ಲಿಂಗೈಕ್ಯ ಸಿದ್ಧಗಂಗಾ ಶ್ರೀಗಳ ಜಯಂತ್ಯುತ್ಸವ

112ನೇ ಜಯಂತಿಯಲ್ಲಿ ಗದ್ದುಗೆಗೆ ನಮನ ಸಲ್ಲಿಸಿದ ಭಕ್ತರು; ಮಠಾಧೀಶರಿಂದ ವಿಶೇಷ ಪೂಜೆ

Team Udayavani, Apr 2, 2019, 6:00 AM IST

190401kpn61

ತುಮಕೂರು: ಶತಾಯುಷಿ ಸಿದ್ಧಗಂಗಾ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳು 111 ವಸಂತಗಳನ್ನು ಪೂರೈಸಿ ಲಿಂಗೈಕ್ಯರಾಗಿದ್ದು, ಶ್ರೀಗಳ 112ನೇ ವರ್ಷದ ಜಯಂತ್ಯುತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ ಸೋಮವಾರ ಶ್ರೀಮಠದಲ್ಲಿ ಸಿದ್ದಲಿಂಗ ಸ್ವಾಮಿಗಳ ನೇತೃತ್ವದಲ್ಲಿ ನಡೆಯಿತು.

ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ 112ನೇ ವರ್ಷದ ಜಯಂತಿ ಹಿನ್ನೆಲೆಯಲ್ಲಿ ಈ ವರ್ಷವೂ ಭಕ್ತರು ಬೆಳಗ್ಗೆಯಿಂದಲೇ ಶ್ರೀಮಠಕ್ಕೆ ಬಂದಿದ್ದರು. ಆದರೆ ಶ್ರೀಗಳಿಲ್ಲದ ಮಠದಲ್ಲಿ ಶ್ರೀಗಳಿದ್ದಾರೆ ಎನ್ನುವ ಭಾವ ಆವರಿಸಿತ್ತು.

ಮೊದಲ ಬಾರಿಗೆ ಮೂರ್ತ ಶ್ರೀಗಳಿಲ್ಲದ ಜಯಂತ್ಯುತ್ಸವದಲ್ಲಿ ಗುರುವಂದನೆ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಗಳ ಹರಗುರುಚರಮೂರ್ತಿಗಳು ವಿಶೇಷ ಪಾದಪೂಜೆ, ಆರತಿ ಮಾಡಿ ಭಕ್ತಿ ಸಮರ್ಪಿಸಿದರು. ಶಿವಕುಮಾರ ಶ್ರೀಗಳು ಈವರೆಗೆ ಬೆಳಗಿನಜಾವ 3 ಗಂಟೆಗೆ ಎದ್ದು 5 ಗಂಟೆಯೊಳಗೆ ಶಿವಪೂಜೆ ಮಾಡುತ್ತಿದ್ದರು. ಆದರೆ ಶ್ರೀಗಳು ಲಿಂಗೈಕ್ಯರಾಗಿರುವ ಹಿನ್ನೆಲೆ ಶ್ರೀ ಸಿದ್ಧಗಂಗ ಸ್ವಾಮಿಗಳು ಹಿರಿಯ ಶ್ರೀಗಳ ಗದ್ದುಗೆಗೆ ಸೋಮವಾರ ಬೆಳಗ್ಗೆ 4 ಗಂಟೆಗೆ ಹಳೇ ಮಠದಲ್ಲಿ ಇಷ್ಟಲಿಂಗ ಪೂಜೆ ನೆರವೇರಿಸಿದರು. ಅಲ್ಲಿ ನೂರಾರು ಮಂದಿ ಲಿಂಗಪೂಜೆಯನ್ನು ಸಾಕ್ಷೀಕರಿಸಿದರು. ನಂತರ ಇಡೀ ದಿನ ಭಕ್ತರಿಗೆ ದರ್ಶನ ನೀಡದರು. ಅಧಿಕಾರಿಗಳು ಸೇರಿ ಅನೇಕ ಗಣ್ಯರು, ಭಕ್ತರು ಸರತಿಯಲ್ಲಿ ಶಿವಕುಮಾರಸ್ವಾಮಿಗಳ ಗದ್ದುಗೆಗೆ ನಮಿಸಿದರು.

ಭಕ್ತರಿಗೆ ಸಿಹಿ ಊಟ
ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ 112ನೇ ವರ್ಷದ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಭಕ್ತರಿಗೆ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಬೆಳಗ್ಗೆ 5.30 ರಿಂದಲೇ ಬಿಸಿ ಬಿಸಿ ಉಪ್ಪಿಟ್ಟು, ಕೇಸರಿಬಾತ್‌ ವಿತರಿಸಲಾಯಿತು. ಜತೆಗೆ ಇಡ್ಲಿ ಕೂಡ ನೀಡಲಾಯಿತು. ಮಧ್ಯಾಹ್ನ ಊಟದಲ್ಲಿ ಅನ್ನ ಸಾಂಬಾರ್‌, ಪಾಯಸ, ತುಪ್ಪ, ಸಿಹಿಬೂಂದಿ, ಖಾರಬೂಂದಿ, ಕೋಸಂಬರಿ, ತರಕಾರಿ ಕೂಟು ಬಡಿಸಿದರು. 5 ಕಡೆಗಳಲ್ಲಿ ಊಟಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಠದಲ್ಲಿಯೂ ರಾತ್ರಿವರೆಗೆ ನಿರಂತರ ದಾಸೋಹ ನಡೆಯಿತು.

ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು
ತ್ರಿವಿದ ದಾಸೋಹಿ, ಅಭಿನವ ಬಸವಣ್ಣ ಎಂದೆಲ್ಲ ಭಕ್ತರಿಂದ ಕರೆಸಿಕೊಳ್ಳುತ್ತಿದ್ದ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 112ನೇ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಡೆವೋಟೀಸ್‌ ಅಸೋಸಿಯೇಷನ್‌ನಿಂದ 112 ಮಕ್ಕಳಿಗೆ ಶ್ರೀಗಳ ಹೆಸರನ್ನು ನಾಮಕರಣ ಮಾಡಿ ಮಕ್ಕಳಿಗೆ ತೊಟ್ಟಿಲು ನೀಡಿದರು. ಜತೆಗೆ ರಕ್ತದಾನ ಶಿಬಿರವನ್ನು ನಡೆಸಲಾಯಿತು. ಪರಿಸರ ಜಾಗೃತಿ ಹಿನ್ನೆಲೆಯಲ್ಲಿ 112 ಹೊಂಗೆ ಸಸಿಗಳನ್ನು ವಿತರಿಸಲಾಯಿತು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.