ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ


Team Udayavani, Mar 17, 2020, 3:00 AM IST

corona-niya

ಕುಣಿಗಲ್‌: ಕೊರೊನಾ ವೈರಸ್‌ ಯಾವ ಸಮಯದಲ್ಲಾದರೂ ತಾಲೂಕಿಗೆ ಪ್ರವೇಶಿಸುವ ಸಾಧ್ಯತೆ ಇದ್ದು, ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಕೈಗೊಂಡು, ಅಗತ್ಯವಿರುವ ಔಷ ಧಗಳನ್ನು ದಾಸ್ತಾನು ಮಾಡಿಕೊಳ್ಳುವಂತೆ ಶಾಸಕ ಡಾ.ಎಚ್‌.ಡಿ.ರಂಗನಾಥ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದರು.

ಸೋಮವಾರ ಪಟ್ಟಣದ ತಾಪಂ ಸಭಾಂಗಣದಲ್ಲಿ ಕೊರೊನಾ ವೈರಸ್‌ ತಡೆಗಟ್ಟುವ ಸಂಬಂಧ ನಡೆದ ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳ ಹಾಗೂ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ವೈರಸ್‌ ಸಂಬಂಧ ಮೊದಲು ಅಧಿಕಾರಿಗಳು ತಿಳಿದುಕೊಂಡರೇ, ನಾಗರಿಕರಿಗೆ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ ಎಂದು ದಿಸೆಯಲ್ಲಿ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದರು.

ಆತಂಕ ಮೂಡಿಸುವುದು ಸರಿಯಲ್ಲ: ರೋಗ ಹರಡದಂತೆ ತಡೆಯಲು ಕೇವಲ ವೈದ್ಯರಿಂದ ಮಾತ್ರ ಸಾಧ್ಯವಿಲ್ಲ. ವೈದ್ಯರೊಂದಿಗೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕೈ ಜೊಡಿಸಬೇಕು. ಜಾಗೃತಿ ಮೂಡಿಸುವಂತಹ ಸಮಯದಲ್ಲಿ ಆತಂಕ ಮೂಡಿಸುವಂತ ಕೆಲಸ ದೃಶ್ಯ ಮಾಧ್ಯಗಳು ಮಾಡುತ್ತಿವೆ ಇದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಒಬ್ಬರಿಂದೊಬ್ಬರಿಗೆ ಹರಡುವ ವೈರಸ್‌: ಚೀನಾ ದೇಶದ ವುಹಾನ್‌ನಲ್ಲಿ ವೈರಸ್‌ ತಗಲಿದ ಪ್ರಾಣಿಗಳ ಹಸಿ ಮಾಂಸವನ್ನು ಅಲ್ಲಿನ ಜನರು ಸೇವನೆ ಮಾಡಿದ ಕಾರಣ ವೈರಸ್‌ ಮಾನವನಿಗೆ ಹಂಟಿಕೊಂಡು ಒಬ್ಬರಿಂದೊಬ್ಬರಿಗೆ ಹರಡುತ್ತಾ ಈಗ ವಿಶ್ವಾದ್ಯಂತ ಆತಂಕ ಸೃಷ್ಟಿಸಿದೆ, ವೈರಸ್‌ ತಗಲಿದ ವ್ಯಕ್ತಿ 9 ದಿನದ ಬಳಿಕ ಜ್ವರ, ನೆಗಡಿ, ಕೆಮ್ಮು, ತಲೆ ನೋವು, ನ್ಯುಮೋನಿಯಾ ಬೇಧಿ, ಉಸಿರಾಟದ ತೊಂದರೆ ಕಾಣಿಸಿಕೊಂಡು ಸಾವಿನ ಹಂಚಿಗೆ ತಲುಪುತ್ತಾನೆ ಎಂದು ಹೇಳಿದರು.

ವದಂತಿಗೆ ಕಿವಿಗೋಡಬೇಡಿ: ಆಯುರ್ವೇದಿಕ್‌, ನಾಟಿ ಔಷಧಯಿಂದ ಕೊರೊನಾ ಹೋಗಲಾಡಿಸಬಹುದು ಎಂದು ಕೆಲವರು ಹೇಳುತ್ತಾರೆ ಇದನ್ನು ನಂಬಿ ಮೋಸ ಹೊಗಬೇಡಿ, ಈವರೆಗೂ ಈ ಕಾಯಿಲೆ ಗುಣಪಡಿಸಲು ಯಾವುದೇ ಔಷಧ ಕಂಡು ಹಿಡಿದಿಲ್ಲ, ಸುಳ್ಳು ವದಂತಿಗೆ ಜನರು ಕಿವಿಗೊಡಬಾರದು ಎಂದು ಶಾಸಕರು ಮನವಿ ಮಾಡಿದರು.

ಎಲ್ಲರೂ ಎಚ್ಚರ ವಹಿಸಿ: ಉದ್ಯೋಗ, ಪ್ರವಾಸ ಸೇರಿದಂತೆ ಇತರೆ ವಿಷಯಗಳಿಗೆ ತಾಲೂಕಿನಿಂದ ದುಬೈ ಹಾಗೂ ಇತರೆ ದೇಶಗಳಿಗೆ ಹೋಗಿ ವಾಪಸ್‌Õ ಬರುವವರ ಹೆಸರುಗಳನ್ನು ಪಟ್ಟಿ ಮಾಡಿ ವೈರಸ್‌ ಸಂಬಂಧ ತಪಾಸಣೆಗೆ ಒಳಪಡಿಸಬೇಕೆಂದು ಆರೋಗ್ಯಾಧಿಕಾರಿಗೆ ಸೂಚಿಸಿದ ಶಾಸಕರು, ಅನಾವಶ್ಯಕವಾಗಿ ಬೆಂಗಳೂರಿಗೆ ಹೊಗುವುದನ್ನು ನಿಲ್ಲಿಸಿ ಎಂದು ಜನರಿಗೆ ಮನವಿ ಮಾಡಿದರು.

ಪ್ರಾಣಿ ಹಿಂಸೆ ನಿಷೇಧಿಸಿ: ಮಾಂಸ ಬೇಯಿಸಿ ತಿನ್ನುವುದರಿಂದ ಕೊರೊನಾ ಬರುವುದಿಲ್ಲ, ಆದರೆ ದೇವರ ಹೆಸರಿನಲ್ಲಿ ಪ್ರಾಣಿಗಳನ್ನು ಹಲ್ಲಿನಿಂದ ಸಿಗಿದು ಹಸಿ ಮಾಂಸ ತಿನ್ನುವುದರಿಂದ ವೈರಸ್‌ ಬರುವ ಸಾಧ್ಯತೆ ಇದೆ. ಹೀಗಾಗಿ ಇದನ್ನು ನಿಷೇಧಿಸಬೇಕೆಂದು ಡಾ.ರಂಗನಾಥ್‌ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಜಾತ್ರೆಗಳನ್ನು ಸರಳವಾಗಿ ಆಚರಣೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಜಾಗೃತಿ ಸಭೆ: ವೈರಸ್‌ ತಗಲಿ ಜನರಿಗೆ ಏನಾದರೂ ತೊಂದರೆ ಉಂಟಾದರೆ ಅದನ್ನು ಸಹಿಸಲು ನನ್ನಿಂದ ಸಾಧ್ಯವಾಗುವುದಿಲ್ಲ ಎಂದು ನೋವಿನಂದ ಹೇಳಿದ ಶಾಸಕರು ಈ ನಿಟ್ಟಿನಲ್ಲಿ ಗ್ರಾಪಂ ಅಧಿಕಾರಿಗಳು ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಒಗ್ಗೂಡಿ ಗ್ರಾಮಗಳಲ್ಲಿ ಸಭೆ ಸೇರಿಸಿ ಅಲ್ಲಿ ವೈರಸ್‌ ತಡೆಗಟ್ಟುವ ಸಂಬಂಧ ಜನ ಜಾಗೃತಿ ಮೂಡಿಸಬೇಕು. ಜತೆಗೆ ಪಟ್ಟಣದ 23 ವಾರ್ಡ್‌ ಸೇರಿದಂತೆ ಗ್ರಾಮಗಳ ಸ್ವತ್ಛತೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕರು ಅಧಿಕಾರಿಗಳಿಗೆ ತಾಕೀತು ಮಾಡಿಸಿದರು.

ಶೇ.100 ರಲ್ಲಿ ಕೇವಲ ಶೇ.5 ರಷ್ಟು ಮಾತ್ರ ವೈರಸ್‌ನಿಂದ ಜನರು ಮೃತಪಟ್ಟಿದ್ದಾರೆ. 95 ಜನರು ರೋಗದಿಂದ ಮುಕ್ತರಾಗಿದ್ದಾರೆ ಇದನ್ನು ಜನರಿಗೆ ತಿಳಿ ಹೇಳಿ ಅವರಲ್ಲಿ ಧೈರ್ಯ ತುಂಬಬೇಕು ಎಂದು ಹೇಳಿದರು. ಸಭೆಯಲ್ಲಿ ತಾಪಂ ಇಒ ಶಿವರಾಜಯ್ಯ, ತಾಲೂಕು ಆರೋಗ್ಯಾಧಿಕಾರಿ ಜಗದೀಶ್‌, ಸಿಪಿಐ ನಿರಂಜನ್‌ಕುಮಾರ್‌, ಆಡಳಿತ ವೈದ್ಯಾಧಿಕಾರಿ ಗಣೇಶ್‌ಬಾಬು ಇತರರು ಇದ್ದರು.

ಕೋಳಿ ಅಂಗಡಿ ಬಂದ್‌ಗೆ ಸೂಚನೆ: ಮಾವಿನಕಟ್ಟೆ ಪಾಳ್ಯ ಗ್ರಾಮದಲ್ಲಿ ಇಬ್ಬರು ಮಕ್ಕಳ ಮೇಲೆ ನಾಯಿ ದಾಳಿ ನಡೆಸಿ ಗಾಯಗೊಳಿಸಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು, ಈ ಹಿಂದೆ ನಾಯಿ ದಾಳಿ ನಡೆಸಿ ಬಾಲಕಿಯನ್ನು ಸಾಯಿಸಿರುವ ಬೆನ್ನಲೆ ಮತ್ತೆ ಇಬ್ಬರು ಮಕ್ಕಳ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ, ಇದಕ್ಕೆ ಕಾರಣವೇನು ಎಂದು ಶಾಸಕರು ಪಿಡಿಒ ಅವರನ್ನು ಪ್ರಶ್ನಿಸಿದರು,

ಪಟ್ಟಣದ ಕೋಳಿ ಅಂಗಡಿ ವ್ಯಾಪಾರಿಗಳು ಕೋಳಿ ತಾಜ್ಯವನ್ನು ದೊಡ್ಡಕೆರೆ ಏರಿ ಹಾಗೂ ಮಾವಿನಕಟ್ಟೆಪಾಳ್ಯದ ಹಾಸು ಪಾಸಿನಲ್ಲಿ ತಂದು ಹಾಕುತ್ತಿದ್ದಾರೆ. ಈ ತ್ಯಾಜ್ಯವನ್ನು ತಿನ್ನಲು ಬರುವ ನಾಯಿಗಳು ಮಕ್ಕಳ ಮೇಲೆ ದಾಳಿ ನಡೆಸುತ್ತಿವೆ ಎಂದು ಪಿಡಿಒ ತಿಳಿಸಿದರು, ಇದರಿಂದ ಕೆಂಡಾಮಂಡಲರಾದ ಶಾಸಕರು ಕೂಡಲೇ ಅಂಗಡಿ ವ್ಯಾಪಾರಿಗಳ ಸಭೆ ಕರೆದು ತಿಳಿವಳಿಕೆ ಹೇಳಬೇಕು, ತಪ್ಪಿದಲ್ಲಿ ಅಂಗಡಿಗಳನ್ನು ಮೂಲಾಜಿಲ್ಲದೆ ಮುಚ್ಚಿಸುವಂತೆ ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌ಗೆ ಸೂಚಿಸಿದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.