ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿ ಸುನಂದಾ ಅವಿರೋಧ ಆಯ್ಕೆ
Team Udayavani, May 19, 2022, 5:42 PM IST
ಕೊರಟಗೆರೆ: ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಸಲಹೆ ಮತ್ತು ಸೂಚನೆಯಂತೆ ಕ್ಯಾಮೇನಹಳ್ಳಿ ಗ್ರಾಮ ಪಂಚಾಯತ್ ಗೆ ಕಾಂಗ್ರೆಸ್ ಬೆಂಬಲಿತ ನೂತನ ಅಧ್ಯಕ್ಷೆಯಾಗಿ ಸುನಂದಾ ಶಶಿಧರ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಕೊರಟಗೆರೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೋಡ್ಲಹಳ್ಳಿ ಅಶ್ವತ್ಥನಾರಾಯಣ್ ತಿಳಿಸಿದರು.
ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಕ್ಯಾಮೇನಹಳ್ಳಿ ಗ್ರಾಪಂಯಲ್ಲಿ ಗುರುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕ್ಯಾಮೇನಹಳ್ಳಿ ಗ್ರಾ. ಪಂ. ಸಮಗ್ರ ಅಭಿವೃದ್ದಿಗೆ ನಮ್ಮ ಶಾಸಕರಾದ ಡಾ.ಜಿ.ಪರಮೇಶ್ವರ್ ಆರ್ಶಿವಾದ ಸದಾ ಇರಲಿದೆ. ಕ್ಯಾಮೇನಹಳ್ಳಿ ಗ್ರಾಪಂಗೆ ನೂತವಾಗಿ ಆಯ್ಕೆಯಾದ ಅಧ್ಯಕ್ಷರು ತಮ್ಮ ಸದಸ್ಯರ ಜೊತೆಗೂಡಿ ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಸಹಕಾರ ನೀಡಬೇಕಿದೆ ಎಂದು ತಿಳಿಸಿದರು.
ನೂತನ ಅಧ್ಯಕ್ಷೆ ಸುನಂಧಶಶಿಧರ್ ಮಾತನಾಡಿ ಕ್ಯಾಮೇನಹಳ್ಳಿ ಗ್ರಾಪಂಗೆ ನಾನು ಪ್ರಥಮವಾಗಿ ಅವಿರೋಧ ಆಯ್ಕೆ ಆಗಿದ್ದೇನೆ. ನಮ್ಮ ಶಾಸಕರು ಮತ್ತು ಗ್ರಾಪಂ ಸರ್ವಸದಸ್ಯರ ಜೊತೆ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ ನೀಡುತ್ತೇನೆ. ನನಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬೆಂಬಲ ನೀಡಿದ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಇದನ್ನೂ ಓದಿ : ಗಾಳಿ ಮಳೆ : ಕಿಷ್ಕಿಂದಾ ಅಂಜನಾದ್ರಿ ಬಳಿ ನಿರ್ಮಾಣ ಹಂತದ ಮೊಬೈಲ್ ಟವರ್ ಬಿದ್ದು 7 ಮಂದಿಗೆ ಗಾಯ
ಕಾರ್ಯಕ್ರಮದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷೆ ವೆಂಕಟ ಲಕ್ಷ್ಮಮ್ಮ, ಉಪಾಧ್ಯಕ್ಷೆ ಲಕ್ಷ್ಮೀ ಬಾಯಿ, ಸದಸ್ಯರಾದ ವೀರಯ್ಯ, ಹನುಮಂತರಾಜು, ಸಿದ್ದಗಂಗಮ್ಮ, ಪುಟ್ಟರಾಜು, ಹರೀಶ್, ಸೌಮ್ಯ, ಶಿವಕುಮಾರ್, ರತ್ನಮ್ಮ, ನಾಗಮಣಿ, ರಾಮಕ್ಕ, ಲಕ್ಷ್ಮೀ ನರಸಿಂಹಮೂರ್ತಿ, ಅನುರಾಧ,,ಗ್ರಾಪಂ ಪಿಡಿಓ ಯಶೋಧ, ಮುಖಂಡರಾದ ಉಮಾಶಂಕರ್, ಶಿವಣ್ಣ, ದೇವರಾಜು, ಚೆಲುವರಾಜು, ರವಿಕುಮಾರ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…