ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರ
Team Udayavani, Jan 12, 2019, 12:40 AM IST
ತುಮಕೂರು: ಸರ್ಕಾರದ ನಿರ್ದೇಶನದಂತೆ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ನೇತೃತ್ವದ ನುರಿತ ವೈದ್ಯರ ತಂಡ ಶುಕ್ರವಾರ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಆರೋಗ್ಯದ ತಪಾಸಣೆ ನಡೆಸಿತು.
ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಯವರಿಗೆ ಗುರುವಾರ ಕರೆ ಮಾಡಿ ಹಿರಿಯ ಶ್ರೀಗಳ ಆರೋಗ್ಯ ವಿಚಾರಿಸಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ನುರಿತ ವೈದ್ಯರ ತಂಡವನ್ನು ಶ್ರೀಗಳ ತಪಾಸಣೆಗಾಗಿ ಕಳುಹಿಸುವುದಾಗಿ ಹೇಳಿದ್ದರು. ಅದರಂತೆ ಶುಕ್ರವಾರ ಬೆಂಗಳೂರಿನ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ನೇತೃತ್ವದ ಐವರು ವೈದ್ಯರ ತಂಡ ಸಿದ್ಧಗಂಗಾ ಆಸ್ಪತ್ರೆಗೆ ಆಗಮಿಸಿ, ಶ್ರೀಗಳ ಆರೋಗ್ಯ ತಪಾಸಣೆ ನಡೆಸಿತು.
ಕಾರ್ಡಿಯಾಲಾಜಿಸ್ಟ್ ಡಾ.ರವೀಂದ್ರನಾಥ್, ಕಿದ್ವಾಯಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ರವಿ ಅರ್ಜುನ್, ಜಯದೇವ ಆಸ್ಪತ್ರೆ ಅರವಳಿಕೆ ತಜ್ಞ ಡಾ.ಮಂಜುನಾಥ್, ಚೆಸ್ಟ್ ಫಿಜಿಶಿಯನ್ ಡಾ.ನಾಗರಾಜು ತಂಡದಲ್ಲಿದ್ದರು. ತಪಾಸಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್, ಶ್ರೀಗಳ ಶಕ್ತಿ ಕ್ಷೀಣಿಸಿದ್ದು, ಸ್ವಂತ ಉಸಿರಾಟದ ಶಕ್ತಿಯ ಕೊರತೆ ಇದೆ. ಶ್ರೀಗಳು ಕಣ್ಣು ಬಿಟ್ಟು ನೋಡುತ್ತಿರುವುದನ್ನು ನೋಡಿದರೆ ಅವರಿಗೆ ಗುಣವಾಗುತ್ತೆ ಎನ್ನುವ ಆಶಾಭಾವನೆ ಇದೆ. ಶ್ರೀಗಳ ದೇಹದಲ್ಲಿ ಪ್ರೋಟಿನ್ ಅಂಶ ಏರಿಕೆಯಾಗಿದ್ದು, ಸೋಂಕು ಸಹ ಕಡಿಮೆಯಾಗಿದೆ. ಅವರ ಬೆನ್ನು ಬಾಗಿರುವ ಹಿನ್ನೆಲೆಯಲ್ಲಿ ಲಂಗ್ಸ್ ಮೇಲೆ ಪರಿಣಾಮ ಬೀರುತ್ತಿದ್ದು, ಎಲ್ಲಾ ಸುಸಜ್ಜಿತ ವ್ಯವಸ್ಥೆ ಇರುವ ಸಿದ್ಧಗಂಗಾ ಆಸ್ಪತ್ರೆಯಲ್ಲಿಯೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ