ಹಿಂದುಳಿದ ವರ್ಗದವರೇ ಸಂಘಟಿತರಾಗಿ


Team Udayavani, Feb 4, 2019, 7:22 AM IST

hindulida.jpg

ತುಮಕೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಗೆಲುವಿನಲ್ಲಿಯೂ ಹಿಂದುಳಿದ ವರ್ಗಗಳು ನಿರ್ಣಾಯಕ ಪಾತ್ರವಹಿಸಲಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳು ಸಂಘಟಿತರಾಗುವುದು ಅವಶ್ಯಕ ಎಂದು ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ತಿಳಿಸಿದರು.

ನಗರದ ಶ್ರೀದೇವಿ ಕಾಲೇಜಿನಲ್ಲಿ ಭಾನುವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಹಿಂದುಳಿದ ವರ್ಗಗಳ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾತನಾ ಡುತ್ತಾ, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಎಂಟರಿಂದ ಒಂಭತ್ತು ಲಕ್ಷ ಹಿಂದುಳಿದ ವರ್ಗಗಳ ಮತಗಳಿದ್ದು, ಮತ್ತೂಮ್ಮೆ ಮೋದಿ ಅವರನ್ನು ಪ್ರಧಾನಿ ಮಾಡುವ ನಿಟ್ಟಿನಲ್ಲಿ ಒಬಿಸಿ ಮೋರ್ಚಾ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕಿದೆ. ಸಕ್ರಿಯ ವಾಗಿರದ ಘಟಕಗಳಿಗೆ ಬೇರೆಯವರನ್ನು ನೇಮಿಸು ವಂತೆ ಒಬಿಸಿ ಜಿಲ್ಲಾಧ್ಯಕ್ಷರಿಗೆ ಸೂಚಿಸಿದರು.

ಮೀಸಲಾತಿಗೆ ಹೋರಾಟ ಮಾಡಿ: ಅತಿ ಹಿಂದುಳಿದ ವರ್ಗಕ್ಕೆ ಸೇರಿದ ಮೋದಿ ಅವರು ಪ್ರಧಾನಿಯಾದ ನಂತರ ಸಂವಿಧಾನ ಬದ್ಧವಾದ ರಕ್ಷಣೆಗಳನ್ನು ಒಬಿಸಿ ವರ್ಗಕ್ಕೂ ಕಲ್ಪಿಸಿಕೊಟ್ಟಿದ್ದಾರೆ. ದೇಶದ ಅಭಿವೃದ್ಧಿಗೆ ಪಣ ತೊಟ್ಟಿರುವ ಅವರನ್ನು ಗೆಲ್ಲಿಸಿ ಮತ್ತೂಮ್ಮೆ ಪ್ರಧಾನಿ ಮಾಡಬೇಕಾದ ಹೊಣೆಗಾರಿಕೆ ಒಬಿಸಿ ವರ್ಗದ ಮೇಲಿದೆ ಎಂದ ಅವರು, ಹಿಂದುಳಿದ ವರ್ಗಗಳು ಒಗ್ಗಟ್ಟು ಕಾದುಕೊಳ್ಳುವುದರ ಜೊತೆಗೆ ಒಬಿಸಿ ಮೀಸಲಾತಿ ಪಡೆದುಕೊಳ್ಳಲು ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು.

ಮುದ್ರಾ ಬ್ಯಾಂಕ್‌ನಿಂದ ಸಾಲ: ಹಿಂದುಳಿದ ವರ್ಗಗಳಿಗೆ ಮೀಸಲಾಗಿರುವ ಟಿಕೆಟ್ ಅನ್ನು ಪಟ್ಟು ಹಿಡಿದು ಪಡೆದುಕೊಳ್ಳಬೇಕು. ಒಬಿಸಿ ಜನಪ್ರತಿನಿಧಿಗಳನ್ನು ಛಲದಿಂದ ಗೆಲ್ಲಿಸಿಕೊಳ್ಳಬೇಕು ಎನ್ನುವುದನ್ನು ಅರಿತುಕೊಳ್ಳಬೇಕು. ಮೋದಿ ಅವರು ಪ್ರಧಾನಿಯಾದ ನಂತರ ಸ್ಥಾಪಿಸಿದ ಮುದ್ರಾ ಬ್ಯಾಂಕ್‌ನಿಂದ ರಾಜ್ಯದಲ್ಲಿ 76 ಲಕ್ಷ ಮಂದಿ ಸಾಲ ಪಡೆದುಕೊಂಡು ಸ್ವಾವಲಂಬಿಗಳಾಗಿದ್ದಾರೆ. ಕೇಂದ್ರ ಸರ್ಕಾರದ ಹಣ ಮಧ್ಯವರ್ತಿಗಳ ಕೈಗೆ ಸಿಗದಂತೆ ಜನರಿಗೆ ತಲುಪಿಸಲು ಜನಧನ್‌ ಖಾತೆ ಪ್ರಾರಂಭಿಸಿದರು. ಮೋದಿ ಅವಧಿಯ ಸಾಧನೆಗಳನ್ನು ಜನರಿಗೆ ಮುಟ್ಟಿಸಬೇಕು ಎಂದರು.

ಕಳ್ಳರ ಗುಂಪು: ಮೋದಿ ವಿರುದ್ಧ ನಿಂತಿರುವ ಘಟಬಂಧನ್‌ ಎಂಬ ಕಳ್ಳರ ಗುಂಪು, ತಮ್ಮ ಕುಟುಂಬ ರಾಜಕೀಯವನ್ನು ಮಾಡಿಕೊಳ್ಳಲು, ಕುಟುಂಬದವರ ರಾಜಕೀಯ ಘಟಬಂಧನ್‌ ಮಾಡಿಕೊಳ್ಳಲಾಗಿದ್ದು, ಬಿಜೆಪಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದಂತೆ ಘಟಬಂಧನ್‌ ಪ್ರಧಾನಿ ಅಭ್ಯರ್ಥಿಯನ್ನು ತಾಕತ್ತಿದ್ದರೆ ಘೋಷಿಸಲಿ. ಪ್ರಧಾನಿ ಅಭ್ಯರ್ಥಿ ಹೆಸರು ಹೇಳಿದ ತಕ್ಷಣ ಘಟಬಂಧನ್‌ ಛಿದ್ರವಾಗುತ್ತದೆ ಎಂದು ಲೇವಡಿ ಮಾಡಿದರು.

ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ಮಾಜಿ ವಿಧಾನಪರಿಷತ್‌ ಸದಸ್ಯ ಡಾ.ಹುಲಿನಾಯ್ಕರ್‌ ಮಾತನಾಡಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಆಯೋಗ ರಚಿಸಿದ್ದು, ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ದೊರಕಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕರ್ತರು ಕಾರ್ಯೋನ್ಮುಖರಾಗಿ: ರಾಜ್ಯದಲ್ಲಿ ಬಿಜೆಪಿಗೆ ಹಿಂದುಳಿದ ವರ್ಗಗಳ ಶಕ್ತಿ ಇದೆ ಎಂಬುದನ್ನು ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ತೋರಿಸಿದ್ದಾರೆ. ಹಿಂದುಳಿದ ವರ್ಗಗಳು ಸಂಘಟಿತರಾಗುವ ಮೂಲಕ ಲೋಕಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕಿದ್ದು, ಈ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕಿದೆ ಎಂದು ಸೂಚಿಸಿದರು.

ಕಾರ್ಯಕಾರಿ ಸಮಿತಿಯಲ್ಲಿ ಭಾಗವಹಿಸಿದ್ದ ಪದಾಧಿಕಾರಿಗಳು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ 9ಲಕ್ಷ ಹಿಂದುಳಿದ ವರ್ಗಗಳ ಮತದಾರರಿದ್ದು, ಮುಂಬರುವ ಚುನಾವಣೆಯಲ್ಲಿ ಹಿಂದುಳಿದ ವರ್ಗಕ್ಕೆ ಲೋಕಸಭಾ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ತಿಪ್ಪೇಸ್ವಾಮಿ, ಎಸ್‌.ಕೆ.ರಾಜು, ಜಿಲ್ಲಾಧ್ಯಕ್ಷ ಬೆಟ್ಟಸ್ವಾಮಿ, ನಗರ ಅಧ್ಯಕ್ಷ ಕೆ.ವೇದಮೂರ್ತಿ, ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್‌, ನಗರ ಪ್ರಧಾನಕಾರ್ಯದರ್ಶಿ ಜೆ.ಜಗದೀಶ್‌, ಜಿಲ್ಲಾ ಕಾರ್ಯದರ್ಶಿ ಚಂದ್ರಬಾಬು, ಬಲರಾಮ್‌, ರಾಮಲಿಂಗಪ್ಪ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.