ಶಿರಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಸಾಂಕೇತಿಕ ನಾಮಪತ್ರ ಸಲ್ಲಿಕೆ
Team Udayavani, Oct 9, 2020, 1:51 PM IST
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಶುಕ್ರವಾರ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಾಂಕೇತಿಕ ನಾಮಪತ್ರ ಸಲ್ಲಿಸಿದರು.
ಶಿರಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮಧುಗಿರಿ ಉಪವಿಭಾಗಧಿಕಾರಿ ಡಾ. ನಂದಿನಿದೇವಿ ಅವರು ನಾಮಪತ್ರ ಸ್ವೀಕರಿಸಿದರು.
ಜಯಚಂದ್ರ ಅವರು ಅ.15 ರಂದು ಪಕ್ಷದ ಮುಖಂಡರುಗಳೊಂದಿಗೆ ಮತ್ತೆ ನಾಮಪತ್ರ ಸಲ್ಲಿಸಲಿದ್ದಾರೆ.
ಇದನ್ನೂ ಓದಿ:ಜಯಚಂದ್ರರಿಗೆ ಟಿಕೆಟ್: ಹೈಕಮಾಂಡ್ ಆಕ್ಷೇಪವಿತ್ತೇ ?
ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3ರಂದು ಉಪಚುನಾವಣೆ ನಡೆಯಲಿದೆ. ನವೆಂಬರ್ 10ರಂದು ಮತ ಎಣಿಕೆ ನಡೆಯಲಿದೆ.