ಮೂಲಸೌಲಭ್ಯಕ್ಕೆ ಆಗ್ರಹಿಸಿ ಹುಳಿಯಾರು ಪಪಂ ಮುತ್ತಿಗೆ


Team Udayavani, Nov 6, 2019, 4:18 PM IST

tk-tdy-2

ಹುಳಿಯಾರು: ಪಟ್ಟಣ ಪಂಚಾಯ್ತಿ ವ್ಯಾಪ್ತಿ ಯಲ್ಲಿದ್ದರೂ ಗ್ರಾಮಕ್ಕೆ ಯಾವುದೇ ಮೂಲಭೂತ ಸೌಕರ್ಯ ಕಲ್ಪಿಸಿಲ್ಲವೆಂದು ರೊಚ್ಚಿಗೆದ್ದ ಲಿಂಗಪ್ಪನ ಪಾಳ್ಯದ ನಿವಾಸಿಗಳು ಹುಳಿಯಾರು ಪಪಂಗೆ ಮುತ್ತಿಗೆ ಹಾಕಿದ ಪ್ರಸಂಗ ಮಂಗಳವಾರ ನಡೆಯಿತು.

ಲಿಂಗಪ್ಪನ ಪಾಳ್ಯದ ಸಮಸ್ಯೆ ಬಗ್ಗೆ ಕಳೆದ ಹಲವಾರು ತಿಂಗಳಿನಿಂದಲೂ ಹುಳಿಯಾರು ಪಪಂ ಮುಖ್ಯಾಧಿಕಾರಿಗಳ ಗಮನಕ್ಕೆ ತಂದರೂ ಪಂಚಾ ಯಿತಿಯವರ ನಿರ್ಲಕ್ಷ್ಯ ಧೋರಣೆ ಯಿಂದಾಗಿ ಸಮಸ್ಯೆ ಬಗೆಹರಿದಿರಲಿಲ್ಲ. ಗ್ರಾಮಸ್ಥರು ಕೊಟ್ಟ ಮನವಿಗೆ ಉತ್ತರ ಬಾರದಿದ್ದರಿಂದ ಸೋಮವಾರ ಸಂಜೆ ಗ್ರಾಮದಲ್ಲಿ ಟಾಂಟಾಂ ಹಾಕಿಸಿ ಮನೆ ಗೊಬ್ಬರಂತೆ ಆಗಮಿಸಿ ಪಂಚಾಯ್ತಿ ಮುತ್ತಿಗೆ ಕಾರ್ಯಕ್ರಮಕ್ಕೆ ಆಗಮಿಸುವಂತೆಯೂ, ತಪ್ಪಿದರೆ ದಂಡ ವಿಧಿಸಲಾಗುವುದು ಎಂದು ಸಾರಿಸಿದರು.

ಅಸಮಾಧಾನ: ಮಂಗಳವಾರ ಗ್ರಾಮದ ಪ್ರತಿ ಯೊಬ್ಬರೂ ಅದರಲ್ಲೂ ವಿಶೇಷವಾಗಿ ಮಹಿಳೆ ಯರು ಹುಳಿಯಾರು ಪಪಂಗೆ ಆಗಮಿಸಿ ಅಧಿ ಕಾರಿಗಳ ಧೋರಣೆ ವಿರುದ್ಧ ಪ್ರತಿಭಟಿಸಿದರು. ಆದರೆ, ಸಂತ್ರಸ್ತರ ಸಮಸ್ಯೆ ಆಲಿಸಲು ಯಾವೊಬ್ಬ ಅಧಿಕಾರಿಯೂ ಇರದಿದ್ದರಿಂದ ರೊಚ್ಚಿಗೆದ್ದು ಒಂದು ಸಮಯದಲ್ಲಿ ಬೀಗ ಹಾಕಲು ಮುಂದಾದರು. ಸ್ಥಳದಲ್ಲಿಯೇ ಇದ್ದ ಪೊಲೀಸರು ಸಮಾಧಾನಪಡಿಸಿ ಪಪಂ ಆಡಳಿತಾಧಿಕಾರಿಯಾದ ತಹಶೀಲ್ದಾರ್‌ ಅವರಿಗೂ ಫೋನಾಯಿಸಿದರು. ಗಂಟೆಗಟ್ಟಲೆ ಮುತ್ತಿಗೆ ಹಾಕಿದರೂ ಯಾರೊಬ್ಬರೂ ಸಮಸ್ಯೆ ಆಲಿಸದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಪಂಚಾಯ್ತಿ ಮಾಜಿ ಸದಸ್ಯ ಜಯಣ್ಣ ಮಾತನಾಡಿ, ಲಿಂಗಪ್ಪನಪಾಳ್ಯ ಹುಳಿಯಾರಿಗೆ ಕೇವಲ 2 ಕಿಲೋಮೀಟರ್‌ ಸನಿಹದಲ್ಲೇ ಇದ್ದರೂ ಯಾವುದೇ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ. ಶುದ್ಧ ನೀರಿನ ಘಟಕ ಕೆಟ್ಟು ನಿಂತಿದ್ದು ನೀರಿಗಾಗಿ ಬೇರೆ ಊರಿಗೆ ಹೋಗಿ ತರುವಂತಾಗಿದೆ ಎಂದು ಆರೋಪಿಸಿದರು.

ಮನಸೋ ಇಚ್ಛೆ ಮನೆ ಕಂದಾಯ ನಿಗದಿ: ಸೊಸೈಟಿ ನಾಗರಾಜು ಮಾತನಾಡಿ, ರಸ್ತೆಯುದ್ದಕ್ಕೂ ಕಂಬ ಗಳಿದ್ದರೂ ಬೀದಿದೀಪಗಳು ಬೆಳಗುತ್ತಿಲ್ಲ. ಸಂಜೆ 7ರ ಸುಮಾರಿಗೆ ಇಡೀ ಗ್ರಾಮವೇ ಕಗ್ಗತ್ತಲಿನಿಂದ ಕೂಡಿರುತ್ತದೆ. ಈ ಬಗ್ಗೆ ಕೇಳಿದರೆ ನಿಮ್ಮ ಊರಿನ ಕಂದಾಯ ಲಕ್ಷಾಂತರ ಬಾಕಿಯಿದ್ದು ದುಡ್ಡು ಕಟ್ಟಿ, ನಂತರ ಬೀದಿ ದೀಪ ಕಟ್ಟುತ್ತೇವೆ ಎನ್ನುತ್ತಾರೆ.

ಆದರೆ ಕಂದಾಯ ಕಟ್ಟಿಸಿಕೊಳ್ಳಲು ಯಾರೊಬ್ಬರೂ ಬಂದಿಲ್ಲ. ಮನಸೋ ಇಚ್ಚೆ ಮನೆ ಕಂದಾಯ ನಿಗದಿ ಪಡಿಸಿದ್ದಾರೆಂದು ದೂರಿದರು. ಈ ವೇಳೆ ಪಂಚಾಯ್ತಿ ಮುಂದೆ ಜಮಾಯಿಸಿದ್ದ ನೂರಕ್ಕೂ ಹೆಚ್ಚು ಮಹಿಳೆ ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರೌಢಶಾಲೆ ಬಳಿ ಬೋರ್‌ವೆಲ್‌ ಕೊರೆಸಿದ್ದರೂ ಮೋಟಾರ್‌ ಕೆಟ್ಟು ಹೋಗಿದೆ. ಚರಂಡಿಗಳು ದುರ್ನಾತ ಬೀರು ತ್ತಿವೆ ಎಂದು ದೂರಿದರು.

ಪಪಂ ಲೆಕ್ಕಾಧಿಕಾರಿಗೆ ಮನವಿ: ಅಧಿಕಾರಿಗಳು ಬಂದು ಸಮಸ್ಯೆ ಬಗೆಹರಿಸುವವರೆಗೂ ಸ್ಥಳದಿಂದ ಕದಲುವುದಿಲ್ಲವೆಂದು ಪಟ್ಟು ಹಿಡಿದಿದ್ದ ಗ್ರಾಮಸ್ಥರಿಗೆ ಪಪಂ ಆಡಳಿತಾಧಿಕಾರಿ ತಹಶೀಲ್ದಾರ್‌ರನ್ನು ಫೋನ್‌ ಮುಖಾಂತರ ಸಂಪರ್ಕಿಸಿ ಗ್ರಾಮದ ಪರವಾಗಿ 3-4 ಮಂದಿ ತಮ್ಮ ಕಚೇರಿಗೆ ಬರುವಂತೆ ಮನವೊಲಿ ಸಿದರು. ಪರಿಣಾಮ ಗ್ರಾಮಸ್ಥರು ಪಪಂಲೆಕ್ಕಾಧಿಕಾರಿ ಜುನೇದ್‌ರಿಗೆ ಮನವಿ ಪತ್ರ ಸಲ್ಲಿಸಿ ಹಿಂತಿರುಗಿ ದರು. ಪಪಂ ಲೆಕ್ಕಾಧಿಕಾರಿ ಜುನೇದ್‌ ಮಾತನಾಡಿ, ಸಿಬ್ಬಂದಿ ಕೊರತೆಯಿಂದಾಗಿ ಸಮಸ್ಯೆ ಉಂಟಾಗಿದೆ. ನಿಮ್ಮಗಳ ಸಮಸ್ಯೆ ಮೇಲಧಿಕಾರಿಗಳ ಗಮನಕ್ಕೆ ತಂದು ಶೀಘ್ರ ಪರಿಹರಿಸಲು ಯತ್ನಿಸಲಾಗುವು ದೆಂದರು. ಬೀರಣ್ಣ, ದುರ್ಗಪ್ಪ, ಈಶಣ್ಣ, ಮಂಜಣ್ಣ, ರಾಜಣ್ಣ, ಕೆಂಚಪ್ಪ, ಹನುಮೇಶ್‌ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.