ಹಳ್ಳಿಗಳಲ್ಲಿಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ


Team Udayavani, Sep 25, 2020, 3:49 PM IST

ಹಳ್ಳಿಗಳಲ್ಲಿಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ

ಸಾಂದರ್ಭಿಕ ಚಿತ್ರ

ತಿಪಟೂರು: ತಾಲೂಕಾದ್ಯಂತ ಹಳ್ಳಿಗಳೆಲ್ಲೆಲ್ಲಾ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಕ್ರಮಕೈಗೊಳ್ಳ ಅಬಕಾರಿ ಹಾಗೂ ಪೊಲೀಸ್‌ ಅಧಿಕಾರಿಗಳ ವಿರುದ್ಧ ತಾಲೂಕಿನ ಬಹುತೇಕ ಮಹಿಳಾ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ 7-8 ತಿಂಗಳುಗಳಿಂದ ಕೋವಿಡ್‌-19ನಿಂದ ಬದುಕು ನಡೆಸುವುದೇ ದುಸ್ತರವಾಗಿರುವ ಇಂಥ ವೇಳೆ ಒಂದೊಂದು ಗ್ರಾಮದಲ್ಲಿ ಎರಡು-ಮೂರು ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರುತ್ತಿರುವುದರಿಂದ ಬಡ ಹಾಗೂ ಮಧ್ಯಮ ಕುಟುಂಬಗಳು ಬೀದಿ ಪಾಲಾಗುತ್ತಿರುವ ಬಗ್ಗೆ ಅಬಕಾರಿ, ಪೊಲೀಸ್‌ ಇಲಾಖೆಗಳಿಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಳ್ಳದಿರುವುದನ್ನು ನೋಡಿದರೆ ಅಧಿಕಾರಿಗಳೇ ಅಕ್ರಮ ಮಾರಾಟಗಾರರಿಗೆ ಶಾಮೀಲಾಗಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

ಎಣ್ಣೆ ದಾಸರಾಗುತ್ತಿರುವ ಯುವಕರು, ವಿದ್ಯಾರ್ಥಿಗಳು: ಹಳ್ಳಿಗಳಲ್ಲೂ ಮದ್ಯ ಸಿಗುತ್ತಿರುವುದರಿಂದ ಹಳ್ಳಿಗಳಲ್ಲಿರುವ ಯುವಜನತೆ, ವಿದ್ಯಾರ್ಥಿಗಳು ಸಹ ಕುಡಿತದ ದಾಸರಾಗುತ್ತಿದ್ದಾರೆ. ಇನ್ನೂ ಕೆಲವರು ಕೂಲಿ ಮಾಡುವವರಿಗೆ, ಯುವಕರಿಗೆ ಕೇವಲ ಎಣ್ಣೆ (ಮದ್ಯ) ಕುಡಿಸಿ ಕೆಲಸಗಳನ್ನು ಮಾಡಿಸಿಕೊಳ್ಳುತ್ತಿರುವುದುಕಂಡುಬರುತ್ತಿದ್ದುಇದರಿಂದಲೂ ಕುಡಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಹಳ್ಳಿಗಳಲ್ಲಿ ಯಾರೇ ಕೆಲಸಕ್ಕೆ ಕರೆದರೂ ಸಂಜೆಗೆ ಎಣ್ಣೆ ಹಾಕಿಸುತ್ತೀರಾ ಎಂದು ಕೇಳುವಂತಾಗಿದೆ. ಸಣ್ಣಪುಟ್ಟ ಸಮಾರಂಭಗಳಿದ್ದರೂ ಹಳ್ಳಿಗಳಲ್ಲಿ ಯುವಕರಿಗೆ ಎಣ್ಣೆ ಪಾರ್ಟಿ ಮಾಡಿಸಲೇ ಬೇಕು ಎಂಬ ಮಟ್ಟಿಗೆ ಎಣ್ಣೆ ಮಾರಾಟವಾಗುತ್ತಿದ್ದು ಬದುಕಿ ಬಾಳಬೇಕಾದ ಯುವಜನತೆ, ವಿದ್ಯಾರ್ಥಿಗಳೂ ದಿಕ್ಕು ತಪ್ಪುವಂತಾಗಿದೆ. ದಿನದಿಂದ ದಿನಕ್ಕೆ ಕುಡುಕರ ಹಾವಳಿ ಹೆಚ್ಚಾಗುತ್ತಿದ್ದು, ಸಂಜೆಯಾದರೆ ಸಾಕು ಕುಡಿದ ಅಮಲಿನಲ್ಲಿ ಅವಾಚ್ಯ ಶಬ್ದಗಳಿಂದ ಮಾತನಾಡಿ ಗಲಾಟೆ ಮಾಡಿಕೊಳ್ಳುತ್ತಾರೆ. ಇದರಿಂದಮಹಿಳೆಯರುಮತ್ತುಮಕ್ಕಳು ಗ್ರಾಮದಬೀದಿಗಳಲ್ಲಿ ಓಡಾಡದಂತಾಗಿದೆ. ಹಳ್ಳಿಗಳಲ್ಲಿ ಎಣ್ಣೆ ಮಾರುವವರಿಗೆ ಸಾರ್ವಜನಿಕರು, ಮಹಿಳೆಯರು ಎಣ್ಣೆ ಮಾರಕೂಡದು. ಮಾರಿದ್ರೆ ದೂರು ನೀಡುತ್ತೇವೆಂದು ಹೆದರಿಸಿದರೂ ಮಾರಾಟಗಾರರು ಯಾರಿಗೆ ದೂರು ನೀಡುತ್ತೀರೋ ನೀಡಿ ಎಂದು ಬೆದರಿಕೆ ಹಾಕುತ್ತಾರೆ ಎಂದುಮಹಿಳೆಯರು ದೂರುತ್ತಿದ್ದಾರೆ.

ದುಪ್ಪಟ್ಟು ಹಣಕ್ಕೆ ಮಾರಾಟ: ಎಂಎಸ್‌ಐಎಲ್‌ ಮಳಿಗೆಯಲ್ಲಿ ಮಾರಾಟವಾಗುವ ಒಂದು ಪ್ಯಾಕೆಟ್‌ಗೆ 35 ರೂ. ಇದ್ದರೆ ಹಳ್ಳಿಗಳಲ್ಲಿ ಅಕ್ರಮವಾಗಿ 55 ರಿಂದ60 ರೂ. ತನಕ ಇದೆ, ಮನೆ ಮುಂದೆ, ಗ್ರಾಮಗಳಲ್ಲಿಯೇ ಸಿಗುತ್ತಲ್ಲ ಎಂಬ ಕೆಟ್ಟ ಮನೋಭಾವನೆಯಿಂದ ಕುಡಿತದ ಚಟಗಾರರು ಡಬಲ್‌ ಬೆಲೆ ನೀಡಿ ಕುಡಿಯುತ್ತಿದ್ದು ದುಡಿದ ಹಣವನ್ನೆಲ್ಲಾ ಎಣ್ಣೆ ಪಾಲು ಮಾಡಿಕೊಳ್ಳುವ ಮೂಲಕ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗುತ್ತಿದ್ದಾರೆ.

ಹಳ್ಳಿಗಳನ್ನು ಉಳಿಸಿಕೊಡಿ: ತಾಲೂಕಿನ ಬಹುತೇಕ ಹಳ್ಳಿಗಳಲ್ಲಿನ ಈ ದಂಧೆಯನ್ನು ಕೂಡಲೇ ಜಿಲ್ಲಾ ಹಾಗೂ ತಾಲೂಕು ಅಬಕಾರಿ ಅಧಿಕಾರಿಗಳ ಮೇಲೆ ಹಾಗೂ ಅಕ್ರಮ ಮದ್ಯದಂಗಡಿ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಂಡು ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟ ದಂಧೆಯನ್ನು ನಿಲ್ಲಿಸುವ ಮೂಲಕ ಹಳ್ಳಿಗಳಲ್ಲಿನ ನೆಮ್ಮದಿ, ಯುವಜನತೆಯನ್ನು ರಕ್ಷಿಸಬೇಕೆಂದು ಮಹಿಳಾ ಸಂಘಟನೆಯವರು ಒತ್ತಾಯಿಸಿದ್ದಾರೆ.

ನ‌ಗರ ಅಥವಾ ಹಳ್ಳಿಗಳಲ್ಲಿ ಪರವಾನಿಗೆ ಇಲ್ಲದೆ ಮದ್ಯ ಮಾರಾಟ ಮಾಡುವುದು ಅಪರಾಧ. ತಾಲೂಕಿನ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟನಡೆಯುತ್ತಿರುವ ವಿಷಯಇಲಾಖೆ ಗಮನಕ್ಕೂ ಬಂದಿದೆ. ದೂರುಗಳುಬಂದಕಡೆ ಭೇಟಿನೀಡಿಕೆಲಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಮುಂದೆಯೂ ದೂರು ಬಂದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಎಸ್‌ಐ, ಅಬಕಾರಿ ಇಲಾಖೆ, ತಿಪಟೂರು

 

ಬಿ.ರಂಗಸ್ವಾಮಿ, ತಿಪಟೂರು

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.