ನೆರೆ ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫ‌ಲ


Team Udayavani, Feb 23, 2020, 3:00 AM IST

re-parihara

ತುಮಕೂರು: ರಾಜ್ಯ ಸರ್ಕಾರ ನೆರೆಪರಿಹಾರ ಒದಗಿಸುವಲ್ಲಿ ವಿಫ‌ಲವಾಗಿದ್ದು, ಜನವಿರೋಧಿ ಸರ್ಕಾರದ ವಿರುದ್ಧ ಜನ ರೊಚ್ಚಿಗೆದ್ದು ಬಡಿಗೆ ತೆಗೆದುಕೊಂಡು ಒಡೆಯುವ ಕಾಲ ದೂರವಿಲ್ಲ ಎಂದು ಕೆಪಿಸಿಸಿ ವಕ್ತಾರ ವಿ.ಎಸ್‌.ಉಗ್ರಪ್ಪ ವಾಗ್ಧಾಳಿ ನಡೆಸಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಪ್ರವಾಹದಿಂದ ಲಕ್ಷಾಂತರ ಕೋಟಿ ರೂ. ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ ಒಂದೊಂದು ಬಾರಿ ನಾನಾ ಬಗೆಯ ಹೇಳಿಕೆ ನೀಡಿ ನಷ್ಟದ ಪ್ರಮಾಣ ತಿಳಿಸುತ್ತಿದೆ. ಒಂದು ಲಕ್ಷ ಕೋಟಿ ನಷ್ಟವಾಗಿದ್ದರೂ ಕೇಂದ್ರ ಸರ್ಕಾರ ಕೇವಲ 1,869 ಕೋಟಿ ಬಿಡುಗಡೆ ಮಾಡಿದೆ. ಪರಿಹಾರ ಸಿಗದ ದಿವ್ಯಾಂಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಸರ್ಕಾರವೇ ನೇರ ಹೊಣೆ ಎಂದು ದೂರಿದರು.

ಜೂಜುಕೇಂದ್ರವೇ ಬೇಕೆ?: ಸರ್ಕಾರ ಜೂಜಿಗೆ, ಹೆಂಡಕ್ಕೆ ಪ್ರೋತ್ಸಾಹಿಸುವ ಸರ್ಕಾರವಾಗಿದೆ. ಒಬ್ಬ ಸಚಿವ ಹಾದಿ-ಬೀದಿಯಲ್ಲಿ ಹೆಂಡ ಮಾರುವುದಾಗಿ ತಿಳಿಸುತ್ತಾರೆ. ಮತ್ತೂಬ್ಬರು ಆರ್ಥಿಕ ಪ್ರಗತಿಗೆ ಜೂಜಾಡಿಸುತ್ತೇವೆ ಎನ್ನುತ್ತಾರೆ. ಕರ್ನಾಟಕದ ಕರಾವಳಿ ತೀರ ಹಾಗೂ ಹಂಪಿ, ಸೋಮನಾಥಪುರ, ಬೇಲೂರು, ಹಳೇಬೀಡಿನಂತಹ ಭವ್ಯ ಕಲೆ ಪ್ರಕೃತಿ ಸಂಪತ್ತು ನಮ್ಮಲ್ಲಿ ಇರುವಾಗ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಂಡ, ಜೂಜುಕೇಂದ್ರವೇ ಬೇಕೆ?

ಸರ್ಕಾರ ಇದೇ ರೀತಿ ಮುಂದುವರಿದರೆ ಜನ ನಿಮ್ಮ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಎಚ್ಚರಿಸಿದರು. ಗುತ್ತಿಗೆ ಶಿಕ್ಷಕರಿಗೆ ವೇತನ ನೀಡಲು, ವೃದ್ಧಾಪ್ಯ, ಅಂಗವಿಕಲ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಈಗಾಗಲೇ ದೇಶದ ಮೇಲೆ 91.1ಲಕ್ಷ ಕೋಟಿ ಸಾಲವಿದೆ. ಮತ್ತೆ 8 ಲಕ್ಷ ಕೋಟಿ ಸಾಲ ಮಾಡಲಾಗುತ್ತಿದೆ. ಒಟ್ಟು 99 ಲಕ್ಷ ಕೋಟಿ ಸಾಲವಾಗುತ್ತದೆ. ದೇಶದ ಪ್ರತಿ ವ್ಯಕ್ತಿಯ ತಲೆ ಮೇಲೆ 28.200 ರೂ. ಸಾಲದ ಹೊರೆ ಹೊರಿಸಿದ್ದಾರೆ.

ವಿದೇಶಿ ಶೋಕಿ ಸಲುವಾಗಿ ದೇಶದ ತೆರಿಗೆ ಹಣ ಪೋಲಾಗುತ್ತಿದೆ. ಇದಕ್ಕೆಲ್ಲಾ ಮೋದಿಯವರ ತಪ್ಪು ಆರ್ಥಿಕ ನೀತಿಗಳೇ ಕಾರಣ. ಇದನ್ನು ಮರೆಮಾಚಲು ಜನರನ್ನು ಭಾವನಾತ್ಮಕ ವಿಚಾರಗಳ ಮೂಲಕ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್‌ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಪಕ್ಷ. ರಾಷ್ಟ ವಿರೋಧಿಗಳನ್ನು ಎಂದಿಗೂ ಬೆಂಬಲಿಸುವುದಿಲ್ಲ. ಕಾಂಗ್ರೆಸ್‌ ಬಗ್ಗೆ ಆಧಾರ ರಹಿತ ಆರೋಪ ಎಂದಿಗೂ ಸಹಿಸಲಾಗದು ಎಂದರು.

ಇತ್ತೀಚೆಗೆ ಉತ್ತರಾಖಂಡ ಸರ್ಕಾರದ ಪ್ರಕರಣವೊಂದಕ್ಕೆ ಸಂಬಂಧಿಸಿ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್‌ ತೀರ್ಪು ಸಂವಿಧಾನದ ಕಲಂ 15ಎ ಗೆ ವಿರುದ್ಧವಾಗಿದೆ. ದೇಶದಲ್ಲಿ ಮನುವಾದ, ಅಂಬೇಡ್ಕರ್‌ ವಾದ, ಗಾಂಧಿ ವಾದ, ಗೂಡ್ಸೆ ವಾದದ ನಡುವೆ ಸಂಘರ್ಷ ಏರ್ಪಟ್ಟಿದೆ. ಕಾಂಗ್ರೆಸ್‌ ಅಂಬೇಡ್ಕರ್‌ ಮತ್ತು ಗಾಂಧಿ ವಾದ ಅನುಸರಿಸುತ್ತದೆ ಎಂದು ತಿಳಿಸಿದರು. ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಹಾಗೂ ಜಿಪಂ ಸದಸ್ಯ ಕೆಂಚಮಾರಯ್ಯ, ಕಾಂಗ್ರೆಸ್‌ ಮುಖಂಡರಾದ ನಿರಂಜನ್‌, ಹೆಚ್‌.ಸಿ.ಹನುಮಂತಯ್ಯ, ನರಸೀಯಪ್ಪ, ಮಂಜುನಾಥ್‌, ನಾಗರಾಜು ಇದ್ದರು.

ಇದೇನಾ ಬಿಜೆಪಿ ರಾಷ್ಟ್ರಪ್ರೇಮ?: ಜೂಜುಕೇಂದ್ರ, ಹೆಂಡ ಮಾರಾಟ ಹೆಚ್ಚಳದಿಂದ ರಾಜ್ಯ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಪ್ರವಾಸೋದ್ಯಮ ಇಲಾಖೆಯ ಸಂಪನ್ಮೂಲ ಕ್ರೋಢೀಕರಣದ ಹಿನ್ನೆಲೆಯಲ್ಲಿ ವಿದೇಶಿಯರ ಆಕರ್ಷಣೆಗೆ ಕ್ಯಾಸಿನೋದಂತಹ ಜೂಜು ಕೇಂದ್ರ ತೆರೆಯುವುದಾಗಿ ಸಚಿವ ಸಿ.ಟಿ.ರವಿ ಹೇಳುತ್ತಾರೆ. ಅಬಕಾರಿ ಸಚಿವರು ಹೆಂಡ ಮಾರಾಟ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಸಂಪನ್ಮೂಲ ಸಂಗ್ರಹಕ್ಕೆ ಯುವಜನರಿಗೆ ಮಾರಕವಾದ ಜೂಜು ಕೇಂದ್ರಗಳು ಅಗತ್ಯವೇ, ಇದೇನಾ ಬಿಜೆಪಿಯ ರಾಷ್ಟ್ರಪ್ರೇಮ ಎಂದು ವಿ.ಎಸ್‌ ಉಗ್ರಪ್ಪ ಪ್ರಶ್ನಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.