ದುಶ್ಚಟ ಬಿಟ್ಟು ಉತ್ತಮ ಜೀವನ ನಡೆಸಿ: ಜಯಚಂದ್ರ


Team Udayavani, Jul 4, 2017, 9:43 AM IST

tumukuru-3.jpg

ತುಮಕೂರು: ಸಮಾಜದಲ್ಲಿ ಇಂದು ದುಶ್ಚಟಗಳಿಗೆ  ಹೆಚ್ಚು ಬಲಿಯಾಗುತ್ತಿರುವುದು ಗ್ರಾಮೀಣ ಪ್ರದೇಶದ ಬಡವರಷ್ಟೇ ಅಲ್ಲ, ನಗರ ಪ್ರದೇಶದಲ್ಲಿ ವಿದ್ಯಾವಂತರೂ ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಇದನ್ನು ತಡೆಗಟ್ಟಲು ಹೆಚ್ಚು ಅರಿವು ಮೂಡಿಸಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸೋಮವಾರ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಮಾದಕ ವಸ್ತು ವಿರೋಧಿ ಸಪ್ತಾಹ ಸಮಾರೋಪ ಉದ್ಘಾಟಿಸಿ ಮಾತನಾಡಿದರು. ಎಲ್ಲಾ ಪ್ರಾಣಿಗಳಿಗಿಂತ ಮನುಷ್ಯ ಬುದ್ಧಿವಂತ ದುಶ್ಚಟಗಳಿಂದ ಆಗುವ ಅನಾಹುತದ ಅರಿವು ಇರುತ್ತದೆ. ಕೆಲವರು ಇದರ ಅರಿವು ಇದ್ದರೂ ಇದರ 
ದಾಸರಾಗಿರುತ್ತಾರೆ. ಇದನ್ನು ಬಿಡಲು ಮನಸ್ಸು ಮುಖ್ಯ ಎಂದ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗಡೆ ಅವರು ಎಲ್ಲಾ ಜಿಲ್ಲೆಗಳಲ್ಲಿ ದುಶ್ಚಟಗಳಿಗೆ ಬಲಿಯಾದವರಿಗೆ ತರಬೇತಿ ನೀಡಿ ಬಿಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿ ಮಾತನಾಡಿದ ರಾಮ ಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಡಾ.ಶ್ರೀವೀರೇಶಾ ನಂದ ಸರಸ್ವತಿ ಸ್ವಾಮೀಜಿ, ವಿಶ್ವದಲ್ಲಿ ಸುಮಾರು 700 ಕೋಟಿ ಜನಸಂಖ್ಯೆ ಇದ್ದು ಇವರಲ್ಲಿ 25 ಕೋಟಿ ಜನ ಮದ್ಯವ್ಯಸನಿಗಳಿದ್ದಾರೆ ಇದರಲ್ಲಿ ಯುವ ಜನತೆಯೇ ಹೆಚ್ಚು ಎಂದು ತಿಳಿಸಿದರು. ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಎಚ್‌.ಸಿ. 
ರುದ್ರಪ್ಪ ಮಾತನಾಡಿ, ಜನರಿಗೆ ದುಶ್ಚಟಗಳಿಂದ ಆಗುವ ತೊಂದರೆಗಳ ಬಗ್ಗೆ ಮಂಡಳಿ ಹಲವಾರು ಕಾರ್ಯಕ್ರಮದ ಮೂಲಕ ಜಾಗೃತಿ ಉಂಟು ಮಾಡುತ್ತಿದ್ದೇವೆ ಎಂದರು. 

 ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ವಿ.ಪಾತರಾಜು, ಸಂಯಮ ಮಂಡಳಿಯ ಕಾರ್ಯ ಯೋಜನೆಗಳನ್ನು ತಿಳಿಸಿದರು. ಸಮಾರಂಭದಲ್ಲಿ ಕುಡಿತ ಚಟಕ್ಕೆ ವಿದಾಯ ಹೇಳಿ ಉತ್ತಮ ಜೀವನ ನಡೆಸುತ್ತಿರುವ ಪ್ರತಾಪ್‌ ತಮ್ಮ ಅನುಭವ ಹಂಚಿಕೊಂಡರು. ಸಮಾರಂಭದಲ್ಲಿ ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್‌, ಜಿಪಂ ಸಿಇಒ ಕೆ.ಜಿ
ಶಾಂತಾರಾಮ್‌, ಎಸ್ಪಿ ಡಾ.ದಿವ್ಯಗೋಪಿನಾಥ್‌, ರಾಜ್ಯ ಮದ್ಯಪಾನ ಸಂಯಮ ಮಂಡಳಿ ನಿರ್ದೇಶಕರಾದ ನರಸಿಂಹ ಮೂರ್ತಿ, ಮುನಿಯಪ್ಪ, ನಾಗರಾಜು, ತಿಮ್ಮಪ್ಪ ನಾಯಕ್‌, ಡಿಡಿಪಿಐ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಾಸಂತಿ ಉಪ್ಪಾರ್‌ ಮತ್ತಿತರರಿದ್ದರು.

ಜಾಥಾ: ಮದ್ಯಪಾನ ಸಂಯಮ ಮಂಡಳಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಡಾ.ಗುಬ್ಬಿ ವೀರಣ್ಣ  
ಕಲಾಕ್ಷೇತ್ರದವರೆಗೆ ಆಶಾಕಾರ್ಯಕರ್ತೆಯರು,ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಜಾಥಾ ನಡೆಯಿತು. ಈ ವೇಳೆ ಜಾಥಾಗೆ ಜಿಪಂ ಸಿಇಒ ಕೆ.ಜಿ.ಶಾಂತಾರಾಮ್‌ ಚಾಲನೆ ನೀಡಿದರು. ನಂತರ ನಗರದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ನಡೆಯಿತು. ಮದ್ಯವ್ಯಸನಿಗಳ ಸಂಖ್ಯೆ ಹೆಚ್ಚಳ ವಿಷಾದನೀಯ ಗ್ರಾಮೀಣ ಪ್ರದೇಶದಲ್ಲಿ ಬಡತನದಿಂದ ಇರುವವರು ರೈತಾಪಿ ವರ್ಗ ದಿನವೂ ಕಷ್ಟ ಪಟ್ಟು ದುಡಿದು ದುಡಿದ ಹಣವನ್ನು ಉಳಿಸದೇ ಮದ್ಯವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಇಂದು ಗ್ರಾಮೀಣ ಪ್ರದೇಶಗಳಿಗಿಂತಲೂ ಪಟ್ಟಣ ಮತ್ತು ನಗರ ಪ್ರದೇಶಗಳಿಲ್ಲಿ ಮದ್ಯ ಮತ್ತು ಮಾದಕ ಪರ್ದಾಥಗಳ ವ್ಯಸನಿಗಳು ಹೆಚ್ಚುತ್ತಿರುವುದು ವಿಷಾದನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.