೀಡಲ್ಲ. ಕಾನೂನಿನಡಿ ಅಧ್ಯಕ್ಷರು ಕೈಗೊಳ್ಳುವ ನಿರ್ಧಾರವನ್ನು ಅನುಮೋದಿಸುತ್ತೇನೆ. ಅಮರನಾರಾಯಣ್‌, ಸಿಒ, ಪುರಸಭೆ, ಮಧುಗಿರಿ

ಸಾರ್ವಜನಿಕ ಈಜುಕೊಳದಿಂದ ಉಚಿತವಾಗಿ ಗ್ರಾಮೀಣ ಭಾಗದ ಮಕ್ಕಳು ತಮ್ಮ ಈಜು ಪ್ರತಿಭೆ ಪ್ರದರ್ಶನಕ್ಕೆ ಅವಕಾಶವಿದೆ. ಹಿಂದಿನ ಪುರಸಭೆ ಆಡಳಿತದಂತೆ ಈಗಿನವರು ಈ ಆಸ್ತಿಯನ್ನು ನಿರ್ಲಕ್ಷವಹಿಸಿ ಕೈಬಿಟ್ಟರೇ, ಹೋರಾಟ ಕೈಗೊಳ್ಳಲಾಗುವುದು. ಕೇಬಲ್‌ ಸುಬ್ಬು, ಅಧ್ಯಕ್ಷರು, ಕನ್ನಡ ಗಡಿನಾಡು ರಕ್ಷಣಾವೇದಿಕೆ, ಮಧುಗಿರಿ

 

ಮಧುಗಿರಿ ಸತೀಶ್‌

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.