ಹುಟ್ಟೂರಿಗೆ ನಾಲ್ಕು ಬಾರಿ ಮಾತ್ರ ಭೇಟಿ
Team Udayavani, Jan 22, 2019, 12:55 AM IST
ಮಾಗಡಿ: ಸಿದ್ಧಗಂಗೆಯ ಸಿದ್ಧಿಪುರುಷ ದೀಕ್ಷೆ ಪಡೆದ ನಂತರ ಕೇವಲ ನಾಲ್ಕು ಬಾರಿ ಮಾತ್ರ ತಮ್ಮ ಹುಟ್ಟೂರಿಗೆ ಭೇಟಿ ನೀಡಿದ್ದರು. ಅದರಲ್ಲೂ ಒಮ್ಮೆ ವಿ.ಸೋಮಣ್ಣ ಸಚಿವರಾಗಿದ್ದಾಗ ವೀರಾಪುರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಆಯೋಜಿಸಿದ್ದರು.
ಆ ವೇಳೆ ಡಾ.ಶಿವಕುಮಾರ ಸ್ವಾಮೀಜಿ ಅವರನ್ನು ವೇದಿಕೆಗೆ ಆಹ್ವಾನಿಸಲಾಗಿತ್ತು. ಭೇಟಿ ನೀಡುವ ವೇಳೆ ಅವರ ಸಹೋದರರು ಮನೆ ಮುಂದೆ ಚಪ್ಪರ ಹಾಕಿ ಶ್ರೀಗಳ ಪಾದಪೂಜೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಗ್ರಾಮಕ್ಕೆ ಭೇಟಿ ನೀಡಿದ ಶ್ರೀಗಳು ಮನೆಯೊಳಗೆ ಕರೆದರೂ ಒಳಗಡೆ ಹೋಗಲಿಲ್ಲ. ಮನೆಯ ಹೊರಗಡೆಯೇ ಕುಳಿತು ಪಾದಪೂಜೆ ಸ್ವೀಕರಿಸಿ ವೇದಿಕೆಗೆ ತೆರಳಿದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ವೇದಿಕೆಯಲ್ಲಿ ಧ್ಯಾನ ಮಂದಿರ, ಗ್ರಂಥಾಲಯ, ಅಧ್ಯಯನ ಕೇಂದ್ರ ಸ್ಥಾಪಿಸುವ ಮೂಲಕ ವೀರಾಪುರವನ್ನು ವಿಶ್ವಕ್ಕೆ ಪರಿಚಯಿಸುತ್ತೇವೆ ಎಂದ ಗಣ್ಯರು ತಮ್ಮಭರವಸೆಯನ್ನು ಮರೆತಿದ್ದಾರೆ ಎಂದು ಗ್ರಾಮಸ್ಥರು ನೋವನ್ನು ತೋಡಿಕೊಂಡರು.
ವೀರಾಪುರದಲ್ಲಿ ಆವರಿಸಿದೆ ಮೌನ : ಶತಾಯುಷಿ ಡಾ.ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರು ಮಾಗಡಿಯ ವೀರಾಪುರದ ಜನರಲ್ಲಿ ಮೌನ ಆವರಿಸಿದೆ. ಗ್ರಾಮದ ಭಕ್ತರು ಸಾರ್ವಜನಿಕ ಸ್ಥಳಗಳು ಮತ್ತು ಮನೆಗಳಲ್ಲಿಯೇ ಶ್ರೀಗಳ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು.
ಸಿದ್ಧಗಂಗೆಯ ದಿವ್ಯಬೆಳಕು ನಂದಿತು ಎಂಬ ಸುದ್ದಿ ತಿಳಿಯುತ್ತಿದ್ದಂತೆ ಶೋಕ ಸಾಗರದಲ್ಲಿ ಜನರು ಶ್ರೀಗಳ ಅಂತಿಮ ದರ್ಶನಕ್ಕಾಗಿ ಸಿದ್ಧಗಂಗೆ ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಶ್ರೀಗಳು ಮನುಕುಲಕ್ಕೆ ನಡೆದಾಡುವ ದೇವರಾಗಿದ್ದರು.
ಅವರ ಶಿವೈಕ್ಯ ಎಲ್ಲರಲ್ಲೂ ನೋವನ್ನುಂಟು ಮಾಡಿದೆ. ಶ್ರೀ ಶಿವಕುಮಾರ ಸ್ವಾಮೀಜಿ ಮತ್ತೆ ವೀರಾಪುರದಲ್ಲೇ ಹುಟ್ಟಿ ಬರಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ