ರೊಬೋಟಿಕ್ ‌ಕೇಂದ್ರ ಆರಂಭ


Team Udayavani, Nov 30, 2020, 3:01 PM IST

tk-tdy-1

ತುಮಕೂರು: ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪೂರಕವಾಗಿ ರೊಬೋಟಿಕ್‌ (ಮಾನವ ರಹಿತ) ಕ್ಷೇತ್ರದಲ್ಲಿ ಹೆಚ್ಚಿನ ಅಧ್ಯಯನ, ತರಬೇತಿ ಮತ್ತು ಉದ್ಯೋಗ ಕುರಿತಾದ ಪರಸ್ಪರ ವಿನಿಮಯಕ್ಕಾಗಿ ಸಿಂಗಾಪುರ್‌ನ ಬ್ಲೂಪ್ರಿಸಮ್‌ ಸಂಸ್ಥೆ ಹಾಗೂ ಬೆಂಗಳೂರಿನ ನತೆಲ್ಲಾ ಕಂಪನಿಗಳ ಸಹಯೋಗದಲ್ಲಿ ನಗರದ ಶ್ರೀ ಸಿದ್ಧಾರ್ಥ ಎಂಜಿನಿಯರಿಂಗ್‌ ಕಾಲೇಜಿನಲ್ಲಿ 20 ಲಕ್ಷ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೊಬ್ಯಾಟಿಕ್‌ ಸಂಶೋಧನಾಕೇಂದ್ರ ಆರಂಭಿಸಲಾಗಿದೆ.

600 ಮಂದಿ ವಿದ್ಯಾರ್ಥಿಗಳಿಗೆ ಅವಕಾಶ: ಸಿದ್ಧಾರ್ಥ ಎಂಜಿನಿಯರಿಂಗ್‌ ಕಾಲೇಜಿನ ಎಲೆಕ್ಟ್ರಾನಿಕ್ಸ್‌ ಮತ್ತು ಕಮ್ಯೂನಿಕೇಷನ್‌ ಹಾಗೂ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ20 ಲಕ್ಷ ವೆಚ್ಚದಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಒಳಗೊಂಡಂತೆ ಈ ರೊಬೋಟಿಕ್‌ ಪ್ರೋಸಸ್‌ ಆಟೊಮೇಷನ್‌ ಕೇಂದ್ರದಲ್ಲಿ ಎರಡು ವರ್ಷದ ಈ ಪ್ರಾಜೆಕ್ಟ್‌ನಲ್ಲಿ ಸುಮಾರು 600 ಮಂದಿ ವಿದ್ಯಾರ್ಥಿಗಳಿಗೆ ರೊಬೋಟಿಕ್‌ ಕ್ಷೇತ್ರದಲ್ಲಿ ಅಧ್ಯಯನ, ತರಬೇತಿ ಮತ್ತು ಉದ್ಯೋಗ ಕುರಿತಾದ ಸಂಶೋಧನೆಗೆ ಅವಕಾಶವಿದೆ.

ನೋಡಲ್‌ ಕೇಂದ್ರ: ಇದು ಕಾಲೇಜಿನ ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ ಜಿಲ್ಲೆಯ ಇತರೆ ಎಂಜಿನಿಯ ರಿಂಗ್‌ ಕಾಲೇಜು ವಿದ್ಯಾರ್ಥಿಗಳಿಗೂ ಉಪಯೋಗವಾಗಲಿದೆ. ಸಿಂಗಾಪುರ್‌ನ ಬ್ಲೂಪ್ರಿಸಮ್‌ ಸಂಸ್ಥೆ ಭಾರತದಲ್ಲಿ ರೊಬೋಟಿಕ್‌ ಕ್ಷೇತ್ರದಲ್ಲಿ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಂಡರೂ ಅವುಗಳ ಆರಂಭಿಸಲು ಮತ್ತು ನಿರ್ವಹಣೆ ಮಾಡಲು ತುಮಕೂರಿನಲ್ಲಿರುವ ಘಟಕವನ್ನು ನೋಡಲ್‌ ಕೇಂದ್ರವನ್ನಾಗಿ ಪರಿಗಣಿಸಲಾಗಿದೆ.

ಈ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಅವಕಾಶ, ತರಬೇತಿ ನೀಡುವುದಲ್ಲದೆ, ಉದ್ಯೋಗದಲ್ಲಿ ವೃತ್ತಿ ನೈಪುಣ್ಯತೆಯನ್ನುಕಲಿಸಲಾಗುತ್ತದೆ. ಉದ್ಯೋಗ ಕೇತ್ರದಲ್ಲಿ ಹೆಚ್ಚುತ್ತಿರುವ ಒತ್ತಡ ಮತ್ತು ಕಡಿಮೆ ಸಮಯದಲ್ಲಿ ಹೆಚ್ಚು ಉತ್ಪಾದನೆ ಗುರಿಯನ್ನು ಸಾಧಿಸುವ ಹಿನ್ನೆಲೆಯಲ್ಲಿ ವೈದ್ಯಕೀಯ, ಶಿಕ್ಷಣ,ಕೈಗಾರಿಕಾ ಮುಂತಾದ ಪ್ರಮುಖಕೇತ್ರಗಳಲ್ಲಿ ರೊಬೋಟಿಕ್‌ ತಂತ್ರಜ್ಞಾನದ ಮೂಲಕ ಕಾರ್ಯ ನಿರ್ವಹಣೆ ಮತ್ತು ನಿಯಂತ್ರಣ ಮಾಡುವ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.

ಸಂಶೋಧನೆ ಮತ್ತು ತರಬೇತಿ ಕೇಂದ್ರಕ್ಕೆ ಚಾಲನೆ: ಶ್ರೀ ಸಿದ್ಧಾರ್ಥ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್‌ ಮತ್ತು ಕಮ್ಯೂನಿಕೇಷನ್‌ ವಿಭಾಗದಲ್ಲಿ ಆರಂಭಿಸಲಾಗಿರುವ ರೊಬೋಟಿಕ್‌ ಪ್ರೋಸಸ್‌ ಆಟೊಮೇಷನ್‌ ಕೇಂದ್ರವನ್ನು ಸಾಹೇ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಬಾಲಕೃಷ್ಣ ಪಿ.ಶೆಟ್ಟಿ ಉದ್ಘಾಟಿಸಿ ಮಾತನಾಡಿ, ರೊಬೋಟಿಕ್‌ ಆಟೊಮೇಷನ್‌ ಪ್ರಕ್ರಿಯೆಯಿಂದ ಜನಜೀವನ ನಿರ್ವಹಣೆಯ ಬಹುತೇಕ ಕ್ಷೇತ್ರಗಳಿಗೆ ಮಹತ್ತರವಾದ ಉಪಯೋಗವಾಗಲಿದೆ ಎಂದರು.

ಲೋಪದೋಷ ತಪ್ಪಿಸಬಹುದು: ಸದಾಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಕ್ಷೇತ್ರದಹಲವು ಬಿಕ್ಕಟುಗಳಿಗೆ ರೊಬೋಟಿಕ್‌ ತಂತ್ರಜ್ಞಾನಅಳವಡಿಕೆಯಿಂದ ಪರಿಹಾರ ದೊರಕಲಿದೆ. ರೋಗಿಗಳ ವೈಯಕ್ತಿಕ ವಿವರಗಳ ಗೌಪ್ಯತೆ, ಆಸ್ಪ್ರತೆಯ ಕಚೇರಿ ದಾಖಲೆಗಳ ನಿರ್ವಹಣೆಯಲ್ಲಿ ಆಗುತ್ತಿರುವ ಲೋಪ ದೋಷಗಳು ಮತ್ತು ವಿಳಂಬವನ್ನು ತಪ್ಪಿಸಹುದು ಎಂದರು.

ಹೊಸ ಆವಿಷ್ಕಾರಗಳಿಗೆ ಆದ್ಯತೆ: ಇಂದಿನ ಡಿಜಿ ಟಲ್‌ ಯುಗದಲ್ಲಿ ಕಾಲಮಿತಿಯೊಳಗೆ ಯಾವುದೇ ಕೆಲಸ ಗಳು ಸಮರ್ಪಕವಾಗಿ ಆಗುತ್ತಿಲ್ಲದಿರು ವುದರಿಂದ ರೊಬೋಟಿಕ್‌ ಪ್ರಕ್ರಿಯೆ ಅಳವಡಿಕೆ ಅನಿವಾರ್ಯ ಮತ್ತು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಸಮೂಹದಲ್ಲಿ ಹೊಸ ಆವಿಷ್ಕಾರಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ತರಬೇತಿ: ಬ್ಲೂಪ್ರಿಸಮ್‌

ಸಂಸ್ಥೆಯ ಬೆಂಗಳೂರು ವಿಭಾಗದ ಎಂ. ಮಂಜುನಾಥ್‌ ಮಾತನಾಡಿ, ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗವಕಾಶಗಳನ್ನುಸೃಷ್ಟಿಸಿಕೊಳ್ಳುವ ವೃತ್ತಿ ನೈಪುಣ್ಯತೆಯನ್ನು ತರಬೇತಿಗಳ ಮೂಲಕ ಕಲಿಸಿ ಕೊಡಲಾಗುವುದು ಎಂದರು.ಬೆಂಗಳೂರಿನ ನತೆಲ್ಲಾ ಇನೋವೇಷನ್‌ ಕಂಪ ನಿಯ ನಿರ್ದೇಶಕ ಎಂ.ಪ್ರದೀಪ್‌ ಶ್ರೀ ಸಿದ್ಧಾರ್ಥ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲಡಾ.ರವಿಪ್ರಕಾಶ್‌, ಸಾಹೇ ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಎಮ್‌.ಝೆಡ್‌.ಕುರಿಯನ್‌ ಮಾತನಾಡಿದರು.

ತ ‌ರಬೇತಿ ಕಾರ್ಯಕ್ರಮದ ಸಂಯೋಜಕ ಡಾ. ಎಂ.ಸಿ. ಚಂದ್ರಶೇಖರ್‌ ಹಾಗೂ ಪ್ರಾಧ್ಯಾಪಕರಾದ ಎಂ.ಸುಷ್ಮಾ ಅವರು ರೊಬೋಟಿಕ್‌ ಪ್ರೋಸಸ್‌ ಆಟೊಮೇಷನ್‌ ಕೇಂದ್ರದ ‌ ಕಾರ್ಯನಿರ್ವಹಣೆಯ ಮುನ್ನೋಟಗಳನ್ನು ವಿವ ರಿಸಿದರು. ಎಲೆಕ್ಟ್ರಾನಿಕ್ಸ್‌ ಮತ್ತು ಕಮ್ಯೂನಿಕೇಷನ್‌ ಹಾಗೂ ಮಾಹಿತಿ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರುಗಳಾದ ‌ ಎಚ್‌.ಸಿ. ‌ರಶ್ಮಿ, ಎನ್‌ .ಪ್ರದೀಪ್‌, ನಿರ್ಮಲ.ಜಿ, ಪ್ರಿಯಾಂಕ ಇದ್ದರು.

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.