ಕಲ್ಪತರು ನಾಡಿನಲ್ಲಿ ಶಿವ ನಾಮಸ್ಮರಣೆ


Team Udayavani, Mar 5, 2019, 7:45 AM IST

kalpatru.jpg

ತುಮಕೂರು: ಶಿವನ ಭಜನೆಯೊಂದಿಗೆ ಜಿಲ್ಲಾದ್ಯಂತ ಸೋಮವಾರ ಸಡಗರ ಸಂಭ್ರಮದಿಂದ ಭಕ್ತರು ಮಹಾಶಿವರಾತ್ರಿ ಹಬ್ಬ ಆಚರಿಸಿದರು.

ಮಹಾಶಿವರಾತ್ರಿ ಅಂಗವಾಗಿ ಸೋಮವಾರ ನಗರಾದ್ಯಂತ ಎಲ್ಲೆಡೆ ಸಡಗರ ಸಂಭ್ರಮ ಎಲ್ಲಾ ದೇವಾಲಯಗಳಲ್ಲೂ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ಬೆಳಗ್ಗೆಯಿಂದಲೇ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಏರ್ಪಡಿಸಿದ್ದರಿಂದ ಸಾವಿರಾರು ಭಕ್ತರು ದೇವಾಲಯಗಳಿಗೆ ತೆರಳಿ ಸಾಮೂಹಿಕ ಅಭಿಷೇಕ ಅರ್ಚನೆಗಳಲ್ಲಿ ಭಾಗವಹಿಸುತ್ತಿದ್ದರು.

ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ: ನಗರದ ಬಿಎಚ್‌ ರಸ್ತೆಯಲ್ಲಿರುವ ಐತಿಹಾಸಿಕ ಪ್ರಸಿದ್ಧ ಸೋಮೇಶ್ವರ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಸಾಮೂಹಿಕ ಅಭಿಷೇಕ ಕಾರ್ಯಕ್ರಮಗಳು ನಿರಂತರವಾಗಿ ನಡೆದವು. ಸಾವಿರಾರು ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡಿ ಶಿವಲಿಂಗಗಳ ಮೇಲೆ ಜಲಾಭಿಷೇಕ, ಹಾಲಿನ ಅಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿವಿಧ ಅರ್ಚನೆಗಳನ್ನು ಮಾಡುವ ಮೂಲಕ ದೇವರಲ್ಲಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. 

ವಿಶೇಷ ಪೂಜೆ:ಬನಶಂಕರಿ ನಗರದ ಈಶ್ವರ ದೇವಾಲಯದಲ್ಲಿ ಪಂಚಮುಖೀ ಈಶ್ವರನನ್ನು ಪ್ರತಿಷ್ಠಾಪಿಸಿ ಸಾವಿರಾರು ಭಕ್ತರು ಸಾಮೂಹಿಕ ಪೂಜೆ ಸಲ್ಲಿಸಿದರು. ಟಿಜಿಎಂಸಿ ಬ್ಯಾಂಕ್‌ ಆವರಣದ ಮಹಾಲಕ್ಷ್ಮೀ ದೇವಾಲಯದಲ್ಲಿ ಶಿವನ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಭಕ್ತರಿಗೆ ತಂಬಿಟ್ಟು ಪ್ರಸಾದ ವಿತರಣೆ ಮಾಡಲಾಗಿತ್ತು.

ವಾಸವಿ ದೇವಾಲಯದಲ್ಲಿ, ಹೊರಪೇಟೆ ನೀಲಕಂಠಸ್ವಾಮಿ ದೇವಾಲಯದಲ್ಲಿ, ಮಹಾಗಣಪತಿ ನವಗ್ರಹ ದೇವಾಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ಮಹಾಶಿವರಾತ್ರಿ ಪೂಜೆಗಳು ನಡೆದವು. ನಗರದ ಡಾ.ರಾಧಾಕೃಷ್ಣ ರಸ್ತೆಯ ಭದ್ರಮ್ಮ ಛತ್ರದ ಹಿಂಭಾಗದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ಮಹಾವಿದ್ಯಾಲಯದ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ಪಂಚಲಿಂಗ ದರ್ಶನದ ಮೆರವಣಿಗೆಯು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.

ನಗರದ ಕುಣಿಗಲ್‌ ರಸ್ತೆಯ ಬನಶಂಕರಿಯಲ್ಲಿನ ಮಳೆ ಬಸವಣ್ಣ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ಪಂಚಲಿಂಗ ದರ್ಶನ, ಬಸವನ ಮೇಲೆ ಕುಳಿತ ಶಿವ ಹಾಗೂ ದೇವಾಲಯದ ಆವರಣದಲ್ಲಿರುವ ಬೃಹತ್‌ ಶಿವನ ಪ್ರತಿಮೆಗೆ ವಿಶೇಷ ಅಲಂಕಾರ ಹಾಗೂ ಪೂಜೆ ಏರ್ಪಡಿಸಲಾಗಿತ್ತು. ಸಾವಿರಾರು ಭಕ್ತರು ದೇವಾಲಯಕ್ಕೆ ತೆರಳಿ ಶಿವನ ದರ್ಶನ ಪಡೆದರು.

ತಾಲೂಕಿನ ಐತಿಹಾಸಿಕ ಪ್ರಸಿದ್ಧ ಅರೆಯೂರು ವೈದ್ಯನಾಥೇಶ್ವರ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ವೈದ್ಯನಾಥೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ರಥೋತ್ಸವ ವೈಭವಯುತವಾಗಿ ನಡೆಯಿತು. ತಾಲೂಕಿನ ಹಾಲನೂರಿನಲ್ಲಿರುವ ಮಲ್ಲಿಕಾರ್ಜುನಸ್ವಾಮಿಯ ಉತ್ಸವವು ವೈಭವಯುತವಾಗಿ ನಡೆಯಿತು. ನಂಜುಂಡ ಶಿವಯೋಗಿಗಗಳ ಗದ್ದುಗೆಯ ಬಳಿ ಆಗಮಿಸಿ ಅಲ್ಲಿ ಸ್ವಾಮಿ ಗದ್ದುಗೆ ಮೇಲೆ ಸ್ಥಾಪಿಸಿ ಶಿವಲಿಂಗಕ್ಕೆ ಹಾಗೂ ಗಣಪತಿ ಮತ್ತು ನವಗ್ರಹಗಳಿಗೆ ರುದ್ರಾಭಿಷೇಕ, ಸಹಸ್ರನಾಮ ಪೂಜೆ, ಮಹಾಮಂಗಳಾರತಿ ಜರುಗಿತು.

ನಗರದ ಜಯಪುರ ಬಡಾವಣೆಯಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಲಕ್ಷ್ಮೀದೇವಿ ದೇವಾಲಯದಲ್ಲಿ ಗಂಗಾಧರೇಶ್ವರಸ್ವಾಮಿ ಉತ್ಸವ ಮೆರವಣಿಗೆ ಮೂಲಕ ನಡೆಯಿತು. ನಗರದ ಸಿದ್ದರಾಮೇಶ್ವರ ಬಡಾವಣೆ ಶಿವಸುಬ್ರಮಣ್ಯ ಗಣಪತಿ ದೇವಾಲಯದಲ್ಲಿ ಕೈಲಾಸ ಪರ್ವತದ ಪ್ರತಿರೂಪ ಹಾಗೂ 12 ಅಡಿ ಎತ್ತರದ ಶಿವಲಿಂಗ ಪ್ರತಿಷ್ಠಾಪನೆ ಮಾಡಲಾಗಿದ್ದು, ಭಕ್ತರು ದೇವರ ದರ್ಶನ ಪಡೆದರು.

ಉಪ್ಪಾರಹಳ್ಳಿಯ ಶಿವಲಿಂಗ ರಸ್ತೆಯಲ್ಲಿರುವ ಮಹಾಲಿಂಗೇಶ್ವರಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಕುಂಭಾಭಿಷೇಕ ಮತ್ತು ಕ್ಷೀರಾಭಿಷೇಕವನ್ನು ಹಮ್ಮಿಕೊಳ್ಳಲಾಗಿತ್ತು. ಇದಲ್ಲದೆ ಜಿಲ್ಲಾದ್ಯಂತ ಎಲ್ಲಾ ಶಿವ ದೇವಾಲಯಗಳಲ್ಲೂ ವಿಶೇಷ ಪೂಜೆ ಪ್ರಾರ್ಥನೆಗಳು ನಡೆದವು. ಸಿದ್ಧಗಂಗಾ ಮಠದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಕ್ಷೇತ್ರನಾಥ ಸಿದ್ಧಲಿಂಗೇಶ್ವರ ಸ್ವಾಮಿಯವರಿಗೆ ವಿಶೇಷ ಪೂಜೆ ಉತ್ಸವಗಳು ಜರುಗಿದವು.

ಬಿಲ್ವಪತ್ರೆ ಎಳನೀರು ಅಭಿಷೇಕ: ಶಿವನಿಗೆ ಪ್ರಿಯವಾದ ಬಿಲ್ವಪತ್ರೆಯಾಗಿದ್ದು, ಮಹಾಶಿವರಾತ್ರಿಯ ದಿನದಂದು ಶಿವಲಿಂಗಕ್ಕೆ ಬಿಲ್ವಾರ್ಚನೆ ಮಾಡಿ ಎಳನೀರ ಹಾಲಾಭಿಷೇಕ ಮಾಡಿದರೆ ಪುಣ್ಯಪ್ರಾಪ್ತಿ ದೊರೆಯುತ್ತದೆ ಎನ್ನುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲೂ ಅಪಾರ ಸಂಖ್ಯೆಯ ಭಕ್ತರು ಸರದಿಯಲ್ಲಿ ನಿಂತು ಶಿವನಿಗೆ ಬಿಲ್ವಾರ್ಚನೆ ಹಾಗೂ ಸಾಮೂಹಿಕ ಅಭಿಷೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶಿವನ ದರ್ಶನ ಪಡೆದರು.

ಯಡಿಯೂರಿನ ಪ್ರಸಿದ್ಧ ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಅಭಿಷೇಕಗಳು ನಡೆದವು. ಮಧುಗಿರಿಯ ಪ್ರಸಿದ್ಧ ಮಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಅಂಗವಾಗಿ ರುದ್ರಾಭಿಷೇಕ ಹಾಗೂ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಚಿ.ನಾ.ಹಳ್ಳಿ ತಾಲೂಕಿನ ವಜ್ರದ ರಾಮೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಜಿಲ್ಲಾದ್ಯಂತ ಬರ ಹಾಗೂ ಬಿಸಿಲಿನ ನಡುವೆಯೂ ಮಹಾಶಿವರಾತ್ರಿ ಸಡಗರ ಸಂಭ್ರಮದಿಂದಲೇ ಆಚರಣೆ ಮಾಡಲಾಯಿತು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.