ಈ ಬಾರಿ ಇಫ್ತಾರ್ಕೂಟ ಆಯೋಜನೆಯಿಲ್ಲ: ಶ್ರೀ
Team Udayavani, Jun 10, 2018, 7:00 AM IST
ತುಮಕೂರು: ಈ ಬಾರಿ ಇಫ್ತಾರ್ ಕೂಟ ಆಯೋಜನೆಯಿಲ್ಲ ಎಂದು ಪೇಜಾವರ ಪೀಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿಯವರು ಸ್ಪಷ್ಟಪಡಿಸಿದ್ದಾರೆ.
ನಗರದ ಕೃಷ್ಣ ಕಲ್ಯಾಣ ಮಂಟಪದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಾಧ್ವ ಬ್ರಾಹ್ಮಣರ ಸಮ್ಮೇಳನದಲ್ಲಿ
ಪಾಲ್ಗೊಂಡ ಬಳಿಕ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕಳೆದ ಬಾರಿ ಇಫ್ತಾರ್ ಕೂಟ ಆಯೋಜನೆ ಮಾಡಲಾಗಿತ್ತು. ಈ ಬಾರಿ ನಾನು ಪ್ರವಾಸದಲ್ಲಿ ಇರುವುದರಿಂದ ಅದು
ಸಾಧ್ಯವಾಗಲಿಲ್ಲ. ಜೊತೆಗೆ, ಮಠದಲ್ಲಿ ಇಫ್ತಾರ್ ಕೂಟ ಆಯೋಜನೆಗೆ ಮುಸ್ಲಿಂ ಬಾಂಧವರಲ್ಲಿ ಆಸಕ್ತಿ ಇಲ್ಲ. ಕಳೆದ
ಬಾರಿ ಇದ್ದಷ್ಟು ಆಸಕ್ತಿ ಇಲ್ಲ. ಕಳೆದ ಬಾರಿ ದೇವರ ಮೂರ್ತಿ ಇರುವ ಕೊಠಡಿಯಲ್ಲಿ ಇಫ್ತಾರ್ ಆಯೋಜನೆ ಮಾಡಿದ್ದಾರೆಂಬ ಅಪನಂಬಿಕೆ ಅವರಲ್ಲಿದೆ. ಆದರೆ, ಆ ಕೊಠಡಿಯಲ್ಲಿ ಮೂರ್ತಿ ಇರಲಿಲ್ಲ. ಪಕ್ಕದ ಕೊಠಡಿಯಲ್ಲಿ
ಮೂರ್ತಿ ಇತ್ತು. ಹಾಗಾಗಿ, ಮುಸ್ಲಿಂ ಬಾಂಧವರು ಇಫ್ತಾರ್ ಗೆ ಅಷ್ಟೊಂದು ಆಸಕ್ತಿ ತೋರುತ್ತಿಲ್ಲ ಎಂದು ಹೇಳಿದರು.