ದಶಕದ ಬಳಿಕ ಶಾಲೆ ಪುನಾರಂಭ


Team Udayavani, Sep 26, 2021, 6:51 PM IST

Untitled-1

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರು ಕ್ಲಸ್ಟರ್‌ ವ್ಯಾಪ್ತಿಯ ಯರೆಕಟ್ಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ 10 ವರ್ಷದ ನಂತರ ಈಗ ಪುನಾರಂಭವಾಗಿದೆ.

ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಪೋಷಕರು ಒಳಗಾಗಿ ತಮ್ಮ ಮಕ್ಕಳನ್ನು ದೂರದ ಕಾನ್ವೆಂಟ್‌ಗೆದಾಖಲಿಸಿದ್ದರು. ಪರಿಣಾಮ ಯರೆಕಟ್ಟೆ ಶಾಲೆಯಮಕ್ಕಳ ಸಂಖ್ಯೆ 2ಕ್ಕೆ ಕುಸಿದಿತ್ತು. ಮಕ್ಕಳ ದಾಖಲಾತಿ ಕ್ಷಿಣಿಸಿದೆ ಎಂಬ ನೆಪದಲ್ಲಿ 10 ವರ್ಷದ ಹಿಂದೆ ಶಾಲೆಯನ್ನು ಮುಚ್ಚಲಾಗಿತ್ತು. ಅಲ್ಲದೆ, ಶಾಲೆಯಲ್ಲಿ ದಾಖಲಾಗಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಪಕ್ಕದಬರಗೂರು ಸರ್ಕಾರಿ ಶಾಲೆಗೆ ವರ್ಗಾವಣೆಮಾಡಲಾಗಿತ್ತು. ಪರಿಣಾಮ ಪಕ್ಕದ ಊರಿಗೆ ನಡೆದುಕೊಂಡು ಹೋಗಿ ಶಿಕ್ಷಣ ಕಲಿಯುವ ಅನಿವಾರ್ಯತೆ ಸೃಷ್ಟಿಯಾಗಿತ್ತು.

ಪೋಷಕರ ಮನವೊಲಿಕೆ: ನಿತ್ಯ ಶಾಲೆಗೆ ಮಕ್ಕಳು ಹೋಗುವ ಕಷ್ಟವನ್ನು ನೋಡಲಾರದೆ ಯರೆಕಟ್ಟೆ ಗ್ರಾಮದ ಕೆಲವು ಯುವಕರು ಗ್ರಾಮದಲ್ಲಿ ಸಭೆ ನಡೆಸಿ ತಮ್ಮೂರಿನ ಶಾಲೆಯನ್ನು ಮತ್ತೆ ಪ್ರಾರಂಭಿ ಸುವ ಪಣತೊಟ್ಟರು. ಪೋಷಕರ ಮನೆಮನೆಗೆ ತೆರಳಿ ತಮ್ಮೂರ ಸರ್ಕಾರಿ ಶಾಲೆಗೆ ಮಕ್ಕಳನ್ನುದಾಖಲಿಸುವಂತೆ ಮನವೊಲಿಸುವ ಪ್ರಯತ್ನ ಸಹ ಮಾಡಿದರು. ಪರಿಣಾಮ 1ರಿಂದ 5ನೇ ತರಗತಿವರೆಗೆ 17 ವಿದ್ಯಾರ್ಥಿಗಳು ದಾಖಲಾದರು.

ಶಾಲೆಯಲ್ಲಿ ಮಕ್ಕಳ ಕಲರವ: ಶಾಲೆಯಲ್ಲಿ ದಾಖಲಾತಿ ಹೆಚ್ಚಿರುವುದರಿಂದ ಸಹಜವಾಗಿ ಶಿಕ್ಷಣ ಇಲಾಖೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಶಾಲೆ ಆರಂಭಕ್ಕೆ ಹಸಿರು ನಿಶಾನೆ ತೋರಿತು. ಹಾಗಾಗಿ, ಗ್ರಾಮಸ್ಥರ ಸಹಕಾರದೊಂದಿಗೆ ಶಾಲೆ ಪುನಾರಂಭಆಗಿದ್ದು ಹತ್ತು ವರ್ಷಗಳಿಂದ ಬಣಗೊಡುತ್ತಿದ್ದ ಶಾಲೆಯಲ್ಲಿ ಮಕ್ಕಳ ಕಲರವ ಶುರುವಾಗಿದೆ.

ಶಾಲೆಯ ಪುನಾರಂಭ ಸಂದರ್ಭದಲ್ಲಿ ಬರಗೂರು ಗ್ರಾಪಂ ಉಪಾಧ್ಯಕ್ಷೆ ದಿವ್ಯಾ, ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಜಿಲ್ಲಾ ಕಾರ್ಯದರ್ಶಿ ಬಿ.ಎನ್‌. ಮಂಜುನಾಥ್‌,ಯುವ ಹೋರಾಟಗಾರ ಯರೇಕಟ್ಟೆದೇವರಾಜ್‌, ಗ್ರಾಮದ ಹಿರಿಯ ನರಸಿಂಹಯ್ಯ, ಹಿರಿಯ ಹೋರಾಟಗಾರ ಇಂದ್ರಯ್ಯ,ಮಂಜುನಾಥ, ರಾಜು ಅರಸ್‌, ಬಿಆರ್‌ಸಿದುರ್ಗಯ್ಯ, ಸಿಆರ್‌ಪಿ ಕೆ.ಎಸ್‌.ನಾಗರಾಜು ಹಾಗೂ ಮತ್ತಿತರರು ಇದ್ದರು.

ಮುಚ್ಚಿರುವ ಶಾಲೆ ತರೆಯಲು ಯತ್ನ :  ಸಾರ್ವಜನಿಕರು ಸರ್ಕಾರಿ ಸವಲತ್ತು ಸದ್ಬಳಕೆ ಮಾಡಿಕೊಳ್ಳುವುದರಿಂದ ವಿನಃ ಕಾರಣ ಮಾಡುವ ಖರ್ಚು ಉಳಿಯುತ್ತದೆ. ಈ ಬಗ್ಗೆ ಯರೆಹಳ್ಳಿ ಪೋಷಕರಿಗೆ ಮನವರಿಕೆ ಮಾಡಿದಫಲ 10 ವರ್ಷದ ನಂತರ ಶಾಲೆ ಆರಂಭವಾಗಿದೆ. ಇದೇ ರೀತಿ ತಾಲೂಕಿನಲ್ಲಿ ಮುಚ್ಚಿರುವ ಶಾಲೆಗಳನ್ನು ಪುನಃ ಆರಂಭಿಸಲು ಶ್ರಮಿಸುತ್ತೇವೆ. ಅಲ್ಲದೆ, ಮುಚ್ಚಿದ ಶಾಲೆ ಆರಂಭಿಸಿರುವಶಿಕ್ಷಣ ಇಲಾಖೆಗೆ ಅಭಾರಿಯಾಗಿದ್ದೇನೆ ಎಂದುಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಜಿಲ್ಲಾ ಕಾರ್ಯದರ್ಶಿ ಬೆಳುಗುಲಿ ಮಂಜುನಾಥ್‌ ಹೇಳಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.