ರಾಗಿ ಕಟಾವಿಗೆ ಯಂತ್ರದ ಮೊರೆ ಹೋದ ರೈತ


Team Udayavani, Dec 12, 2019, 3:00 AM IST

raagi-kata

ಚಿಕ್ಕನಾಯಕನಹಳ್ಳಿ: ಹೊಲದಲ್ಲಿ ರಾಗಿ ಬಿತ್ತಿ ಸುಮಾರು 4 ರಿಂದ 5 ತಿಂಗಳಲ್ಲಿ ಬೆಳೆ ಬರುತ್ತದೆ. ಆದರೆ ರಾಗಿ ಕಣ ಮಾಡಿ ಮನೆಗೆ ರಾಗಿ ಸಾಗಿಸಲು ಕನಿಷ್ಠ ಒಂದು ತಿಂಗಳಾಗುತ್ತದೆ. ಕೂಲಿಗೂ ಜನರ ಕೊರತೆ ಹಾಗಾಗಿ ರೈತರು ಯಂತ್ರದ ಮೊರೆ ಹೋಗಿದ್ದಾರೆ.

ರಾಗಿ ಬಿತ್ತನೆ ಹಾಗೂ ಕಟಾವು ಸಮಯದಲ್ಲಿ ರೈತರು ಎದುರಿಸುವ ಸಮಸ್ಯೆ ನೂರಾರು. ಮಳೆ, ಗೊಬ್ಬರ ಕೊರತೆ, ಸಮಯಕ್ಕೆ ಆಳುಗಳೂ ಸಿಗುವುದಿಲ್ಲ. ಸಿಕ್ಕರು ದುಬಾರಿ ಕೂಲಿ. ರಾಗಿ ಕಾಯಲು ರಾತ್ರಿ ಕಣದಲ್ಲಿ ಮಲಗಬೇಕು ಹೀಗೆ ಹತ್ತಾರು ತೊಂದರೆ ಸಹಿಸಿಕೊಂಡು ರಾಗಿ ಕಣ ಮಾಡಿ ಮನೆಗೆ ತೆಗೆದುಕೊಂಡು ಹೋಗುವಷ್ಟರಲ್ಲಿ ಸಾಕು ಸಾಕಾಗುತ್ತದೆ. ಈಗ ಯಂತ್ರದ ಸಹಾಯದಿಂದ ಕೆಲವೇ ಗಂಟೆಗಳಲ್ಲಿ ರಾಗಿ ಕಣ ಮಾಡಿ ಮನೆಗೆ ಸಾಗಿಸಬಹುದು.

ಯಂತ್ರ ವಿಶೇಷತೆ: ಎರಡು ರಾಗಿ ಕಟಾವು ಯಂತ್ರ ತಮಿಳುನಾಡಿನಿಂದ ತಾಲೂಕಿಗೆ ಬಂದಿದ್ದು, ಎಕರೆ ಲೆಕ್ಕದಲ್ಲಿ ರಾಗಿ ಬೆಳೆ ಕಟಾವು ಮಾಡಲಾಗುತ್ತಿದೆ. ಒಂದು ಎಕರೆ ರಾಗಿ ಬೆಳೆ ಕಟಾವು ಮಾಡಲು ಸುಮಾರು 3600ರಿಂದ 5000 ರೂ. ನಿಗದಿಪಡಿಸಲಾಗಿದೆ. ಈ ಯಂತ್ರವು 10 ಕ್ವಿಂಟಲ್‌ ರಾಗಿ ಶೇಖರಿಸುವಷ್ಟು ಸಾಮರ್ಥ್ಯ ಹೊಂದಿದ್ದು, ಯಂತ್ರದ ಮೂಲಕವೇ ನೇರವಾಗಿ ಟ್ರ್ಯಾಕರ್‌ ಅಥವಾ ಚೀಲಗಳಿಗೆ ರಾಗಿ ಹಾಕಬಹುದಾಗಿದೆ. ರಾಗಿ ಪೈರು ಕತ್ತರಿಸಿ ತೆನೆಯಿಂದ ರಾಗಿ ಕಾಳು ಬೇರ್ಪಡಿಸಿ ಹುಲ್ಲು ಪ್ರತ್ಯೇಕಿಸುತ್ತದೆ. ಒಂದು ಬಾರಿಗೆ 10 ಕ್ವಿಂಟಲ್‌ವರೆಗೆ ಯಂತ್ರದಲ್ಲೆ ಶೇಖರಿಸಬಹುದು.

ಕಡಿಮೆ ಖರ್ಚಿನ ಮೂಲಕ ಕೆಲವೇ ಗಂಟೆಗಳಲ್ಲಿ ಮನೆಗೆ ರಾಗಿ ಸಾಗಿಸಬಹುದಾಗಿದೆ. ಒಂದು ಎಕರೆ ಪ್ರದೇಶದಲ್ಲಿ ರಾಗಿ ಕಟಾವು ಮಾಡಲು ಕನಿಷ್ಠ 10 ಕೂಲಿಗಳು ಬೆಳಗ್ಗೆಯಿಂದ ಸಂಜೆಯವರೆಗೂ ಕೆಲಸ ಮಾಡಬೇಕು. ರಾಗಿ ಗುಪ್ಪೆ ಕಟ್ಟಿ ನಂತರ ಬವಣೆ ಮಾಡಿ ಕಣ ಸಾರಿಸಿ ರೋಣುಗಲ್ಲು ಅಥವಾ ಟ್ರ್ಯಾಕ್ಟರ್‌ನಿಂದ ತುಳಿಸಿ, ಊಟ, ತಿಂಡಿ ಖರ್ಚು ಸಮಯ ಉಳಿತಾಯವಾಗುತ್ತದೆ ಎಂಬುದು ರೈತರ ಅಭಿಪ್ರಾಯವಾಗಿದೆ.

ಯಂತ್ರದಿಂದ ಸ್ವಲ್ಪ ಮಟ್ಟಿನ ರಾಗಿ ನಷ್ಟವಾಗುತ್ತದೆ. ಅಕಾಲಿಕ ಮಳೆಯಿಂದ ರಾಗಿ ಉಳಿಸಿಕೊಳ್ಳುವುದು ದೊಡ್ಡ ಕೆಲಸವಾಗಿದೆ. ಕೂಲಿಗಳಿಂದ ಮಾಡಿಸುವ ಕೆಲಸಕ್ಕೆ ಹೋಲಿಸಿದರೆ ಯಂತ್ರ ಬಳಕೆ ಅನುಕೂಲಕರ.
-ಶಂಕರಪ್ಪ, ರೈತ

ಯಂತ್ರಗಳ ಜೊತೆ ಹೊಂದಿಕೊಳ್ಳುವುದು ಅನಿವಾರ್ಯ. ರೈತರಿಗೆ ಕಡಿಮೆ ಖರ್ಚಿನಲ್ಲಿ ಲಾಭ ಸಿಗಬೇಕು. ಸರ್ಕಾರ ರಾಗಿಗೆ ಬೆಂಬಲ ಬೆಲೆ ನಿಗದಿಪಡಿಸಲು ಕ್ರಮ ಕೈಗೊಳ್ಳಬೇಕು.
-ಪವನ್‌, ರೈತ

* ಚೇತನ್‌

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.