ದೇಶದ್ರೋಹಿಗಳ ಮೇಲೆ ಕ್ರಮ ಜರುಗಿಸಿ


Team Udayavani, Mar 2, 2019, 7:16 AM IST

dwsha.jpg

ತುಮಕೂರು: ನಮ್ಮ ದೇಶದಲ್ಲಿಯೇ ಇದ್ದು, ಅನ್ನ, ಗಾಳಿ, ನೀರು ಕುಡಿದು ದೇಶದ್ರೋಹದ ಕೆಲಸ ಮಾಡುವವರನ್ನು ಗುರುತಿಸಿ ಅಂಥವರ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಕೆಲ ಮುಸ್ಲಿಂ ಸಂಘಟನೆಗಳ ಹೆಸರು ಹೇಳಿಕೊಂಡು ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ. ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಸೊಗಡು ಎಸ್‌.ಶಿವಣ್ಣ ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದ ಒಳಗಿರುವ ದೇಶದ್ರೋಹಿಗಳ ಬಗ್ಗೆ ಹೆಚ್ಚು ನಿಗಾವಹಿಸುವುದು ಅಗತ್ಯವಾಗಿದೆ. ದೇಶದಲ್ಲಿರುವ ಅನೇಕ ಮುಸಲ್ಮಾನರಲ್ಲಿ ಒಳ್ಳೆಯ ವ್ಯಕ್ತಿಗಳು, ದೇಶ ಪ್ರೇಮಿಗಳೂ ಇದ್ದಾರೆ. ಅದೇ ರೀತಿಯಲ್ಲಿ ನಮ್ಮೊಳಗೆ ಇದ್ದುಕೊಂಡೇ ನಮಗೆ ವಂಚನೆ ಮಾಡುವ ಅನೇಕರಿದ್ದಾರೆ. ಅಂಥವರ ಮೇಲೆ ನಿಗಾ ಇಡಬೇಕು ಎಂದರು.

ರದ್ದು ಮಾಡಿ: ಮುಸ್ಲಿಂ ಸಂಘಟನೆಗಳಾದ ಸೋಷಿಯಲ್‌ ಡೆಮಾಕ್ರಿಟಿಕ್‌ ಪಾರ್ಟಿ ಆಫ್ ಇಂಡಿಯಾ, ಪಿಎಫ್ಐ ಮತ್ತು ಮದರಸಾಗಳನ್ನು ರದ್ದು ಮಾಡಬೇಕು. ಇವುಗಳು ಬ್ಯಾನ್‌ ಆದರೆ ಮುಂದೆ ಇನ್ನೊಂದು ಸಂಘಟನೆ ಇರಲಿ ಎಂದು ಮುಸ್ಲಿಂ ಸ್ಟೂಡೆಂಟ್‌ ಆರ್ಗನೈಜೇಶನ್‌ ಮಾಡಿಕೊಂಡು ಮುಸ್ಲಿಂ ಯುವಕರನ್ನು ಸಂಘಟಿಸಿ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ತಯಾರು ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ಭಯೋತ್ಪಾದಕತೆ ವಾತಾವರಣ: ಶಿರಾ ನಗರದಲ್ಲಿ ಕೆಲವರು ಗೋಡೆಗಳ ಮೇಲೆ ವಾಲ್‌ಪೋಸ್ಟ್‌ ಹಾಕಿ ಬಾಬರಿ ಮಸಿದಿ ಮರಳಿ ಪಡೆಯೋಣ, ಭಾರತವನ್ನು ಮರಳಿ ಗಳಿಸೋಣ ಎನ್ನುವ ಭಿತ್ತಿ ಪತ್ರಗಳನ್ನು ಹಾಕಿದ್ದಾರೆ. ಇದನ್ನು ನೋಡಿದರೆ ನಮ್ಮ ಜಿಲ್ಲೆಯಲ್ಲಿಯೂ ಈ ಭಯೋತ್ಪಾದಕತೆ ವಾತಾವರಣ ಇದೆ ಎಂದರು.

ಬಡವರಿಗೆ ಆಮಿಷ: ಹುಬ್ಬಳ್ಳಿಯಲ್ಲಿ ನಾಲ್ಕು ಜನ ಪಾಕಿಸ್ತಾನದ ಪರವಾಗಿ, ಉಗ್ರವಾದಿಗಳ ಪರವಾಗಿ ಘೋಷಣೆ ಹಾಕಿದ್ದರು. ಇವರಲ್ಲಿ ಶಿರಾದ ಶೇಖ್‌ ಮನ್ಸೂರ್‌ ಇದ್ದ. ಇವನು ಮದುವೆಯಾಗಿರುವುದು ಶಿರಾದಲ್ಲಿ. ಈತ ದೆಹಲಿ ಪಿಎಫ್ಐನಿಂದ ನಂಟು ಹೊಂದಿದ್ದಾನೆ. ಇದಲ್ಲದೇ ಶಿರಾದ ಜುನೇದ್‌ ಖಾನ್‌ ಇವನು ಹಿಂದೂ ಹುಡುಗಿಯನ್ನು ಮದುವೆಯಾಗಿ ಗೌರಿಬಿದನೂರಿನ ಆಲಿಪುರದಲ್ಲಿ ವಾಸವಾಗಿದ್ದಾನೆ.

ಇವನೊಂದಿಗೆ 16 ವರ್ಷದ ಯುವಕ ಸೇರಿಕೊಂಡು ಫೆ.20ರಂದು ಆಲಿಪುರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಿ ಜೈಕಾರ ಹಾಕಿದ್ದಾನೆ. ಈ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ. ತುಮಕೂರಿನಲ್ಲಿ ಎಸ್‌ಬಿಪಿಐ ಮುಖಂಡ ಮೆಹಬೂಬ್‌ ಪಾಷಾ, ಶಿರಾದಲ್ಲಿ ಸಲಾವುದ್ದಿನ್‌ ಬಡವರಿಗೆ ಆಸೆ ಆಮಿಷ ತೋರಿ ತಮ್ಮತ್ತ ಸೆಳೆಯುತ್ತಿದ್ದಾರೆ ಎಂದರು.

ಪೊಲೀಸರು ಮೌನ: ಶಿರಾ ಪೊಲೀಸರಿಗೆ ಇದೆಲ್ಲವೂ ಗೊತ್ತಿದೆ. ನಮಗೇಕೆ ಬೇಕು ಎಂದು ಮೌನವಾಗಿದ್ದಾರೆ. ದೇಶದಲ್ಲಿರುವ ದೇಶದ್ರೋಹಿಗಳ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು. ಇಂಥ ದೇಶ ದ್ರೋಹಿಗಳನ್ನು ಪತ್ತೆಹಚ್ಚಿ ಹಿಡಿಯಲು ದೆಹಲಿಯಿಂದಲೇ ಬರಬೇಕಾದ ಸ್ಥಿತಿ ನಮ್ಮಲ್ಲಿದೆ. ಸ್ಥಳೀಯ ಪೊಲೀಸರು ಎಲ್ಲವನ್ನು ತಿಳಿದಿದ್ದು ಮೌನವಾಗಿದ್ದಾರೆ ಎಂದು ನುಡಿದರು.

ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಟಿಪ್ಪು ಸುಲ್ತಾನ್‌ ಹೆಸರನ್ನು ಪ್ರಸ್ತಾಪ ಮಾಡುತ್ತಾರೆ ಎಂದರೆ ಅವರಿಗೆ ಈ ಹೆಸರು ಕೊಟ್ಟವರು ಯಾರು, ಈ ವೇಳೆ ಈ ಬಳಕೆ ಬೇಕಿತ್ತೆ. ಈ ಎಲ್ಲವನ್ನು ನೋಡಿದರೆ ನಮ್ಮಲ್ಲಿಯೇ ಮೀರ್‌ ಸಾದಿಕ್‌ಗಳಿದ್ದಾರೆ. ಆದ್ದರಿಂದ ಜಾಗೃತ ವಹಿಸಬೇಕಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಜಯಸಿಂಹರಾವ್‌, ಶಾಂತರಾಜು, ಮಂಜುನಾಥ, ಜಿ.ಕೆ. ಬಸವರಾಜ್‌, ರಮೇಶ್‌, ನಂಜುಂಡಯ್ಯ, ಎನ್‌.ಗಣೇಶ್‌, ಕೆ.ಪಿ.ಮಹೇಶ್‌ ಮೊದಲಾದವರು ಇದ್ದರು.

ಟಾಪ್ ನ್ಯೂಸ್

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.