ಮಳೆ ಇಲ್ಲದೆ ಜಿಲ್ಲೆಯಲ್ಲಿ ಬಿತ್ತನೆ ಕುಂಠಿತ


Team Udayavani, Jun 30, 2019, 1:51 PM IST

tk-tdy-2..

ಜಿಲ್ಲೆಯಲ್ಲಿ ಬಿತ್ತನೆ ಮಾಡಲು ರೈತರು ಭೂಮಿಯನ್ನು ಹಸನು ಮಾಡಿಕೊಂಡಿರುವುದು.

ತುಮಕೂರು: ಜಿಲ್ಲೆಯಾದ್ಯಂತ ಮುಂಗಾರು ಮಳೆ ಆಶಾದಾಯಕವಾಗಿ ಬರುತ್ತದೆ ಎಂಬ ರೈತರ ನಿರೀಕ್ಷೆ ಹುಸಿಯಾಗಿದೆ. ಬಿತ್ತನೆ ಮಾಡುವ ಸಮಯದಲ್ಲಿ ಮುಂಗಾರು ಮಳೆ ಮತ್ತೆ ಕೈ ಕೊಟ್ಟಿದೆ.

ಪೂರ್ವ ಮುಂಗಾರು ಮಳೆಯಲ್ಲಿ ಬಿತ್ತನೆ ಮಾಡಿದ್ದ ಅಲ್ಪ ಸ್ವಲ್ಪ ದ್ವಿದಳ ಧಾನ್ಯ ಬೆಳೆಗಳಾದ ಹೆಸರು, ಎಳ್ಳು, ಉದ್ದು, ಸೇರಿದಂತೆ ದ್ವಿದಳ ಧಾನ್ಯ ಮಳೆಯಿಲ್ಲದೆ ಒಣಗುತ್ತಿವೆ. ಜೊತೆಗೆ ಕಾಯಿ ಕಟ್ಟುವ ಸಮಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು, ರೈತರನ್ನು ಆತಂಕ ಕ್ಕೀಡು ಮಾಡಿದೆ. ಈ ಬಾರಿ ಜಿಲ್ಲೆಯಾದ್ಯಂತ ವಾಡಿಕೆ ಮಳೆಗಿಂತ ಕಡಿಮೆ ಮಳೆ ಬಂದಿದ್ದು, 2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಒಟ್ಟು 4,16,000ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದು, ಇಲ್ಲಿಯವರೆಗೆ ಕೇವಲ 9921 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ಚಿಕ್ಕನಾಯಕನಹಳ್ಳಿ 38264 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಬೇಕಾಗಿತ್ತು. ಈವರೆಗೆ 832 ಹೆಕ್ಟೇರ್‌ ಪ್ರದೇಶ, ಗುಬ್ಬಿ ತಾಲೂಕಿನಲ್ಲಿ 31750 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಬೇಕು ಈವರೆಗೆ 230 ಹೆಕ್ಟೇರ್‌ ಪ್ರದೇಶ, ಕುಣಿಗಲ್ ತಾಲೂಕಿನಲ್ಲಿ 44661 ಹೆಕ್ಟೇರ್‌ ಪ್ರದೇಶದಲ್ಲಿ ಈವರೆಗೆ 1952 ಹೆಕ್ಟೇರ್‌ ಪ್ರದೇಶ, ಮಧುಗಿರಿ ತಾಲೂಕಿನಲ್ಲಿ 38560 ಹೆಕ್ಟೇರ್‌ ಪ್ರದೇಶದಲ್ಲಿ 110 ಹೆಕ್ಟೇರ್‌ ಪ್ರದೇಶ, ಪಾವಗಡ ತಾಲೂಕಿನಲ್ಲಿ 73030 ಹೆಕ್ಟೇರ್‌ ಪ್ರದೇಶದಲ್ಲಿ ಈವರೆಗೆ 80 ಹೆಕ್ಟೇರ್‌ ಪ್ರದೇಶ, ಶಿರಾ ತಾಲೂಕಿನಲ್ಲಿ 61030 ಹೆಕ್ಟೇರ್‌ ಪ್ರದೇಶದಲ್ಲಿ ಈವರೆಗೆ 507 ಹೆಕ್ಟೇರ್‌ ಪ್ರದೇಶ, ತಿಪಟೂರು ತಾಲೂಕಿನಲ್ಲಿ 27720 ಹೆಕ್ಟೇರ್‌ ಪ್ರದೇಶದಲ್ಲಿ ಈವರೆಗೆ 3346 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ತುಮಕೂರು ತಾಲೂಕಿನಲ್ಲಿ 38960 ಹೆಕ್ಟೇರ್‌ ಪ್ರದೇಶದಲ್ಲಿ ಈವರೆಗೆ 394 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ತುರುವೇಕೆರೆ ತಾಲೂಕಿ ನಲ್ಲಿ 27875 ಹೆಕ್ಟೇರ್‌ ಪ್ರದೇಶದಲ್ಲಿ ಈ ವರೆಗೆ 1230 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಕೊರಟಗೆರೆೆ ತಾಲೂಕಿನಲ್ಲಿ 34600 ಹೆಕ್ಟೇರ್‌ ಪ್ರದೇಶದಲ್ಲಿ 1240 ಹೆಕ್ಟೇರ್‌ ಪ್ರದೇಶ ದಲ್ಲಿಬಿತ್ತನೆಯಾಗಿದೆ. ಕಳೆದ ವರ್ಷ ಈ ವೇಳೆಗೆ 26 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿತ್ತು.

ಶೇಂಗಾ ಬಿತ್ತನೆಯಲ್ಲಿ ಕುಂಠಿತ: ಜೂ.15ರಿಂದ ಜು.15 ರವರೆಗೆ ಶೇಂಗಾ ಬಿತ್ತನೆಗೆ ಸಕಾಲವಾಗಿದೆ. ಜಿಲ್ಲೆಯ ಪಾವಗಡ, ಮಧುಗಿರಿ, ಕೊರಟಗೆರೆ ಶಿರಾ ತಾಲೂಕುಗಳಲ್ಲಿ ಶೇಂಗಾ ಬಿತ್ತನೆ ಮಾಡುತ್ತಾರೆ. ಈ ಭಾಗದಲ್ಲಿ ಮಳೆ ಕೊರತೆಯಾದ ಕಾರಣ ಶೇಂಗಾ ಬಿತ್ತನೆಯಲ್ಲಿ ಕುಂಠಿತವಾಗಿದ್ದು, ಶೇಂಗಾ ಬೆಳೆಯನ್ನು 121952 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲು ಗುರಿ ಹೊಂದಿದ್ದು, ಇಲ್ಲಿಯವರೆಗೆ 1172 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿದೆ. ಜು.15ರವೆರೆಗೆ ಬಿತ್ತನೆಗೆ ಕಾಲಾವ ಕಾಶವಿದೆ. ರೈತರು ಭೂಮಿ ಹಸನು ಮಾಡಿಕೊಂಡು ಬೀಜಗಳನ್ನು ಕೃಷಿ ಕೇಂದ್ರಗಳಲ್ಲಿ ಖರೀದಿಸಿದ್ದು, ಮಳೆಗಾಗಿ ಮುಗಿಲು ನೋಡುತ್ತಿದ್ದಾರೆ.

ಬಿತ್ತನೆಯಲ್ಲಿ ಕುಂಠಿತ: ರಾಜ್ಯದ ವಿವಿಧ ಕಡೆ ಭ‌ರ್ಜರಿ ಮಳೆಯಾಗುತ್ತಿದೆ ಆದರೆ ಜಿಲ್ಲೆಯಲ್ಲಿ ಮುಂಗಾರು ಮಳೆ ಆಶಾದಾಯಕವಾಗಿ ಬರುತ್ತಿಲ್ಲ. ಜಿಲ್ಲೆಯ ರೈತರು ಪ್ರಧಾನ ಬೆಳೆಗಳಾದ ಶೇಂಗಾ ಹಾಗೂ ರಾಗಿ ಬೆಳೆ ಬಿತ್ತಲು ಭೂಮಿ ಹಸನು ಮಾಡಿಕೊಂಡು ಕಾಯುತ್ತಿದ್ದಾರೆ.

● ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.