ಪ್ರವಾಸದ ವೇಳೆ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಶಿಕ್ಷಕರು!
Team Udayavani, Dec 13, 2017, 11:43 AM IST
ತುಮಕೂರು: ಪ್ರವಾಸಕ್ಕೆ ತೆರಳಿದ್ದ ಕೊರಟಗೆರೆಯ ಬೊಮ್ಮಲದೇವಿ ಸರ್ಕಾರಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮೂವರು ಶಿಕ್ಷಕರು ಮದ್ಯ ಕುಡಿಸಿದ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕರಾವಳಿಯ ಪುಣ್ಯ ಕ್ಷೇತ್ರಗಳು ಮತ್ತು ಪ್ರೇಕ್ಷಣಿಯ ಸ್ಥಳಗಳನ್ನು ಸಂದರ್ಶಿಸಿ ವಾಪಾಸಗುತ್ತಿದ್ದ ವೇಳೆ ವಿದ್ಯಾರ್ಥಿಗಳು ಬಸ್ನಲ್ಲಿ ಡ್ಯಾನ್ಸ್ ಮಾಡಿ ಸುಸ್ತಾಗಿದ್ದಾರೆ. ಈ ವೇಳೆ ಕುಡಿಯಲು ನೀರು ಕೇಳಿದಾಗ ಶಿಕ್ಷಕರಾದ ಸಚ್ಚಿದಾನಂದ್, ಶೇಕ್ ಮುಜಾಮಿಲ್ ಮತ್ತು ಧನ್ಸಿಂಗ್ ರಾಥೋಡ್ ಅವರು ಮದ್ಯ ಬೆರೆಸಿದ ನೀರನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಮದ್ಯ ಮಿಶ್ರಿತ ನೀರು ಕುಡಿದ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ಹಲವರು ವಾಂತಿ ಮಾಡಿಕೊಂಡರೆ, ಇನ್ನು ಕೆಲವರು ತಲೆ ಸುತ್ತು ಬಂದು ಕುಸಿದು ಬಿದ್ದರು ಎಂದು ಪ್ರವಾಸಕ್ಕೆ ತೆರಳಿದ್ದ ವಿದ್ಯಾರ್ಥಿಗಳು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೂವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದರು.
ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಗೆ ದೂರು ನೀಡಲಾಗಿದ್ದು,ಮೂವರನ್ನು ಅಮಾನತು ಮಾಡಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ