ತಳ ಸಮುದಾಯಕ್ಕೆ ಬಜೆಟ್‌ನಲ್ಲಿ ಅನ್ಯಾಯ


Team Udayavani, Mar 15, 2021, 2:06 PM IST

ತಳ ಸಮುದಾಯಕ್ಕೆ ಬಜೆಟ್‌ನಲ್ಲಿ ಅನ್ಯಾಯ

ತುಮಕೂರು: ರಾಜ್ಯದಲ್ಲಿ ಆರ್ಥಿಕ, ಸಾಮಾಜಿ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಶೇ. 65ರಷ್ಟಿರುವ ಎಲ್ಲ ತಳಸಮುದಾಯಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಕೇವಲ 500 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ತಾರತಮ್ಯ ಮಾಡಲಾಗಿದೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಮರಳೂರು ಕೆಎನ್‌ಆರ್‌ ಅಭಿಮಾನಿಗಳ ಬಳಗ ಮತ್ತು 28ನೇ ವಾರ್ಡ್‌ನನಾಗರಿಕರ ವತಿಯಿಂದ ಮರಳೂರಿನಲ್ಲಿ ನೂತನ ಮೇಯರ್‌ ಬಿ.ಜಿ.ಕೃಷ್ಣಪ್ಪ ಹಾಗೂಉಪಮೇಯರ್‌ ನಾಜೀಮಾಭಿ ಇಸ್ಮಾಯಿಲ್‌ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಬಜೆಟ್‌ನಲ್ಲಿ ಹಿಂದುಳಿದಿರುವ ತಳ ಸಮುದಾಯಗಳಿಗೆ ಭಾರೀ ಅನ್ಯಾಯವಾಗಿದೆ. ಇಂದು ರಾಜ್ಯದಲ್ಲಿರುವ ಶೇ.13.4ರಷ್ಟುಒಕ್ಕಲಿಗರಿಗೆ ಅಭಿವೃದ್ಧಿ ನಿಗಮ ಮಾಡಿ 500 ಕೋಟಿ ರೂ. ಬಿಡುಗಡೆ ಮಾಡಿದರೆ,ಶೇ.21ರಷ್ಟಿರುವ ಲಿಂಗಾಯಿತರಿಗೂ 500ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಎಲ್ಲತಳ ಸಮುದಾಯಗಳೂ ಸೇರಿ 500 ಕೋಟಿರೂ.ಇದು ಹಿಂದುಳಿದ ಜನಾಂಗಕೆ ಅನ್ಯಾಯ ವಾಗಿದ್ದು. ಈ ಬಗ್ಗೆ ಶಾಸಕರುವಿಧಾನಸಭೆ ಅಧಿವೇಶನದಲ್ಲಿ ತಳಸಮುದಾಯಗಳ ಅನುದಾನ ಹೆಚ್ಚಿಸಲು ಧ್ವನಿ ಎತ್ತಬೇಕು ಎಂದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಮಾತನಾಡಿ, ಮರಳೂರು ಗ್ರಾಮದ ಜನರ ಬಹುದಿನಗಳಬೇಡಿಕೆಯಾದ ಮರಳೂರು ಕೆರೆಗೆ ಇನ್ನು 6 ತಿಂಗಳಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನೀರುಹರಿಸಲು ಎಲ್ಲ ರೀತಿಯ ಸಿದ್ಧತೆ ನಡೆದಿವೆ.ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಕೆರೆಗಳುತುಂಬಿಸಿಕೊಳ್ಳಬಹುದು ಎಂದು ಯಾರಿಗೂಯೋಚನೆ ಇರಲಿಲ್ಲ, ಈ ಹಿಂದೆ ಇದ್ದವರು ಬರೀ ಕಟ್ಟಡ, ರಸ್ತೆಗಳು ನಿರ್ಮಾಣ ಮಾಡಲುಹೊರಟಿದ್ದರು. ನಾವು ಗೆದ್ದ ಮೇಲೆ ಸಾಕಷ್ಟು ಕ್ರಿಯಾ ಯೋಜನೆ ಬದಲಾವಣೆ ಮಾಡಿದ ಪರಿಣಾಮ ಇಂದು ಅಮಾನಿಕೆರೆಗೆ ನೀರು ಹರಿದಿದೆ ಎಂದರು.

ನೀರು ಹರಿಸಲು ಸಿದ್ಧತೆ: ಗಂಗಸಂದ್ರ ಕೆರೆಗೆ ಗ್ರಾವಿಟಿ ಮೂಲಕ ನೀರು ಹರಿಸಲು ಸಿದ್ಧತೆನಡೆದಿದ್ದು, ಟೆಂಡರ್‌ ಕೂಡ ಆಗಿದೆ. ಇನ್ನು 7 ತಿಂಗಳೊಳಗೆ ಈ ಎರಡೂ ಕೆರೆಗಳಿಗೆ ನೀರುಹರಿಯಲಿದ್ದು, ಈ ಎರಡೂ ಕೆರೆಗಳುತುಂಬಿದರೆ ತುಮಕೂರು ನಗರದ ನಾಗರಿಕರಿಗೆಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗಲಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಮೇಯರ್‌ ಬಿ.ಜಿ. ಕೃಷ್ಣಪ್ಪ ಮಾತನಾಡಿ, ಪಾಲಿಕೆ ಆಡಳಿತವನ್ನುಸರಳೀಕರಣಗೊಳಿಸಿ ಸಾರ್ವಜನಿಕರ ಕೆಲಸಸುಗಮವಾಗಿ ನಡೆಯಲು ಮತ್ತುಸಾರ್ವಜನಿಕರ ಯಾವುದೇ ಅರ್ಜಿಗಳುತ್ವರಿತಗತಿಯಲ್ಲಿ ವಿಲೇವಾರಿ ಮಾಡಲು ಎಲ್ಲರೀತಿಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆಪಾಲಿಕೆಯ 35 ವಾರ್ಡುಗಳ ಸದಸ್ಯರೂಸಹಕರಿಸುತ್ತಿದ್ದಾರೆ ಎಂದು ತಿಳಿಸಿದರು.

ಪಾಲಿಕೆಯಲ್ಲಿ ಅನುದಾನದ ಕೊರತೆ: 28ನೇವಾರ್ಡಿನ ಪಾಲಿಕೆ ಸದಸ್ಯ ಧರಣೇಂದ್ರ ಕುಮಾರ್‌ ಮಾತನಾಡಿ, ಪ್ರಗತಿ ಬಡಾವಣೆ ಮತ್ತು ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆಗಳಅಭಿವೃದ್ಧಿ, ಚರಂಡಿಗಳ ನಿರ್ಮಾಣವಾಗಿಲ್ಲ, 8ಕಿ.ಮೀ.ರಸ್ತೆ ಮೆಡ್ಲಿಂಗ್‌ ರಸ್ತೆಯನ್ನಾಗಿಯಾದರೂಮಾಡಿದರೆ ಆ ಭಾಗದ ಜನತೆಗೆಅನುಕೂಲವಾಗಲಿದೆ. ಪಾಲಿಕೆಯಲ್ಲಿಅನುದಾನದ ಕೊರತೆಯಿದ್ದು, ಶಾಸಕರ ವಿಶೇಷಅನುದಾನದಲ್ಲಿ ಹಣ ನೀಡಿದರೆ ರಸ್ತೆ ಮತ್ತುಚರಂಡಿ ನಿರ್ಮಾಣ ಮಾಡಿ ಸಾರ್ವಜನಿಕರಿಗೆಅನುಕೂಲ ಕಲ್ಪಿಸಲು ಸಹಕಾರಿಯಾಗುತ್ತದೆ ಎಂದರು.

17ನೇ ವಾರ್ಡಿನ ಸದಸ್ಯ ಮಂಜುನಾಥ್‌, ಮರಳೂರು ಮಾಜಿ ಛೇರ್ಮೇನ್‌ ಭೀಮಯ್ಯ, ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪುರುಷೋತ್ತಮ್‌, ಗಳಿಗೇನಹಳ್ಳಿ ಗ್ರಾಪಂ ಉಪಾಧ್ಯಕ್ಷೆ ಧನಲಕ್ಷ್ಮೀ, ಪ್ರತಾಪ್‌ ಮದಕರಿ, ರಾಮಾಂಜಿನೇಯ ಇದ್ದರು.

ನಗರದ ಅಭಿವೃದ್ಧಿಗೆ ಪಕ್ಷಾತೀತ, ಜಾತ್ಯತೀತವಾಗಿ ಎಲ್ಲರೂಶ್ರಮಿಸಬೇಕಿದೆ. ಇಂದು ಸ್ಮಾರ್ಟ್‌ಸಿಟಿ ಯೋಜನೆ ಬಂದಿದೆ. ಮತ್ತೂಂದುಮಹಾತ್ಮಗಾಂಧಿ ನಗರ ವಿಕಾಸಅನುದಾನವೂ ಬಂದಿದೆ. ಇವೆಲ್ಲವೂಸದುಪಯೋಗ ಪಡಿಸಿ ಕೊಂಡರೆತುಮಕೂರು ನಗರ ಮಾದರಿ ನಗರವಾಗಿ ಅಭಿವೃದ್ಧಿಗೊಳ್ಳುತ್ತದೆ. -●ಜಿ.ಬಿ.ಜ್ಯೋತಿಗಣೇಶ್‌, ಶಾಸಕ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.