ಮನೆಗಳಿಗೆ ನುಗ್ಗಿದ ಚರಂಡಿ ನೀರು

ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಅಸಮರ್ಪಕ ಚರಂಡಿ ವ್ಯವಸ್ಥೆ • ಸಾರ್ವಜನಿಕರು ಹೈರಾಣ

Team Udayavani, Aug 10, 2019, 3:18 PM IST

tk-tdy-1

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಒಂದು ವಾರದಿಂದ ಸುರಿಯುತ್ತಿರುವ ಸೋನೆ ಮಳೆಗೆ ಬಿ.ಎಚ್ ರಸ್ತೆಯ ಬದಿಯಲ್ಲಿ ನೀರು ನಿಂತು ಪಾದಚಾರಿಗಳಿಗೆ ತೊಂದರೆಯಾಗುತ್ತಿದೆ. ಮಳೆ ನೀರು ಚರಂಡಿಗೆ ಹರಿಯುವ ವ್ಯವಸ್ಥೆ ಮಾಡದಿರುವುದರಿಂದ ಕೆಲವೊಮ್ಮೆ ವಾಹನಗಳು ರಸ್ತೆ ಬಿಟ್ಟು ಪಕ್ಕದಲ್ಲಿ ಸಂಚರಿಸುವುದರಿಂದ ಕೆಸರುಗದ್ದೆಯಾಗಿ ಪರಿಣಮಿಸಿದೆ.

ನೆಹರು ಸರ್ಕಲ್ನಿಂದ ಶೆಟ್ಟಿಕೆರೆ ಗೇಟ್, ರೋಟರಿ ಶಾಲೆ ರಸ್ತೆಯಲ್ಲಿನ ಎರಡು ಬದಿ ಮಳೆ ನೀರು ಶೇಖರಣೆಯಾಗಿದ್ದು, ಪಾದಚಾರಿಗಳು ನಡೆದುಕೊಂಡು ಹೋಗಲು ತೀವ್ರ ತೊಂದರೆಯಾಗಿದೆ. ನೂರಾರು ವಿದ್ಯಾರ್ಥಿಗಳು ದಿನನಿತ್ಯ ಇದೇ ರಸ್ತೆಯಲ್ಲಿ ಶಾಲಾ- ಕಾಲೇಜುಗಳಿಗೆ ಹೋಗುತ್ತಾರೆ. ವಾಹನಗಳು ಪಕ್ಕದಲ್ಲೇ ಸಂಚರಿಸುವಾಗ ಕೆಸರು ಸಿಡಿದು ಬಟ್ಟೆಯ ಮೇಲಾಗುತ್ತದೆ. ವಾಹನಗಳು ಬಂದರೆ ಕೆಸರು ಸಿಡಿಯುವುದರಿಂದ ರಕ್ಷಿಸಿಕೊಳ್ಳಲು ಓಡುವ ಸ್ಥಿತಿ ಇದೆ. ಪಟ್ಟಣ ವ್ಯಾಪ್ತಿಯಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿರದಿರುವುದರಿಂದ ಮಳೆ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡದಿರುವುದರಿಂದ ಸಮಸ್ಯೆ ಸೃಷ್ಟಿಯಾಗಿದೆ.

ಚರಂಡಿಗೆ ನೀರು ಹೋಗದೆ ಸಮಸ್ಯೆ: ಬಿ.ಎಚ್. ರಸ್ತೆ ಬದಿಯಲ್ಲಿನ ಚರಂಡಿಗೆ ಮಳೆ ನೀರು ಸರಾಗವಾಗಿ ಹರಿಯಲು ಕಾಲುವೆ ಮಾಡದ ಕಾರಣ ಮಳೆ ನೀರು ರಸ್ತೆ ಪಕ್ಕ ನಿಂತುಕೊಳ್ಳುತ್ತಿದೆ. ದಿನನಿತ್ಯ ರಸ್ತೆಗೆ ಹಾಗೂ ಪುರಸಭೆಗೆ ಸಂಬಂಧಿಸಿದ ಅಧಿಕಾರಿಗಳು ಇದೇ ಮಾರ್ಗವಾಗಿ ಓಡಾಡುತ್ತಿದ್ದರೂ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಂಡಿಲ್ಲ. ಮಳೆ ನೀರು ಚರಂಡಿಗೆ ಹೋಗುವಂತೆ ವ್ಯವಸ್ಥೆ ಮಾಡದ ಕಾರಣ ಸಾವಿರಾರು ಜನರಿಗೆ ತೊಂದರೆಯಾಗಿದೆ. ಪಟ್ಟಣದ ನಿರ್ವಹಣೆ ಹೊತ್ತಿರುವ ಪುರಸಭೆ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸೋನೆ ಮಳೆ ಬಂದರೆ ಸಾಕು ಮಾರುತಿ ನಗರದ ತಗ್ಗು ಪ್ರದೇಶದಲ್ಲಿರುವ ಗ್ರ್ಯಾಂಟ್ ಮನೆಗಳು ಸೇರಿ 15ರಿಂದ 20 ಮನೆಗಳಿಗೆ ನೀರು ನುಗ್ಗುತ್ತಿದೆ.

ದುರ್ಗಮ್ಮನಗುಡಿ ಬೀದಿ, ಆಚಾರ್‌ ಬೀದಿ, ಲಿಂಗಾಯತರ ಬೀದಿ, ಮಸೀದಿ ಬೀದಿಯಲ್ಲಿ ಬೀಳುವ ಮಳೆ ನೀರು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮನೆಗಳಿಗೆ ನುಗ್ಗುತ್ತದೆ. ಸಮಸ್ಯೆ ದಶಕಗಳಿಂದ ಇದೆ. ಜೋರು ಮಳೆ ಬಂದರಂತೂ ಬಡವರ ಪಾಡು ಹೇಳತೀರದು. ರಾತ್ರಿ ವೇಳೆ ಮಳೆ ಬಂದರೆ ಜಾಗರಣೆ ಅನಿವಾರ್ಯ. ಮಳೆಯ ನೀರು ಬಂದರೆ ಸಹಿಸಿಕೊಳ್ಳಬಹುದು. ಆದರೆ ತ್ಯಾಜ್ಯ ಹರಿದು ಬರುವುದರಿಂದ ದುರ್ನಾತ ಬೀರುತ್ತದೆ.

ಒಮ್ಮೆ ಮನೆ ಒಳಗೆ ನುಗ್ಗಿದರೆ ಒಂದು ವಾರ ಫಿನಾಯಿಲ್ ಹಾಕಿ ತೊಳೆದರೂ ವಾಸನೆ ಹೋಗುವುದಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿ ಹರೀಶ್‌.

ಈ ಹಿಂದೆ ಗ್ರಾಪಂ ಇದ್ದಾಗ ಅನೇಕ ಸಲ ದೂರು ನೀಡಲಾಗಿದ್ದರೂ ಸ್ಪಂದಿಸಿಲ್ಲ. ಜೋರಾಗಿ ಮಳೆ ಬಂದರೆ ಮನೆ ಕುಸಿಯುವ ಆತಂಕದಲ್ಲಿ ದಿನ ಕಳೆಯುತ್ತಾರೆ. ಇನ್ನಾದರೂ ಅಧಿಕಾರಿಗಳು ಗಮನಹರಿಸಬೇಕಿದೆ.

 

● ಚೇತನ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.