ಇಂದಿರಾ ಕ್ಯಾಂಟಿನ್‌ ಆಹಾರದಲ್ಲಿ ಕಲ್ಲಿನ ಚೂರು!


Team Udayavani, Sep 10, 2019, 4:29 PM IST

tk-tdy-1

ಕುಣಿಗಲ್: ತಾಲೂಕು ಕಚೇರಿ ಆವರಣದಲ್ಲಿ ನಾಗರಿಕರಿಗೆ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟ ಒದಗಿಸಲು ಪ್ರಾರಂಭಿಸಿರುವ ಇಂದಿರಾ ಕ್ಯಾಂಟಿನ್‌ ಗುಣಮಟ್ಟದ ಆಹಾರ ವಿತರಿಸುವಲ್ಲಿ ವಿಫಲವಾಗಿದೆ ಎಂಬ ಸಾರ್ವಜನಿಕರಿಂದ ಆರೋಪ ಕೇಳಿ ಬಂದಿದೆ.

ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದ್ದು, ರೈತರು, ಕೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಆಟೋ ಚಾಲಕರಿಗೆ ನೆರವಾಗಿದೆ ಆದರೆ ಪ್ರಾರಂಭದ ಮೊದಲ ಕೆಲ ದಿನ ಉತ್ತಮ ಹಾಗೂ ಗುಣಮಟ್ಟದ ಆಹಾರ ನೀಡಲಾಗುತಿತ್ತು. ಇತ್ತೀಚಿನ ದಿನದಿಂದ ಆಹಾರ ಗುಣಮಟ್ಟ ಕಳೆದುಕೊಳ್ಳುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಕ್ಯಾಂಟಿನ್‌ನಲ್ಲಿ ಒಂದು ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಹೊತ್ತಿನ ಊಟಕ್ಕೆ ತಲಾ 300 ಜನರಿಗೆ ಟೋಕನ್‌ ನೀಡಲಾಗುತ್ತಿದೆ. ಆಹಾರ ಸಿದ್ಧಪಡಿಸಿ ವಿತರಿಸಲು ಗುತ್ತಿಗೆ ನೀಡಲಾಗಿದೆ. ಕೆಲವರಿಗೆ ಊಟ ಸಿಕ್ಕಿದರೆ ಮತ್ತೆ ಕೆಲವರು ಊಟ ಸಿಗದೆ ವಾಪಸ್‌ ಹೋಗುತ್ತಿರುವುದು ನಿತ್ಯ ಕಾಣಬಹುದಾಗಿದೆ.

ಆಹಾರದಲ್ಲಿ ಕಲ್ಲು: ಆರಂಭದಲ್ಲಿ ಕೆಲವು ದಿನ ತಹಶೀಲ್ದಾರ್‌ ವಿ.ಆರ್‌. ವಿಶ್ವನಾಥ್‌, ಪುರಸಭಾ ಮುಖ್ಯಾಧಿಕಾರಿ ಆರ್‌. ರಮೇಶ್‌ ಸೇರಿ ಜನಪ್ರತಿ ನಿಧಿಗಳು ಪರಿಶೀಲನೆ ಆಗಮಿಸುತ್ತಿದ್ದಾಗ ಶುಚಿ, ರುಚಿಕರ ತಿಂಡಿ ಹಾಗೂ ಊಟ ನೀಡಲಾಗುತಿತ್ತು. ಆದರೆ ಅಧಿಕಾರಿಗಳು ಇತ್ತಕಡೆ ಬರುವುದು ಕಡಿಮೆ ಯಾದ ಕಾರಣ ಆಹಾರದಲ್ಲಿ ಗುಣಮಟ್ಟ ಕಡಿಮೆಯಾಗಿದ್ದು, ತಿಂಡಿ ಮತ್ತು ಊಟದಲ್ಲಿ ಕಲ್ಲಿನ ಚೂರು ಸಿಗುತ್ತಿದೆ. ಅನ್ನ ಸರಿಯಾಗಿ ಬೇಯಿಸದೆ ಅರ್ಧ ಬೆಂದ ಅನ್ನ ವಿತರಿಸಲಾಗುತ್ತಿದೆ. ಸಾಂಬಾರ್‌ನಲ್ಲಿ ತರಕಾರಿ ಹುಡುಕುವಂತಾಗಿದೆ ಎಂಬುದು ಮಲ್ಲಿ ಪಾಳ್ಯದ ಆಟೋ ಚಾಲಕ ನಾಗರಾಜು ಆರೋಪ.

ತೂಕದಲ್ಲಿ ಮೋಸ: ಬೆಳಗ್ಗೆ ಉಪಾಹಾರಕ್ಕೆ 5 ರೂ. ಹಾಗೂ ಮಧ್ಯಾಹ್ನ ಹಾಗೂ ರಾತ್ರಿ ಊಟಕ್ಕೆ 10 ರೂ. ನಿಗದಿಪಡಿಸಲಾಗಿದೆ. ಸರ್ಕಾರ ಒಂದು ತಿಂಡಿ ಹಾಗೂ ಎರಡು ಊಟಕ್ಕೆ ಒಬ್ಬ ವ್ಯಕ್ತಿಗೆ 57 ರೂ. ಸಹಾಯಧನ ನೀಡುತ್ತಿದೆ. ಆದರೆ ಸರ್ಕಾರ ನಿಗದಿಪಡಿಸಿರುವ ಪ್ರಮಾಣದಲ್ಲಿ ಆಹಾರ ನೀಡದೆ ಕಡಿಮೆ ಪ್ರಮಾಣದ ಆಹಾರ ನೀಡಲಾಗುತ್ತಿದೆ ಎಂದು ಲಂಚಮುಕ್ತ ತಾಲೂಕು ಅಧ್ಯಕ್ಷ ಎಂ.ಡಿ. ಮೋಹನ್‌ ದೂರು.

ಹೆಸರಿಗಷ್ಟೇ ಆಹಾರ ವಿತರಣಾ ಪಟ್ಟಿ: ಬೆಳಗ್ಗೆ ಇಡ್ಲಿ, ಪುಳಿಯೊಗರೆ, ಖಾರಬಾತ್‌, ಪೋಂಗಲ್, ರವಾ ಕಿಚಡಿ, ಚಿತ್ರಾನ್ನ, ವಾಂಗಿ ಬಾತ್‌, ಮತ್ತು ಕೇಸರಿ ಬಾತ್‌, ಮಧ್ಯಾಹ್ನ ಅನ್ನ, ತರಕಾರಿ ಸಾಂಬಾರ್‌, ಮೊಸರನ್ನ ಹಾಗೂ ರಾತ್ರಿ ಟೊಮ್ಯಾಟೋ ಬಾತ್‌, ಚಿತ್ರಾನ್ನ, ವಾಂಗಿಬಾತ್‌, ಬಿಸಿಬೇಳೆಬಾತ್‌, ಮೆಂತೆ ಪಲಾವ್‌, ಪುಳಿಯೊಗರೆ, ಮತ್ತು ಮೊಸರನ್ನ, ಪಲಾವ್‌, ಮೊಸರನ್ನ ಪ್ರತಿದಿನ ನೀಡಲಾಗುವುದೆಂದು ಆಹಾರ ವಿತರಣಾ ಪಟ್ಟಿಯಲ್ಲಿ ಹಾಕ ಲಾಗಿದೆ. ಆದರೆ ಕ್ಯಾಂಟಿನ್‌ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಇಡ್ಲಿ ಹಾಗೂ ರವಾ ಕಿಚಡಿ ರುಚಿ ಜನ ನೋಡಿಲ್ಲ. ಇಡ್ಲಿ ಕೇಳಿದರೆ ಸ್ಟೀಮ್‌ ಬಂದಿಲ್ಲ ಎಂದು ಆಹಾರ ವಿತರಕರು ಸಬೂಬು ಹೇಳುತ್ತಾರೆ.

ಕ್ಯಾಂಟಿನ್‌ ಅವವ್ಯಸ್ಥೆ: ಬಡಜನರ ಹೊಟ್ಟೆ ತುಂಬಿಸಲು ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಿ ಇಂದಿರಾ ಕ್ಯಾಂಟಿನ್‌ ಪ್ರಾರಂಭಿಸಿ ಕಡಿಮೆ ದರದಲ್ಲಿ ಆಹಾರ ಪೂರೈಕೆಗೆ ಕ್ರಮ ಕೈಗೊಂಡಿದೆ. ಆಹಾರ ಪೂರೈಕೆ ಜವಾಬ್ದಾರಿ ಕೆಲ ಗುತ್ತಿಗೆದಾರರಿಗೆ ನೀಡಿದೆ. ಗುತ್ತಿಗೆಯಲ್ಲಿ ಕೆಲ ಷರತ್ತು ಸರ್ಕಾರ ವಿಧಿಸಿದೆ. ಗುಣಮಟ್ಟದ ಆಹಾರ, ಸಮರ್ಪಕ ತೂಕ ಹಾಗೂ ಶುಚಿ, ರುಚಿ ವ್ಯವಸ್ಥೆ ಮಾಡಬೇಕೆಂದು ಕಟ್ಟುನಿಟ್ಟಿನ ಆದೇಶ ನೀಡಿದ್ದರೂ, ಗುತ್ತಿಗೆದಾರರು ನೇಮಿಸಿರುವ ಹುಡುಗರು ತಮಗೆ ಇಷ್ಟ ಬಂದ ಹಾಗೆ ಆಹಾರ ವಿತರಣೆ ಮಾಡುತ್ತಿರುವುದು ಅವ್ಯವಸ್ಥೆಗೆ ಕಾರಣವಾಗಿದೆ. ತಹಶೀಲ್ದಾರ್‌ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಸಮರ್ಪಕ ಹಾಗೂ ಗುಣಮಟ್ಟದ ಆಹಾರ ಪೂರೈಕೆಗೆ ಕ್ರಮ ಕೈಗೊಳ್ಳಬೇಕಿದೆ.

 

● ಕೆ.ಎನ್‌. ಲೋಕೇಶ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.