ತಹಶೀಲ್ದಾರ್‌ ವರ್ಗಾವಣೆ ತಡೆಗೆ ಒತ್ತಾಯ


Team Udayavani, Aug 27, 2019, 5:34 PM IST

tk-tdy-2

ಮಧುಗಿರಿಯ ತಹಶೀಲ್ದಾರ್‌ ನಂದೀಶ್‌ ಸೇವೆಯನ್ನು ಮಧುಗಿರಿಯಲ್ಲೇ ಮುಂದುವರಿಸಲು ಒತ್ತಾಯಿಸಿ ಸಾರ್ವಜನಿಕರು ಎಸಿ ಚಂದ್ರಶೇಖರಯ್ಯನವರಿಗೆ ಮನವಿ ಸಲ್ಲಿಸಿದರು.

ಮಧುಗಿರಿ: ವೈಯಕ್ತಿಕ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರಾಮಾಣಿಕ ಅಧಿಕಾರಿಯಾದ ತಹಶೀಲ್ದಾರ್‌ ನಂದೀಶ್‌ ರವರನ್ನು ಬೇರೆಡೆ ವರ್ಗ ಮಾಡದಂತೆ ಹಾಗೂ ಇಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲು ಇಲ್ಲಿಯೇ ಉಳಿಸಿಕೊಳ್ಳುವಂತೆ ಸಾರ್ವಜನಿಕರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮಧುಗಿರಿಯ ಉಪವಿಭಾಗಾಧಿಕಾರಿ ಚಂದ್ರಶೇಖರಯ್ಯನವರಿಗೆ ಮನವಿ ಸಲ್ಲಿಸಿ ಮಾತನಾಡಿದ ಯಾದವ ರೈತ ಮುಖಂಡ ರವಿಯಾದವ್‌, ನಮ್ಮ ಗೊಲ್ಲರಹಟ್ಟಿ ಹಾಗೂ ಪರಿಶಿಷ್ಟ ಸಮುದಾಯದ ಜನತೆಯ ದಶಕಗಳ ಸಮಸ್ಯೆಯಾದ ಪೌತಿ ಖಾತೆ, ಖಾತೆ ತಿದ್ದುಪಡಿಯನ್ನು ಗ್ರಾಮಕ್ಕೆ ಬಂದು ಪರಿಶೀಲಿಸಿ ಇತ್ಯರ್ಥಪಡಿಸಲು ತಹಶೀಲ್ದಾರ್‌ ಮುಂದಾಗಿದ್ದಾರೆ.

ಅಲ್ಲದೆ ರಾಜ್ಯದಲ್ಲಿಯೇ ಪ್ರಥಮ ಮೇವು ಬ್ಯಾಂಕ್‌ ತೆರೆದು, ರೈತಾಪಿ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಉಚ್ಛ ನ್ಯಾಯಾಲಯ ಆದೇಶ ಮಾಡಿದ ಮರು ದಿನವೇ ಕ್ಷೇತ್ರದಲ್ಲಿ ಗೋಶಾಲೆ ಆರಂಭಿಸಿ ಸಮರ್ಥವಾಗಿ ಜನಪರ ಕಾರ್ಯಕ್ರಮ ನೀಡುತ್ತಿದ್ದಾರೆ. ಈ ಎಲ್ಲ ಕಾರ್ಯಕ್ರಮಗಳಿಂದ ಲಂಚ ಪಡೆಯುತ್ತಿದ್ದ ಕೆಲವರು ಇವರ ಮೇಲೆ ಪಿತೂರಿ ನಡೆಸಿದ್ದು, ಈಗ ಪ್ರತಿಭಟನೆಯಲ್ಲಿ ಮುಂದಾಳತ್ವ ವಹಿಸಿದ್ದಾರೆ. ಇದು ಸಮಂಜಸವಲ್ಲ. ಜನಪರವಾದ ಕಾರ್ಯಕ್ರಮ ನೀಡಿರುವ ತಹಶೀಲ್ದಾರ್‌ ನಂದೀಶ್‌ ರವರನ್ನು ಇಲ್ಲಿಯೇ ಉಳಿಸಬೇಕು ಎಂದು ಒತ್ತಾಯಿಸಿದರು. ಪುರಸಭೆ ಮಾಜಿ ಸದಸ್ಯ ಸುಬ್ರಮಣ್ಯ ಮಾತನಾಡಿ, ಲಂಚ ಪಡೆಯುವ ಮಧ್ಯವರ್ತಿಗಳಿಗೆ ಕಡಿವಾಣ ಹಾಕಿದ್ದೇ ತಹಶೀಲ್ದಾರ್‌ ರವರಿಗೆ ಮುಳುವಾಗಿದೆ. ಮಾನ್ಯ ಉಪವಿಭಾಗಾಧಿಕಾರಿಗಳು ಈ ಅಂಶವನ್ನು ಪರಿಗಣಿಸಿ ನಂದೀಶ್‌ರವರನ್ನು ಉಳಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಮುಖಂಡ ನಾಸೀರ್‌ ಮಾತನಾಡಿ ನಮ್ಮ ಜಮೀನಿನ ಸಮಸ್ಯೆ ಬಗೆಹರಿಯಲು ವರ್ಷಗಳೇ ಕಳೆದವು. ಆದರೆ ನನ್ನನ್ನೂ ಸೇರಿದಂತೆ ಹಲವರ ದಶಕಗಳ ಸಮಸ್ಯೆಯಾದ ಪೌತಿ ಖಾತೆ, ಖಾತೆ ಬದಲಾವಣೆ, ವಿವಿಧ ಮಾಸಾಶನಗಳನ್ನು ತಹಶೀಲ್ದಾರರು 3 ದಿನದಲ್ಲೇ ಆದೇಶ ಮಾಡಿದರು. ಇದು ಮಧ್ಯವರ್ತಿಗಳಿಗೆ ನುಂಗಲಾರದ ತುತ್ತಾಗಿದೆ.

ಸಮಯದ ಮಿತಿಯಿಲ್ಲದೆ ಗ್ರಾಮಗಳಿಗೆ ನೇರವಾಗಿ ತೆರಳಿ ಜನರ ಕಷ್ಟಗಳಿಗೆ ನೆರವಾಗಿದ್ದಾರೆ. ಇದು ಕೆಲವರಿಗೆ ಅಪತ್ಯವಾಗಿದೆ. ಹೀಗಾಗಿ ಜನರ ಕಷ್ಟಗಳಿಗೆ ಸ್ಪಂದಿಸುವ ಇಂತಹ ಅಧಿಕಾರಿಯನ್ನು ವರ್ಗಾಯಿಸಬಾರದು ಎಂದು ಒತ್ತಾಯಿಸಿದರು.

ಆಡಳಿತವನ್ನು ಜನರ ಬಳಿಗೆ ತಂದ ಇಂತಹ ತಹಶೀಲ್ದಾರ್‌ ಸೇವೆ ಮಧುಗಿರಿಗೆ ಅಗತ್ಯವಾಗಿ ಬೇಕಿದ್ದು, ಯಾವ ಪಿತೂರಿಗೂ ಬಗ್ಗದೆ ಇವರ ಸೇವೆಯನ್ನು ಮಧುಗಿರಿಯಲ್ಲೇ ಮುಂದುವರಿಸಲು ಒತ್ತಾಯಿಸಿದರು. ಈ ವೇಳೆ ಅಪಾರ ನಾ‌ರಿಕರು ಹಾಜರಿದ್ದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.