ಭಾವೈಕ್ಯತೆ; ಗಣಪನಿಗೆ ಮುಸ್ಲಿಮರಿಂದ ವಿಶೇಷ ಪೂಜೆ: ಪ್ರಸಾದ ವಿತರಣೆ


Team Udayavani, Sep 5, 2022, 9:21 PM IST

1-asdsadas

ಕುಣಿಗಲ್ : ಪಟ್ಟಣದ ಕೋಟೆ ಪ್ರದೇಶದ ದೊಡ್ಡಗರಡಿ ವಿನಾಯಕ ಬಳಗದವರು ಪ್ರತಿಷ್ಠಾಪಿಸಿದ ಗಣಪತಿ ಮೂರ್ತಿಯ ಪೂಜೆಯಲ್ಲಿ ಸೋಮವಾರ ಮುಸ್ಲಿಂ ಭಾಂದವರು ಭಾಗವಹಿಸಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

ವಿನಾಯಕ ಬಳಗದವರು ಪ್ರತಿ ವರ್ಷದಂತೆ ಈ ವರ್ಷವೂ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು, , ಗಣಪತಿ ಮೂರ್ತಿ ಪೂಜೆಯನ್ನು ನಿತ್ಯ ಒಬ್ಬರು ವಹಿಸಿಕೊಂಡು ಪೂಜೆ ಹಾಗೂ ಪ್ರಸಾದ ಮಾಡಿಸುತ್ತಿದ್ದರು, ಆದರೆ ಸೋಮವಾರ ಕೋಟೆ ಪ್ರದೇಶದ ಪುರಸಭಾ ಮಾಜಿ ಉಪಾಧ್ಯಕ್ಷ ಅಬ್ದುಲ್ ಅಮೀದ್, ಮುಖಂಡ ತಾಲೀಪ್‌ಪಾಷ ಸೇರಿದಂತೆ ಹಲವು ಮುಸ್ಲಿಂ ಭಾಂದವರು ತಮ್ಮ ಸ್ವಂತ ಖರ್ಚಿನಿಂದ ಗಣಪತಿ ಮೂರ್ತಿಗೆ ಪೂಜೆ ಇಟ್ಟುಕೊಂಡು, ಪೂಜೆ ನೆರವೇರಿಸಿದರು, ಬಳಿಕ ಪ್ರಸಾದ ವಿತರಣೆ ಮಾಡಿದ್ದಾರೆ. ಹಿಂದು, ಮುಸ್ಲಿಮರ ಸೌಹಾರ್ಧತೆಗೆ ಕುಣಿಗಲ್ ಸಾಕ್ಷಿಯಾಗಿದೆ.

ಪುರಸಭಾ ಸದಸ್ಯ ಕೋಟೆ ನಾಗಣ್ಣ ಮಾತನಾಡಿ ಕುಣಿಗಲ್ ಇತಿಹಾಸದಲ್ಲೇ ಮುಸ್ಲಿಂ ಭಾಂದವರು ಗಣಪತಿಗೆ ಪೂಜಾ ಕಾರ್ಯವನ್ನು ಇಟ್ಟುಕೊಂಡು ಪೂಜೆ ಸಲ್ಲಿಸಿರುವುದು ಹಾಗೂ ಪ್ರಸಾದವನ್ನು ವಿತರಣೆ ಮಾಡಿರುವುದು ಇದು ಮೊದಲನೆಯದಾಗಿದೆ ಅಲ್ಲದೆ ಹಿಂದೂ, ಮುಸ್ಲಿಮರ ರಾಷ್ಟ್ರೀಯ ಭಾವೈಕ್ಯತೆಗೆ ಕಾರಣವಾಗಿದೆ, ಬಹು ವರ್ಷಗಳಿಂದಲ್ಲೂ ಈ ಭಾಗದಲ್ಲಿ ಹಿಂದೂ ಮುಸ್ಲಿಂಮರು ಸಹೋದರರಂತೆ ಒಟ್ಟಾಗಿ ಬದುಕುತ್ತಿದ್ದೇವೆ, ಮುಸ್ಲಿಂ ಭಾಂದವರು ಮಾಡುವ ಧಾರ್ಮಿಕ ಕಾರ್ಯದಲ್ಲಿ ಹಿಂದೂಗಳು ಭಾಗವಹಿಸುತ್ತಿದ್ದೇವೆ, ಹಿಂದೂಗಳು ಮಾಡುವ ಧಾರ್ಮಿಕ ಕಾರ್ಯಗಳಿಗೆ ಮುಸ್ಲಿಂ ಭಾಂದವರು ಭಾಗವಹಿಸಿ ಶ್ರದ್ದಾಭಕ್ತಿಯಿಂದ ಪ್ರಾರ್ಥಿಸುತ್ತಿದ್ದಾರೆ, ಇದೆ ರೀತಿ ಇಡೀ ಭಾರತದಲ್ಲೇ ನಡೆಯುವಂತಾಗಲಿ ಎಂದರು.

ಪುರಸಭಾ ಮಾಜಿ ಉಪಾಧ್ಯಕ್ಷ ಅಬ್ದುಲ್ ಅಮೀದ್ ಮಾತನಾಡಿ, ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಹತ್ತು ಹಲವು ಧರ್ಮದ ಹಾಗೂ ವಿವಿಧ ಸಮುದಾಯದ ಜನರು ಸಾವಿರಾರು ವರ್ಷಗಳಿಂದ ಸೌಹಾರ್ಧವಾಗಿ ಬಧುಕುತ್ತಿದ್ದಾರೆ, ಹಲವು ಧರ್ಮಗಳನ್ನು ಹೊಂದಿರುವ ಭಾರತವು ವಿಶ್ವಕ್ಕೆ ಮಾದರಿಯಾಗಿದೆ, ಮನುಷ್ಯನ್ನು ಹುಟ್ಟುವಾಗ ಯಾವುದೇ ಜಾತಿ, ಧರ್ಮ ವನ್ನು ಕಟ್ಟಿಕೊಂಡು ಬರುವುದಿಲ್ಲ. ಜನನವಾದ ಬಳಿಕ ಜಾತಿ ಹಾಗೂ ಧರ್ಮ ಹುಟ್ಟಿಕೊಳ್ಳುತ್ತದೆ, ಆಯಾ ಧರ್ಮದ ಜನರು ತಮ್ಮದೆಯಾದ ರೀತಿಯಲ್ಲಿ ಭಗವಂತನನ್ನು ಪ್ರಾರ್ಥಿಸಲು ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ ಅದನ್ನು ಪ್ರತಿಯೊಬ್ಬರು ಪಾಲಿಸಬೇಕಾಗಿದೆ, ಇಂದು ಗಣಪತಿ ಪೂಜೆ ಕಾರ್ಯದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿರುವುದು ನಮ್ಮಗೆ ಖುಷಿ ತಂದಿದೆ ಭಗವಂತ ಎಲ್ಲರಿಗೂ ಒಳ್ಳಯದು ಮಾಡಲಿ ಎಂದರು.

ಈ ವೇಳೆ ಪುರಸಭಾ ಸದಸ್ಯರಾದ ಉದಯ್‌ಕುಮಾರ್, ಗೋಪಿ ಅರಸ್, ಯುವ ಕಾಂಗ್ರೆಸ್ ಅಧ್ಯಕ್ಷ ಲೋಹಿತ್, ಗರಡಿ ಮನೆಯ ಮುಖ್ಯಸ್ಥ ಪೈಲ್‌ವಾನ್  ಶ್ರೀಕಂಠಯ್ಯ, ಅರ್ಚಕ ಮಹೇಶ್ ಮತ್ತಿತರು ಇದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.