ಪಾಲಿಕೆ ವ್ಯಾಪ್ತಿ ಆಸ್ತಿ ತೆರಿಗೆ ಶೇ.5 ರಿಯಾಯಿತಿ


Team Udayavani, May 29, 2020, 7:03 AM IST

palike-vyapti

ತುಮಕೂರು: ಕೊರೊನಾ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ಯನ್ನು ನೀಡಿ ಸರ್ಕಾರ ಆದೇಶ ನೀಡಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಮೇಯರ್‌ ಫ‌ರೀದಾಬೇಗಂ ಹೇಳಿದರು. ಪತ್ರಿಕಾ  ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ತಿ ತೆರಿಗೆ ಪಾವತಿಗೆ ಮೇ ಅಂತ್ಯ  ದವರೆಗೆ ಅವಕಾಶ ನೀಡಲಾಗಿತ್ತು, ಈಗ ಅದನ್ನು ಜುಲೈ ಅಂತ್ಯದವರೆಗೆ ತೆರಿಗೆ ಪಾವ  ತಿಗೆ ಅವಕಾಶ ನೀಡಿದ್ದು, ಸಾರ್ವಜನಿಕರು ಈ ಯೋಜನೆಯ  ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಸರ್ಕಾರಕ್ಕೆ ಮನವಿ: ಪ್ರತಿ ಮೂರು ವರ್ಷಕ್ಕೆ ಆಸ್ತಿ ತೆರಿಗೆ ಹೆಚ್ಚಳವಾಗಬೇಕಿದ್ದು ಅದರಂತೆ ಸ್ಥಾಯಿ ಸಮಿತಿ ಅಧ್ಯಕ್ಷರೊಂದಿಗೆ ಚರ್ಚಿಸಿ ಒಪ್ಪಿಕೊಂಡಿದ್ದೇವೆ. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸದಸ್ಯರು ಒತ್ತಾಯ ಮಾಡಿದ್ದರು. ಶಾಸಕರು, ಸಂಸದರು ಈ ಬಗ್ಗೆ ಮಾತನಾಡುವ ಭರವಸೆ ನೀಡಿದ್ದರು, ಶೇ.15ರಷ್ಟು ತೆರಿಗೆ ಹೆಚ್ಚಳವನ್ನು ಮುಂದೂಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.

ಸರ್ಕಾರದಿಂದ ಸೌಲಭ್ಯ ಸಿಕ್ಕಿಲ್ಲ: ತುಮಕೂರು ನಗರದಲ್ಲಿ ಸೀಲ್‌ಡೌನ್‌ ಪ್ರದೇಶಕ್ಕೆ ಯಾವುದೇ ಸೌಲಭ್ಯ ನೀಡಿಲ್ಲ, ಅಲ್ಲಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ ಅಲ್ಲಿರುವವರಿಗೆ ಕನಿಷ್ಠ ಊಟವನ್ನು ಪೂರೈಕೆ ಮಾಡಲಿಲ್ಲ ಈ  ವರೆಗೆ ಸರ್ಕಾರದಿಂದ ಪಾಲಿಕೆಗೆ ಯಾವುದೇ ಸೌಲಭ್ಯ ದೊರಕಿಲ್ಲ ಎಂದು ಆರೋಪಿಸಿದರು.

ಸ್ಪಂದಿಸದ ಆಯುಕ್ತರು: ಕೊರೊನಾದ ಕಾರಣದಿಂದಾಗಿ ಅಧಿಕಾರಿಗಳಿಗೆ ಪಾಲಿಕೆ ಸದಸ್ಯರು ಸಹಕಾರ ನೀಡುತ್ತಿದ್ದಾರೆ ಆದರೆ ಆಯುಕ್ತರಿಗೆ ಮೇಯರ್‌ ಕರೆ ಮಾಡಿದರೂ ಪ್ರತಿಕ್ರಿಯಿಸುವುದಿಲ್ಲ ಇದರಿಂದಾಗಿ ಕೆಲಸ ಮಾಡಲು ಆಗುತ್ತಿಲ್ಲ  ಎಂದರು. ಉಪ ಮೇಯರ್‌ ಶಶಿಕಲಾ, ಮಹೇಶ್‌, ಕುಮಾರ್‌, ಇನಾಯತ್‌ವುಲ್ಲಾಖಾನ್‌ ಇದ್ದರು.

ಪಾಲಿಕೆಗೆ ಅನುದಾನ ಬಂದಿಲ್ಲ: ನಗರದಲ್ಲಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸೀಲ್‌ಡೌನ್‌ ಮಾಡಿರುವ ಪ್ರದೇಶದಲ್ಲಿ ವಾಸಿಸುವವರಿಗೆ ದುಡಿಮೆ ಇಲ್ಲ, ಅಲ್ಲಿರುವವರಿಗೆ ಅಗತ್ಯ ಸೌಲಭ್ಯಗಳನ್ನು ನೀಡದೇ ಹೋದರೆ ಜೀವನ ನಡೆಸುವುದು ಹೇಗೆ? ದುಡಿಮೆ ಇಲ್ಲದ ಮೇಲೆ ಜನರು ಬದುಕುವುದು ಹೇಗೆ ಪ್ರಶ್ನಿಸಿರುವ ಮೇಯರ್‌, ಜನರು ಸುಮ್ಮನೆ ಜನಪ್ರತಿನಿಧಿಗಳ ಮೇಲೆ ಆರೋಪಿಸುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಯಾವುದೇ ಅನುದಾನವನ್ನು ಪಾಲಿಕೆಗೆ ಮಾತ್ರ ಅಲ್ಲ, ಜಿಲ್ಲಾಡಳಿತಕ್ಕೂ ನೀಡಿಲ್ಲ ಎಂದು ಮೇಯರ್‌ ಹೇಳಿದರು.

ಆಯುಕ್ತರು ಪಾಲಿಕೆಯಲ್ಲಿ ಹೆಚ್ಚಾಗಿ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಕೆಳಹಂತದ ಅಧಿಕಾರಿಗಳು ಸಮಯ ವ್ಯರ್ಥ ಮಾಡುತ್ತಿದ್ದು, ಪಾಲಿಕೆ ಆಡಳಿತ ಸರಾಗವಾಗಿಲ್ಲ. ಸ್ಲಂಗಳಲ್ಲಿ ಯುಜಿಡಿ ಕೆಲಸ ನಡೆಯುತ್ತಿಲ್ಲ. ಪಾಲಿಕೆ ಸದಸ್ಯರು ಸಂಪರ್ಕಿಸಿದರೂ ಆಯುಕ್ತರು ಸಿಗುತ್ತಿಲ್ಲ.
-ಫ‌ರೀದಾ ಬೇಗಂ, ಮೇಯರ್‌

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha-Kharandlaje

Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್‌ ಸರ್ಕಾರ: ಕೇಂದ್ರ ಸಚಿವೆ ಶೋಭಾ 

5-tumkur

Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ

4-koratagere

Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.