ಸಂತೆ ಸ್ಥಳಾಂತರಕ್ಕೆ ಕೆಲ ವ್ಯಾಪಾರಿಗಳ ವಿರೋಧ


Team Udayavani, Dec 17, 2019, 3:00 AM IST

sante-stal

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ವಾರದ ಸಂತೆ ಸ್ಥಳಾಂತರ ವಿರೋಧಿಸಿ ಕೆಲವು ಸಂತೆ ವ್ಯಾಪಾರಸ್ಥರು ಪ್ರತಿಭಟನೆ ನಡೆಸುವ ಮೂಲಕ ಅಕ್ರೋಶ ವ್ಯಕ್ತಪಡಿಸಿದರೆ, ಇನ್ನು ಕೆಲವರು ನೂತನವಾಗಿ ಆರಂಭವಾಗಿರುವ ಎಪಿಎಂಸಿ ಸಂತೆ ಆವರಣದಲ್ಲಿ ವ್ಯಾಪಾರ ಮಾಡುವ ಮೂಲಕ ಸ್ಥಳಾಂತರಕ್ಕೆ ಸಹಮತ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಆದೇಶದಂತೆ ಪುರಸಭೆ ಅಧಿಕಾರಿಗಳು ಪಟ್ಟಣದ ಎಪಿಎಂಸಿ ಆವರಣಕ್ಕೆ ಸಂತೆ ಸ್ಥಳಾಂತರಿಸಿ ಆದೇಶ ನೀಡಿದ್ದನ್ನು ವಿರೋಧಿಸಿ ಕೆಲ ಸಂತೆ ವ್ಯಾಪಾರಸ್ಥರು ಸಂತೆ ಬಹಿಷ್ಕರಿಸಿ ಜಿಲ್ಲಾಧಿಕಾರಿ ಆದೇಶ ವಿರೋಧಿಸಿದರು.

ಸಂತೆ ಸ್ಥಳ ಸ್ಥಳಾಂತರ ಖಂಡಿಸಿ ಕರೆ ನೀಡಿದ್ದ ಸಂತೆ ಬಂದ್‌ಗೆ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದ್ದು, ಕೆಲ ವ್ಯಾಪಾರಸ್ಥರು ಸಂತೆಗೆ ಸಾಮಗ್ರಿ ಮಾರಾಟ ಮಾಡಲು ಬಾರದೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು, ಇನ್ನು ಕೆಲವರು ಎಪಿಎಂಸಿ ಆವರಣದಲ್ಲಿ ಸಾಮಗ್ರಿ ಮಾರಾಟ ಮಾಡುವ ಮೂಲಕ ಅಧಿಕಾರಿಗಳ ತೀರ್ಮಾನಕ್ಕೆ ಸಹಮತ ವ್ಯಕ್ತಪಡಿಸಿದರು.

ಪ್ರತಿಭಟನೆ ಮೆರವಣಿಗೆ: ಪಟ್ಟಣದ ಕನ್ನಡ ಸಂಘ ವೇದಿಕೆಯಿಂದ ತಾಲೂಕು ಕಚೇರಿವರೆಗೆ ಸಂತೆ ವ್ಯಾಪಾರಸ್ಥರು ಪ್ರತಿಭಟನೆ ಮೆರವಣಿ ನಡೆಸಿದರು. ವೇದಿಕೆ ಅಧ್ಯಕ್ಷ ಸಿ.ಬಿ ರೇಣುಕಸ್ವಾಮಿ ತಹಶೀಲಾರ್‌ ತೇಜಸ್ವಿನಿಗೆ ಮನವಿ ನೀಡಿ ಮೊದಲು ನಡೆಸುತ್ತಿದ್ದ ಜಾಗದಲ್ಲೇ ಸಂತೆ ನಡೆಸಬೇಕು ಎಂದು ಒತ್ತಾಯಿಸಿದರು.

ಪೊಲೀಸ್‌ ಬಂದೋಬಸ್ತ್: ಪುರಸಭೆ ಅಧಿಕಾರಿಗಳು ಪೊಲೀಸ್‌ ಇಲಾಖೆ ಸಹಾಯದಿಂದ ಬಿ.ಎಚ್‌ ರಸ್ತೆ ಹಾಗೂ ಕ್ರೀಡಾಂಗಣ ಅಕ್ಕ ಪಕ್ಕದ ಜಾಗದಲ್ಲಿ ಸಂತೆ ವ್ಯಾಪಾರ ನಡೆಸದಂತೆ ಕಾವಲು ಹಾಕಲಾಗಿತ್ತು. ಎಪಿಎಂಸಿ ಆವರಣದಲ್ಲಿ ವ್ಯಾಪಾರಸ್ಥರಿಗೆ ಸಂತೆ ಮಾಡಲು ಅನುಕೂಲ ಮಾಡಲಾಗಿತ್ತು. ಪ್ರತಿಭಟನಾಕಾರರು ಸಂತೆ ವ್ಯಾಪಾರಕ್ಕೆ ಆಡ್ಡಿ ಮಾಡದಂತೆ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

ಗ್ರಾಹಕರ ಜೇಬಿಗೆ ಕತ್ತರಿ: ಸಂತೆ ಸ್ಥಳಾಂತರದ ಬಗ್ಗೆ ದ್ವಂದ್ವ ನಿಲುವಿನಿಂದ ವಾರದ ಸಂತೆ ಸಂಪೂರ್ಣವಾಗಿ ನಡೆಯದೆ ಇದ್ದುದರಿಂದ ಖಾಸಗಿ ನಿಲ್ದಾಣದ ಬಳಿ ಇದ್ದ ತರಕಾರಿ ಅಂಗಡಿಗಳಿಗೆ ಗ್ರಾಹಕರು ತರಕಾರಿ ಕೊಳ್ಳಲು ಹೋಗಿದ್ದು, ವ್ಯಾಪಾರಿಗಳು ತರಕಾರಿ ಬೆಲೆ ಹೆಚ್ಚಿಸಿ ಮಾರಾಟ ಮಾಡುವ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದರು. ಆದರೂ ಗ್ರಾಹಕರು ತರಕಾರಿ ಕೊಂಡು ಮನೆಯತ್ತ ಸಾಗಿದರು.

ಸಚಿವರು ಶ್ರೀಮಂತರ ಪರ
ಚಿಕ್ಕನಾಯಕನಹಳ್ಳಿ: ತಾಲೂಕು ಆಡಳಿತ ಜನಸಮಾನ್ಯರ ಕಷ್ಟ-ಸುಖ ತಿಳಿದು ತೀರ್ಮಾನ ತೆಗೆದುಕೊಳ್ಳಬೇಕು. ಸಂತೆ ಸ್ಥಳಾಂತರವಾದರೆ ಅಭಿವೃದ್ಧಿ ಮಾಡಿದಂತೆ ಅಲ್ಲ. ತಾಲೂಕಿನಲ್ಲಿ ಮಾಡಬೇಕಾದ ಕೆಲಸ ಬೇರೆ ಇದೆ. ಬಡವರ ಜೀವನದ ಜೊತೆ ಚೆಲ್ಲಾಟವಾಡುವುದು ಸರಿಯಲ್ಲ ಎಂದು ಕಾಂಗ್ರೆಸ್‌ ಮುಖಂಡ ಸಾಸಲು ಸತೀಶ್‌ ತಿಳಿಸಿದರು.

ಪಟ್ಟಣದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ನಮ್ಮ ಸಚಿವರು ಶ್ರೀಮಂತರ, ಜಮೀನುದಾರರ, ಭೂಮಾಲೀಕರ, ಗುತ್ತಿಗೆದಾರರ ಪರವಾಗಿದ್ದು, ಬಡವರವಾಗಿದ್ದರೆ ಕಷ್ಟ ತಿಳಿಯುತಿತ್ತು. ಅಧಿಕಾರಿಗಳು , ರಾಜಕಾರಣಿಗಳು ಬಡವರ ಪರ ಕೆಲಸ ಮಾಡಬೇಕು. ಡೀಸಿ ಹಾಗೂ ಪುರಸಭೆ ಆದೇಶ ಅಂತಿಮವಲ್ಲ. ಸ್ಥಳಾಂತರಕ್ಕೆ ಮುನ್ನ ವ್ಯಾಪಾರಸ್ಥರ, ಗ್ರಾಹಕರ ಅಭಿಪ್ರಾಯ ಸಂಗ್ರಹಿಸಬೇಕು. ಎಪಿಎಂಸಿ ಆವರಣದಲ್ಲಿ ಹಲವಾರು ವರ್ಷಗಳಿಂದ ಕುರಿ ಸಂತೆ ನಡೆಯುತ್ತಿದೆ.

ಆದರ ಜೊತೆ ತರಕಾರಿ ಸಂತೆ ಸೇರಿಸಿದರೆ ಗ್ರಾಹಕರಿಗೆ ಕಿರಿಕಿರಿಯಾಗುತ್ತದೆ. ಕುರಿ, ಕೋಳಿ ಕೆಲ ತಾಲೂಕಿನ ರಾಜಕಾರಣಿಗಳಿಗೆ ಅಲರ್ಜಿ. ಆದ್ದರಿಂದ ಕುರಿ ಸಂತೆಗೆ ಕುತ್ತು ತರುವ ಉದ್ದೇಶದಿಂದ ತರಕಾರಿ ಸಂತೆ ಸ್ಥಳಾಂತರಿಸಲಾಗಿದೆ. ಇದು ಸರಿಯಲ್ಲ. ಮೊದಲು ನಡೆಯುತ್ತಿದ್ದ ಜಾಗದಲ್ಲೇ ಸಂತೆ ಮುಂದುವರಿಸಬೇಕು. ರಸ್ತೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಾರದ ಸಂತೆ ದಿನ ಹೆಚ್ಚು ಪೊಲೀಸ್‌ ಸಿಬ್ಬಂದಿ ನೇಮಿಸಿ ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.