ರಾಜ್ಯ ಬಜೆಟ್‌ ಸ್ಲಂ ಜನರ ನಿರ್ಲಕ್ಷ್ಯ


Team Udayavani, Mar 15, 2021, 2:02 PM IST

ರಾಜ್ಯ ಬಜೆಟ್‌ ಸ್ಲಂ ಜನರ ನಿರ್ಲಕ್ಷ್ಯ

ತುಮಕೂರು: ದೇಶದಲ್ಲಿ ದಿನೇ ದಿನೆ ಏರುತ್ತಿರುವ ಬೆಲೆ ಏರಿಕೆ ಯಿಂದ ಸ್ಲಂ ಜನರು, ಬಡವರು ಬದುಕುವುದು ಕಷ್ಟವಾಗುತ್ತಿದೆ. ರಾಜ್ಯ ಸರ್ಕಾ ರದ ಬಜೆಟ್‌ನಲ್ಲಿಯೂ ಸ್ಲಂ ಜನರನ್ನು ಸರ್ಕಾರ ನಿರ್ಲ ಕ್ಷ್ಯಿಸಿದೆ ಎಂದು ಸ್ಲಂ ಜನಾಂದೋಲನ ಕರ್ನಾಟಕ ಸಂಚಾಲಕ ಎ. ನರಸಿಂಹಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ನಗರ ವಂಚಿತ ಯುವಜನ ಸಂಪನ್ಮೂಲ ಕೇಂದ್ರದಲ್ಲಿ ಭಾನುವಾರ ನಡೆದ ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಕಾರ್ಯಕಾರಿ ಸಮಿತಿ ಮತ್ತು ನಿವೇಶನರಹಿತ ಹೋರಾಟ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಡವರ ಬದುಕು ದಿನೇ ದಿನೆ ಕಷ್ಟವಾಗುತ್ತಿರುವ ಸಂದರ್ಭದಲ್ಲಿ ಕೇಂದ್ರ, ರಾಜ್ಯಸರ್ಕಾರ ದಿನನಿತ್ಯ ಬಳಸುವ ವಸ್ತುಗಳ ಮೇಲೆ ಏಕಾಏಕಿತೆರಿಗೆ ಹೆಚ್ಚಿಸುವ ಮೂಲಕ ದೇಶದ ಜನರ ಬದುಕನ್ನು ಅತಂತ್ರಗೊಳಿಸಲಾಗುತ್ತಿದೆ ಎಂದರು.

ವಲಯವಾರು ಅನುದಾನ ಹಂಚಿಕೆ: ಬಜೆಟ್‌ ಪೂರ್ವಸಭೆಯಲ್ಲಿ ಸ್ಲಂ ನಿವಾಸಿಗಳ ಜನಸಂಖ್ಯೆಗನುಗುಣವಾಗಿ 1 ಸಾವಿರ ಕೋಟಿ ರೂ. ಮೀಸಲಿಡಲು ಮತ್ತು ನಗರಪ್ರದೇಶಗಳಲ್ಲಿರುವ ನಿವೇಶನ ರಹಿತರಿಗೆ ವಸತಿ ಕಲ್ಪಿಸಲು ಲ್ಯಾಂಡ್‌ ಬ್ಯಾಂಕ್‌ ಯೋಜನೆ ಜಾರಿ ಹಾಗೂ ಸ್ಲಂನಿವಾಸಿಗಳಿಗೆ ನಿರ್ಮಿಸುವ ವಸತಿ ಯೋಜನೆಗಳಲ್ಲಿ 5ಲಕ್ಷ ಸಬ್ಸಿಡಿ ನೀಡಲು ಒಪ್ಪಿಗೆ ನೀಡಲಾಗಿತ್ತು. ಆದರೆ, ಈಎಲ್ಲಾ ಅಂಶಗಳನ್ನು ಕಡೆಗಣಿಸಿ ವಲಯವಾರು ಅನುದಾನ ಹಂಚಿಕೆ ಮಾಡಲಾಗಿದೆ. ಬಜೆಟ್‌ನಲ್ಲಿ ಸ್ಲಂ ಜನರಿಗೆ ಯಾವುದೇ ಹಣ ಮೀಸಲಿರಿಸದೇ ನಿರ್ಲಕ್ಷ್ಯ ತೋರಿರುವುದು ಖಂಡನೀಯ ಎಂದರು. ಹೋರಾಟದ ಸ್ವರೂಪ ಮತ್ತಷ್ಟು ಗಟ್ಟಿಗೊಳಿಸಲು ಏ.20ರಂದು ನಿವೇಶನ ರಹಿತರ ಸಮಾವೇಶ ಆಯೋಜಿಸಲು ಸಿದ್ಧತೆಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಂಘಟಿತ ಹೋರಾಟ ಅಗತ್ಯ: ಸಮಿತಿ ಗೌರವಾಧ್ಯಕ್ಷೆ ದೀಪಿಕಾ ಮಾತನಾಡಿ, ದೇಶದ ಬಹುಪಾಲುಮಹಿಳೆಯರು ಕುಟುಂಬದ ನಿರ್ವಹಣೆ ಜವಾಬ್ದಾರಿ ಒತ್ತು ಸಮಸ್ಯೆಗಳ ಮೇಲೆ ಸಮಸ್ಯೆ ಅನುಭವಿಸುತ್ತಿದ್ದಾರೆ.ಲೈಂಗಿಕ ಅಲ್ಪಸಂಖ್ಯಾತರು ಸಮಾಜ ಮತ್ತು ಕುಟುಂಬದಿಂದ ಬೇರ್ಪಟ್ಟು ನಿರ್ಲಕ್ಷ್ಯಕ್ಕೊಳಗಾಗಿದ್ದು, ನಾವು ಸಂಘಟಿತವಾಗಿ ಹೋರಾಟವನ್ನು ಮತ್ತಷ್ಟುಬಲಗೊಳಿಸಬೇಕಾಗಿದೆ ಎಂದರು.

ಸಭೆಯಲ್ಲಿ ಸ್ಲಂ ಸಮಿತಿಪದಾಧಿಕಾರಿ ಶಂಕರಯ್ಯ, ಮೋಹನ್‌, ಅರುಣ್‌, ಮಂಗಳಮ್ಮ, ತಿರುಮಲಯ್ಯ, ಹಯತ್‌ಸಾಬ್‌, ರಂಗನಾಥ್‌, ಪುಟ್ಟರಾಜು, ಧನಂಜಯ್‌, ಸೀಮಾ,ಅಂಜಿನಮ್ಮ, ಹನುಮಕ್ಕ, ತಿಮ್ಮಕ್ಕ, ಸುಧಾ, ಡಿ.ಎಂ ಗೌಡದೇವರಾಜು, ಬಾಬು, ಟಿ.ಆರ್‌ ಮೋಹನ್‌, ಭದ್ರಿ, ಶಾಂತಕುಮಾರ್‌ ಇದ್ದರು.

ನಿವೇಶನಕ್ಕೆ ಅರ್ಹ ಫ‌ಲಾನುಭವಿ ಗುರುತಿಸಿ :

ಜಿಲ್ಲಾಡಳಿತದಿಂದ ಮಾ.3ರಂದು ಅಪರ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ನಡೆದ ಸ್ಲಂ ಜನರ ಕುಂದುಕೊರತೆ ಸಭೆಯ ತೀರ್ಮಾನದಂತೆ 389 ವಿವಿಧ ಸ್ಲಂಗಳ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಒದಗಿಸಿಲು ನಿಯಮಾನುಸಾರ ಪ್ರಸ್ತಾವನೆ ಸಲ್ಲಿಸಲು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದ್ದು, ವಿಶೇಷವಾಗಿ ಜಿಲ್ಲಾಡಳಿತ ನಿವೇಶನ ರಹಿತರಿಗೆ ಸರ್ಕಾರಿ ಭೂಮಿ ಗುರುತಿಸಿ 389 ಕುಟುಂಬಗಳಿಗೆ ನಿವೇಶನ ನೀಡಲು ಅಗತ್ಯ ಪ್ರಸ್ತಾವನೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿದೆ. ನೈಜ ಫ‌ಲಾನುಭವಿಗಳನ್ನು ಸಮಿತಿ ಪದಾಧಿಕಾರಿಗಳು ಗುರುತಿಸಿ ನೀಡಬೇಕು ಎಂದು ನರಸಿಂಹಮೂರ್ತಿ ಹೇಳಿದರು.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.