ಕಲುಷಿತ ನೀರು ಪೂರೈಸಿದರೆ ಕ್ರಮ ಕೈಗೊಳ್ಳಿ

ತಹಶೀಲ್ದಾರ್‌ ವಿಶ್ವನಾಥ್‌ಗೆ ಶಾಸಕ ಎಚ್.ಡಿ.ರಂಗನಾಥ್‌ ಸೂಚನೆ

Team Udayavani, Jun 28, 2019, 9:23 AM IST

tk-tdy-2..

ಕುಣಿಗಲ್ ತಾಲೂಕಿನ ಅಮೃತೂರಿನಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ರೈತನಿಗೆ ಪೌತಿ ಖಾತೆ ವರ್ಗಾವಣೆಯ ಪ್ರಮಾಣ ಪತ್ರವನ್ನು ಶಾಸಕ ಡಾ.ಎಚ್.ಡಿ.ರಂಗನಾಥ್‌ ನೀಡಿದರು.

ಕುಣಿಗಲ್: ಕಲುಷಿತ ನೀರು ಪೂರೈಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌ಗೆ ಶಾಸಕ ಡಾ.ಎಚ್.ಡಿ.ರಂಗನಾಥ್‌ ಸೂಚಿಸಿದರು. ಅಮೃತೂರು ಸರ್ಕಾರಿ ಶಾಲಾ ಆವರಣದಲ್ಲಿ ಗುರುವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಮೃತೂರು ಗ್ರಾಮದ ಎರಡು, ಮೂರು ಹಾಗೂ ನಾಲ್ಕನೇ ಬ್ಲಾಕ್‌ ಕೆಲ ಬಡಾವಣೆಗಳಲ್ಲಿ ಕಳೆದ ಆರು ತಿಂಗಳಿನಿಂದ ಟ್ಯಾಂಕರ್‌ ನೀರು ಸರಬರಾಜು ಮಾಡ ಲಾಗುತ್ತಿದೆ. ನೀರು ಯೋಗ್ಯವಾಗಿಲ್ಲ ಎಂದು ಶಾಸಕರಿಗೆ ದೂರು ಹೇಳಿದರು, ಕೆಂಡಾಮಂಡಲರಾದ ಶಾಸಕ, ಶಾಸಕರ ಅನುದಾನದಲ್ಲಿ ಹೊಸದಾಗಿ ಐದು ಕೊಳವೆ ಬಾವಿ ಕೊರೆಸಲಾಗಿದೆ ಆದರೂ ಶುದ್ಧ ನೀರು ಏಕೆ ಪೂರೈಸುತ್ತಿಲ್ಲ ಎಂದು ಪಿಡಿಒ ಲತಾ ಅವರನ್ನು ತರಾಟೆ ತೆಗೆದುಕೊಂಡರು. 5 ಹೊಸ ಕೊಳವೆ ಬಾವಿಗಳ ಪೈಕಿ ಎರಡು ವಿಫ‌ಲ ವಾಗಿದೆ. ಒಂದು ರೀಬೋರ್‌ ಮಾಡ ಲಾಗಿದೆ. ಉಳಿದ ಎರಡು ಕೊಳವೆ ಬಾವಿಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ನೀರು ಬರುತ್ತಿದೆ. ಹಾಗಾಗಿ ಟ್ಯಾಕರ್‌ ನೀರು ಸರಬರಾಜು ಮಾಡಲಾಗುತ್ತದೆ ಎಂದು ಪಿಡಿಒ ತಿಳಿಸಿದರು. ನೀರಿನ ಗುಣಮಟ್ಟ ಪರಿಶೀಲಿಸಿದ್ದೀರ ಎಂದು ಕೇಳಿದ ಪ್ರಶ್ನೆಗೆ ಪಿಡಿಒ ನಿರುತ್ತರರಾದರು.

ಕೆರೆಗೆ ನೀರು ತುಂಬಿಸಿ: ಮಾರ್ಕೋನಹಳ್ಳಿ ಜಲಾಶಯ ದಿಂದ ಅಮೃತೂರು ಭಾಗದ ಸಾಲು ಕೆರೆಗಳಿಗೆ ನೀರು ಹರಿಸಿದರೆ, ಅಂರ್ತಜಲ ಮಟ್ಟ ಸುಧಾರಣೆಯಾಗಿ ಕೊಳವೆಬಾವಿಗಳಿಗೆ ನೀರು ಬರುತ್ತದೆ ಎಂದು ಗ್ರಾಮಸ್ಥರು ತಿಳಿಸಿದರು. ಗ್ರಾಮಸ್ಥರ ಸಲಹೆ ಸ್ವಾಗತಿಸಿದ ಶಾಸಕರು ಈ ಬಗ್ಗೆ ಕ್ರಮಕೈಗೊಳ್ಳಲಾಗುವುದೆಂದರು.

ಅಕ್ಕಿ ತೂಕದಲ್ಲಿ ಮೋಸ: ನ್ಯಾಯ ಬೆಲೆ ಅಂಗಡಿಯವರು ಅಕ್ಕಿ ಕಡಿಮೆ ಬರುತ್ತಿದೆ ಎಂದು ಆರು ಕೆ.ಜಿ ಮಾತ್ರ ಕೊಡುತ್ತಿದ್ದಾರೆ. ಅಲ್ಲದೆ ಕೆ.ಜಿ ತೊಗರಿಬೆಳೆಗೆ 38 ರೂ.ಇದ್ದರೆ 50 ರೂ ತೆಗೆದುಕೊಳ್ಳುತ್ತಿದ್ದಾರೆ ಎಂದು ನಾಗರಿಕರು ದೂರಿದರು.

ಅಕ್ರಮ ಎಸಗುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಹಾರ ಇನ್ಸ್‌ಸ್ಪೆಕ್ಟರ್‌ಗೆ ಸೂಚಿಸಿದರು. ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌ ಮಾತನಾಡಿ, ತಪ್ಪಿಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. ಜು. 1ರಿಂದ ಕಂದಾಯ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ ಎಂದು ಶಾಸಕರು ತಿಳಿಸಿದರು.

ತರಾಟೆ: ಎಚ್ವಿಡಿಎಸ್‌ ಯೋಜನಡಿಯಲ್ಲಿ ರೈತರ ಪಂಪ್‌ ಸೆಟ್‌ಗಳಿಗೆ ವಿದ್ಯುತ್‌ ಪರಿವರ್ತಕ ಅಳವಡಿಸಿಲು 500 ಬಾರಿ ಕರೆ ಮಾಡಿದ್ದೇನೆ ಎಂದು ಬೆಸ್ಕಾಂ ಎಸ್‌ಒ ನವೀನ್‌ಕುಮಾರ್‌ ಅವರನ್ನು ಶಾಸಕರು ತರಾಟೆ ತೆಗೆದು ಕೊಂಡರು. ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಂಡಿರುವ ರೈತರು ಅನ್ಯಾಯವಾಗಿ ದಂಡ ಕಟ್ಟಬೇಕಾಗುತ್ತದೆ. ಕೂಡಲೇ ಸಕ್ರಮ ಮಾಡಿಕೊಡಿ ಎಂದು ಸಲಹೆ ನೀಡಿದರು. ಇಒ ಶಿವರಾಜಯ್ಯ, ಗ್ರಾಪಂ ಅಧ್ಯಕ್ಷ ವೆಂಕಟರಾಮು, ಉಪಾಧ್ಯಕ್ಷೆ ಸೈದಾಬೇಗಂ, ಸದಸ್ಯರಾದ ಮರಿಯಪ್ಪ, ಪಾರ್ವತಮ್ಮ, ಭರತ್‌, ಸೋಮಶೇಖರ್‌, ತಾಲೂಕು ಪಂಚಾಯತಿ ಸದಸ್ಯೆ ನಾಗಮ್ಮ, ಮುಖಂಡ ರಾದ ಹರೀಶ್‌ಗೌಡ, ದಿವಾಕರ್‌ಗೌಡ, ಗೂಳಿಗೌಡ, ಬೋರೇಗೌಡ ಇದ್ದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.