ಗಾಂಧೀಜಿ ತಂಗಿದ್ದ ಕಟ್ಟಡ ಅಭಿವೃದ್ಧಿ ಆಗಿಲ್ಲ!

ಸ್ವಾತಂತ್ರ್ಯ ಹೋರಾಟಕ್ಕಾಗಿ ಜನರನ್ನು ಸಂಘಟಿಸಿದ್ದ ಸ್ಥಳ ಅಭಿವೃದ್ಧಿ ಆಗಲಿ

Team Udayavani, Aug 15, 2021, 6:31 PM IST

ಗಾಂಧೀಜಿ ತಂಗಿದ್ದ ಕಟ್ಟಡ ಅಭಿವೃದ್ಧಿ ಆಗಿಲ್ಲ!

ಮಹಾತ್ಮ ಗಾಂಧೀಜಿ ಇಡೀ ರಾಷ್ಟ್ರದ ದೇಶಭಕ್ತರನ್ನು ಸಂಘಟಿಸಲು ಪ್ರವಾಸ ಕೈಗೊಂಡ ಸಂದರ್ಭದಲ್ಲಿ, ತುಮಕೂರಿಗೆ ಬಂದು ಎರಡು ದಿನ ತಂಗಿದ್ದ ಸರ್ಕಾರಿ ಕಾಲೇಜು ಕಟ್ಟಡ ಅಭಿವೃದ್ಧಿ ಪಡಿಸಿ ಸ್ಮಾರಕವನ್ನಾಗಿಸಬೇಕೆಂದು ಹಲವಾರು ವರ್ಷಗಳಿಂದ ಹಲವರ ಒತ್ತಾಯವಿದ್ದು, ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಅಭಿವೃದ್ಧಿ ಪಡಿಸುವ ಕನಸ್ಸು ಇನ್ನು ನನಸಾಗಿಲ್ಲ.

ತುಮಕೂರು: ಹಲವಾರು ಸ್ವಾತಂತ್ರ್ಯ ಯೋಧರನ್ನು ನೀಡಿದ ಜಿಲ್ಲೆಯಾಗಿದೆ. ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ನೂರಾರು ಜನರು ಭಾಗವಹಿಸಿ ಹಲವರು ಪ್ರಾಣ ತ್ಯಾಗವನ್ನೂ ಮಾಡಿದ್ದಾರೆ. ಇಂತಹ ಗಂಡು ಮೆಟ್ಟಿದ ಶೈಕ್ಷಣಿಕ ನಗರ ತುಮಕೂರಿಗೆ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಮಾರಂಭ ನಡೆಸಿ, ಅದೇ ಕಾಲೇಜಿನ ಕೊಠಡಿಯಲ್ಲಿ ತಂಗಿದ್ದರು. ಮಹಾತ್ಮ ನೆಲೆಸಿದ್ದ ಈ ಸ್ಮಾರಕ ಅಭಿವೃದ್ಧಿ ಕಾಣದೇ ನಿರ್ಲಕ್ಷ್ಯಕ್ಕೊಳಪಟ್ಟಿದೆ.

ಮಹಾತ್ಮ ಗಾಂಧೀಜಿಯವರೊಂದಿಗೆ ದೇಶದ ಅನೇಕ ದೇಶಭಕ್ತರು ಸ್ವಾತಂತ್ರ್ಯ ತಂದು ಕೊಡಲು ಹೋರಾಟ ನಡೆಸಿದರು. ಇಂತಹ ಹೋರಾಟಗಾರರ ಬಗ್ಗೆ ಇಂದಿನ ಯುವ ಜನಾಂಗಕ್ಕೆ ಅರಿವು ಮೂಡಿಸುವ ಕೆಲಸ ಆಗಲೇಬೇಕಾಗಿದೆ. ಗಾಂಧೀಜಿಯವರು ಈ ರಾಷ್ಟ್ರವನ್ನು ಬ್ರಿಟಿಷ್‌ ದಾಸ್ಯ ಸಂಕೋಲೆಯಿಂದ ಮುಕ್ತಗೊಳಿಸಲು ಇಡೀ ದೇಶದಲ್ಲಿ ಸಂಚಾರ ಮಾಡಿ ಜನಜಾಗೃತಿ ಉಂಟು ಮಾಡಿ ಹೋರಾಟಕ್ಕೆ ಉರಿದುಂಬಿಸಲು ಬಂದಿದ್ದ ಸಂದರ್ಭದಲ್ಲಿ ತುಮಕೂರಿನಲ್ಲೂ ಒಂದು ದಿನ ತಂಗಿ ಜನಜಾಗೃತಿ ಉಂಟು ಮಾಡಿ ತುಮಕೂರು ಜಿಲ್ಲೆಯಲ್ಲೂ ಸ್ವಾತಂತ್ರ್ಯಹೋರಾಟದ ಕಹಳೆ ಮೊಳಗಲು ಕಾರಣರಾದರು. ಅವರು ತಂಗಿದ್ದ ಸರ್ಕಾರಿ ಕಾಲೇಜು ಕಟ್ಟಡ ಇಂದು ಸ್ಮಾರಕವಾಗಿದೆ. ಆದರೆ, ಅದರ ಅಭಿವೃದ್ಧಿ ಆಗದೇ ಇರುವುದು ವಿಪರ್ಯಾಸವಾಗಿದೆ. 1932ರಲ್ಲಿ ಮಹಾತ್ಮ ಗಾಂಧಿ ತುಮಕೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸದರಿ ಜಾಗದಲ್ಲಿ ಸಾರ್ವಜನಿಕರನ್ನು ಉದ್ಧೇಶಿಸಿ ಭಾಷಣ ಮಾಡಿದ ನಂತರ ಒಂದು ದಿನ ವಿಶ್ರಾಂತಿ ಪಡೆದಿದ್ದರು. ಈ ಹಿನ್ನೆಲೆ ಈ ಕಟ್ಟಡವನ್ನು ಮಹಾತ್ಮ ಗಾಂಧಿ ಸ್ಮಾರಕ ಕಟ್ಟಡವಾಗಿ ಮಾಡಲಾಗಿತ್ತು. ಆದರೆ, ಇದರ ನಿರ್ವಹಣೆ ಅಭಿವೃದ್ಧಿ ಪಡಿಸದೆ ಇಡೀಕಟ್ಟಡ ಹಾಳಾಗಿ ಹೋಗುತ್ತಿತ್ತು. ಇದನ್ನು ಗಮನಿಸಿದ ಜಿಲ್ಲಾಡಳಿತ ಮತ್ತು ಸರ್ಕಾರಿ ಜೂನಿಯರ್‌ಕಾಲೇಜಿನ ವತಿಯಿಂದ ಸುಣ್ಣ ಬಣ್ಣ ಬಳಿದು ಕಟ್ಟಡ ಹಾನಿಯಾಗದಂತೆ
ನೋಡಿಕೊಂಡು ಬಂದಿದೆ.

ಇದನ್ನೂ ಓದಿ:ಆಂಧ್ರ ಪ್ರದೇಶದಲ್ಲಿ ಆಗಸ್ಟ್ 21ರವರೆಗೆ ಕರ್ಫ್ಯೂ ಮುಂದೂಡಿಕೆ

ಶೀಘ್ರ ಅಭಿವೃದ್ಧಿ ಆಗಲಿ: ಸ್ಮಾರ್ಟ್‌ಸಿಟಿ ಯೋಜನೆ ಹಣದಲ್ಲಿ 4.75 ಕೋಟಿ ಹಣ ಖರ್ಚು ಮಾಡಿ ಮೂಲ ಸ್ಮಾರಕ ಇರುವ ಜಾಗ ಬಿಟ್ಟು ಬೇರೆ ಕಡೆ ಗಾಂಧಿ ಸ್ಮಾರಕ ನಿರ್ಮಿಸಲು ಮುಂದಾಗಿದ್ದರು. ಆದರೆ, ನಾಗರಿಕರಿಂದ ವಿರೋಧ ಬಂದ ಹಿನ್ನೆಲೆ ಅದು ಸ್ಥಗಿತವಾಗಿದೆ. ಶಾಸಕ ಜಿ.ಬಿ. ಜ್ಯೋತಿ ಗಣೇಶ್‌ ನೇತೃತ್ವದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಸ್ಮಾರ್ಟ್‌ಸಿಟಿ ಅಧಿಕಾರಿಗಳ ಸಭೆ ನಡೆಸಿ ಇರುವ ಸ್ಮಾರಕದ ಸ್ಥಳದಲ್ಲಿಯೇ ಅಭಿವೃದ್ಧಿ ಪಡಿಸಲು ತೀರ್ಮಾನ ಕೈಗೊಂಡಿದ್ದಾರೆ. ಈ ಹಿಂದೆ ಶಾಸಕರಾಗಿದ್ದ ಡಾ.ಎಸ್‌. ರಫೀಕ್‌ ಅಹಮದ್‌ ಕೂಡಾ ಭೇಟಿ ನೀಡಿ ಸಣ್ಣ ಪುಟ್ಟ ದುರಸ್ಥಿ ಕಾಮಗಾರಿ ಕೈಗೊಂಡಿದ್ದರು. ಸ್ಮಾರ್ಟ್‌ಸಿಟಿಯಿಂದ ಅಭಿವೃದ್ಧಿ ಪಡಿಸಲು ಮುಂದಾಗಿದ್ದು, ಶೀಘ್ರವಾಗಿ ಅಭಿವೃದ್ಧಿಯಾಗಲೆಂದು ಜನರ ಹಾಗೂ ವಿದ್ಯಾರ್ಥಿಗಳ ಆಶಯವಾಗಿದೆ.

ತುಮಕೂರಿಗೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಬಂದು ತಂಗಿ ಇಲ್ಲಿ ಸ್ವಾತಂತ್ರ್ಯಹೋರಾಟಗಾರರಿಗೆ ಸ್ಫೂರ್ತಿ ನೀಡಿದ್ದರು. ಅವರು ತಂಗಿದ್ದ ಸರ್ಕಾರಿ ಜೂನಿಯರ್‌ ಕಾಲೇಜಿನ ಕೊಠಡಿಯನ್ನು ಸ್ಮಾರಕವಾಗಿ ಅಂದಿನಿಂದಲೂ ಉಳಿಸಿಕೊಂಡು ಬಂದಿದ್ದಾರೆ. ಮೂಲ ಕಟ್ಟಡಕ್ಕೆಯಾವುದೇ ತೊಂದರೆ ಆಗದಂತೆ ಆ ಜಾಗವನ್ನು ಅಭಿವೃದ್ಧಿ ಪಡಿಸಿ ಗ್ರಂಥಾಲಯ ಸೇರಿದಂತೆ ಗಾಂಧೀಜಿಯವರ ವಿಚಾರಧಾರೆಗಳು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ದೊರಕುವಂತೆ ಮಾಡಲು ಸ್ಮಾರ್ಟ್‌ಸಿಟಿ ಯೋಜನೆಯಲ್ಲಿಕಾಮಗಾರಿ ಕೈಗೊಳ್ಳಲು ತೀರ್ಮಾನಕೈಗೊಂಡಿದ್ದೇವೆ.
-ಜಿ.ಬಿ. ಜ್ಯೋತಿಗಣೇಶ್‌, ಶಾಸಕ

– ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.