ಸ್ಮಾರ್ಟ್ಸಿಟಿ: ರಸ್ತೆ ಕಾಮಗಾರಿ ಪರಿಶೀಲನೆ
Team Udayavani, Dec 12, 2020, 5:30 PM IST
ತುಮಕೂರು: ನಗರದ ಹಳೆಯ ಎನ್ಇಪಿಎಸ್ ಪೊಲೀಸ್ ಠಾಣೆಯ ಮುಂಭಾಗದ ಬಿ.ಹೆಚ್.ರಸ್ತೆಯಮುಂಭಾಗ ದಿಂದ ಎಸ್.ಎಸ್.ಪುರಂ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಡಾಂಬರು ಹಾಕುವ ಕಾರ್ಯ ಪ್ರಗತಿಯಲ್ಲಿದ್ದು, ಶುಕ್ರವಾರಪಾಲಿಕೆಯ15ನೇ ವಾರ್ಡಿನ ಸದಸ್ಯೆ ಗಿರಿಜಾ ಮತ್ತು ಅಧಿಕಾರಿಗಳು ಕಾಮಗಾರಿಯನ್ನು ಪರಿಶೀಲಿಸಿದರು.
ಈ ವೇಳೆ ಮಾತನಾಡಿದ ಪಾಲಿಕೆ ಸದಸ್ಯೆ ಗಿರಿಜಾ, ನಗರದ ಎಸ್.ಎಸ್.ಪುರಂ ಮತ್ತುಬಿ.ಹೆಚ್.ರಸ್ತೆಗೆ ಸಂಪರ್ಕ ಕಲ್ಪಿಸುವ ಅತಿ ಅಗಲವಾದ ರಸ್ತೆ ಇದಾಗಿದ್ದು, 585 ಮೀ. ಉದ್ದವಿದ್ದು,ಕಳೆದ 30 ವರ್ಷಗಳಿಂದ ಈ ರಸ್ತೆ ಡಾಂಬರು ಕಂಡಿರಲಿಲ್ಲ. ಕಳೆದ ಒಂದು ವರ್ಷಗಳಿಂದ ಈ ಭಾಗದಲ್ಲಿ ರಸ್ತೆಅಭಿವೃದ್ಧಿ ಕಾಮಗಾರಿಗಳು ನಡೆಯು ತ್ತಿದ್ದು, ಸಾರ್ವಜನಿಕರು ಸಹಕಾರ ನೀಡಿದ್ದಾರೆ ಎಂದರು.
ನಗರದ 15ನೇ ವಾರ್ಡಿಗೆ ಸಂಬಂಧಿಸಿದಂತೆ ಮುಖ್ಯರಸ್ತೆ, ಅಡ್ಡ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕೊನೆಯ ಹಂತದಲ್ಲಿದೆ.ಮುಂದಿನ ಒಂದೆರಡು ವಾರಗಳಲ್ಲಿಡಾಂಬರ್ ಕಾಮಗಾರಿ ಪೂರ್ಣಗೊಳ್ಳಲಿದೆ.ಅತ್ಯಾಧುನಿಕಸ್ಮಾರ್ಟಸಿಟಿಯಿಂದ ಡಕ್, ಸಿಸಿ. ಚರಂಡಿ, 24×7 ಕುಡಿಯುವ ನೀರು, ಪೈಪ್ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಸಂಪರ್ಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿದ್ದು,ಇಡೀ ವಾರ್ಡು ಎಲ್ಲಾ ಸಮಸ್ಯೆಗಳಿಂದ ಮುಕ್ತವಾಗಲಿದೆ. ಈ ವೇಳೆ ವಾರ್ಡಿನ ನಾಗರಿಕ ಪಣೀಂದ್ರ ಸುರಬಿ ಮಾತನಾಡಿದರು. ಈ ವೇಳೆಸ್ಮಾರ್ಟ್ಸಿಟಿ ಎಇಇ ಚಲುವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ
Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!
Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು
ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್ ಹೆಗಡೆಗೆ ಟಿಕೆಟ್ ತಪ್ಪಿದೆ: ಸೋಮಣ್ಣ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು