ಸ್ಮಾರ್ಟ್‌ಸಿಟಿ ಕಾಮಗಾರಿ ಮಾಹಿತಿ ಪ್ರಕಟಿಸದಿದ್ದರೆ ಉಗ್ರ ಹೋರಾಟ


Team Udayavani, Feb 9, 2022, 3:14 PM IST

ಸ್ಮಾರ್ಟ್‌ಸಿಟಿ ಕಾಮಗಾರಿ ಮಾಹಿತಿ ಪ್ರಕಟಿಸದಿದ್ದರೆ ಉಗ್ರ ಹೋರಾಟ

ತುಮಕೂರು: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ರಿಂಗ್‌ ರಸ್ತೆ, ಸ್ಟೇಡಿಯಂ ಸೇರಿದಂತೆ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಕುರಿತು ಇನ್ನೊಂದು ತಿಂಗಳೊಳಗೆ ಸಂಪೂರ್ಣ ಸಮಗ್ರ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಇಲ್ಲದಿದ್ದರೆ ಸ್ಮಾರ್ಟ್‌ ಸಿಟಿ ವಿರುದ್ಧ ಉಗ್ರ ಹೋರಾಟ ನಡೆಸ ಲಾಗುವುದು ಎಂದು ಮಾಜಿ ಶಾಸಕ ಡಾ. ಎಸ್‌. ರಫೀಕ್‌ ಅಹಮದ್‌ ಎಚ್ಚರಿಕೆ ನೀಡಿದರು.

ನಗರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2016 ರಲ್ಲಿ ತಾವು ಶಾಸಕರಾಗಿದ್ದ ಅವಧಿಯಲ್ಲಿ ತುಮಕೂರು ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿದ್ದು, ಅಂದಿನಿಂದ ಅನುದಾನ ಬರಲು ಪ್ರಾರಂಭವಾಯಿತು. ನಗರದಲ್ಲಿ 154 ಯೋಜನೆ ಅನುಷ್ಠಾನಕ್ಕೆ ತಂದು 924 ಕೋಟಿ ರೂ. ಮೊತ್ತದ ಕಾಮಗಾರಿಗಳ ಪೈಕಿ ಈಗಾಗಲೇ 471 ಕೋಟಿ ರೂ. ಮೊತ್ತದ ಕಾಮಗಾರಿ ಪೂರ್ಣಗೊಂಡಿವೆ ಎಂದು ಸ್ಮಾರ್ಟ್‌ಸಿಟಿ ಅಧಿಕಾರಿಗಳು ಹೇಳುತ್ತಾರೆ.

ಆದರೆ, ಈ ಕಾಮಗಾರಿಗಳ ಗುಣಮಟ್ಟ ಸೇರಿದಂತೆ ಸಮಗ್ರ ಮಾಹಿತಿ ಕೇಳಿದರೆ ಮಾತ್ರ ಸಂಪೂರ್ಣ ಮಾಹಿತಿ ಕೊಡದೆ ಇಲ್ಲಸಲ್ಲದ ಸಬೂಬು ಹೇಳುತ್ತಿದ್ದಾರೆ ಎಂದು ದೂರಿದರು.

ಸಮರ್ಪಕ ಮಾಹಿತಿ ನೀಡುತ್ತಿಲ್ಲ: ಈಗಾಗಲೇ ಸ್ಮಾರ್ಟ್‌ಸಿಟಿ ಯೋಜನೆಗೆ ಕೇಂದ್ರದಿಂದ 294ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 297 ಕೋಟಿ ರೂ. ಅನುದಾನ ಬಂದಿದೆ. ನಗರದಲ್ಲಿ ನಡೆದಿರುವ ಮತ್ತು ನಡೆಯುತ್ತಿರುವ ಸ್ಮಾರ್ಟ್‌ ಸಿಟಿ ಕಾಮಗಾರಿಗಳ ಕುರಿತು ಸಮಗ್ರ ಮಾಹಿತಿನೀಡುವಂತೆ ಆರ್‌ಟಿಐ ಅಡಿ ಕೇಳಿದರೂ, ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡುತ್ತಿಲ್ಲ. ಅಲ್ಲದೆ ಸ್ಮಾರ್ಟ್‌ಸಿಟಿ ವೆಬ್‌ಸೈಟ್‌ನಲ್ಲೂ ಅರೆಬರೆ ಮಾಹಿತಿ ಮಾತ್ರ ಪ್ರಕಟಿಸಿದ್ದಾರೆ. ಕಾಮಗಾರಿಗಳಕುರಿತು ಸಮಗ್ರ ಮಾಹಿತಿ ಹಾಕಬೇಕು. ಈ ಮೂಲಕ ನಗರದ ನಾಗರಿಕರಿಗೆ ಸ್ಮಾರ್ಟ್‌ಸಿಟಿಕುರಿತು ಮಾಹಿತಿ ತಿಳಿಯುವಂತಾಗಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ರೂಪಿಸಲಾಗುವುದು ಎಂದು ತಿಳಿಸಿದರು.

ಸಸಿಗಳನ್ನು ನೆಟ್ಟಿಲ್ಲ: ಸ್ಮಾರ್ಟ್‌ಸಿಟಿ ಯೋಜನೆಯಡಿ ನಡೆದಿರುವ ರಿಂಗ್‌ ರಸ್ತೆ ಕಾಮಗಾರಿಯೂ ಕಳಪೆಯಿಂದ ಕೂಡಿದೆ. ಮಹಾತ್ಮಗಾಂಧಿ ಕ್ರೀಡಾಂಗಣ, ಇಂಟಿಗ್ರೇಟೆಡ್‌ ಬಸ್‌ ನಿಲ್ದಾಣ ಸೇರಿದಂತೆ ವಿವಿಧ ಕಾಮಗಾರಿ ಗುಣಮಟ್ಟದಿಂದಕೂಡಿಲ್ಲ. ಇನ್ನು ಬೀದಿದೀಪ ಸಹಸಮರ್ಪಕವಾಗಿಲ್ಲ. ರಿಂಗ್‌ ರಸ್ತೆಯಲ್ಲಿ ಸರಿಯಾಗಿ ಸಸಿಗಳನ್ನು ನೆಟ್ಟಿಲ್ಲ. ಈ ರೀತಿಯ ಕಳಪೆ ಕಾಮಗಾರಿ ಮಾಡಿರುವ ಸ್ಮಾರ್ಟ್‌ಸಿಟಿ ಅಧಿಕಾರಿಗಳಿಗೆ ನಾಚಿಕೆಯಾಗಬೇಕು ಎಂದು ಗುಡುಗಿದರು.

ರಾಷ್ಟ್ರಮಟ್ಟದ ಟೆಂಡರ್‌ ಕರೆದಿಲ್ಲ: ಸ್ಮಾರ್ಟ್‌ಸಿಟಿ ವತಿಯಿಂದ ಕೇಳಿದ ಮಾಹಿತಿ ಬಗ್ಗೆ ನೀಡಿರುವಉತ್ತರವನ್ನು ಕೇಂದ್ರ, ರಾಜ್ಯ ಸರ್ಕಾರದ ಗಮನಕ್ಕೂ ತರುತ್ತೇನೆ. ಸ್ಮಾರ್ಟ್‌ಸಿಟಿಯವರು ಸ್ಥಳೀಯಶಾಸಕರು ಹಾಗೂ ಸಚಿವರಿಗೂ ಸಮರ್ಪಕ ಮಾಹಿತಿ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿವೆ ಎಂದ ಅವರು, ನಗರದಲ್ಲಿ ಕೈಗೊಂಡಿರುವ ಸ್ಮಾರ್ಟ್‌ಕಾಮಗಾರಿಗಳಿಗೆ ರಾಷ್ಟ್ರಮಟ್ಟದ ಟೆಂಡರ್‌ ಕರೆಯಬೇಕಿತ್ತು. ರಾಷ್ಟ್ರಮಟ್ಟದ ಟೆಂಡರ್‌ ಕರೆದು ಗುತ್ತಿಗೆ ನೀಡಿದ್ದರೆ ಗುಣಮಟ್ಟದ ಕಾಮಗಾರಿ ನಡೆಯುತ್ತಿದ್ದವು ಎಂದರು.

ಪಾಲಿಕೆ ಸದಸ್ಯ ನಯಾಜ್‌ ಅಹಮದ್‌, ಜೆ. ಕುಮಾರ್‌, ಮಹೇಶ್‌, ಮುಖಂಡ ಆಟೋರಾಜು, ಮೆಹಬೂಬು ಪಾಷ, ಪ್ರಭಾವತಿ ಸುದೀಶ್ವರ್‌, ಡಾ. ಕುರಾನ ಬೇಗಂ, ಜಗದೀಶ್‌ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.