ಜಿಲ್ಲೆಯಲ್ಲಿ ಕೋಟಿ ಸಸಿ ನೆಡುವ ಗುರಿ
ಪ್ರತಿ ತಾಲೂಕಿನಲ್ಲಿ 10 ಲಕ್ಷ ಸಸಿ ನೆಡಲು ಮುಂದಾಗಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚನೆ
Team Udayavani, May 15, 2019, 5:36 PM IST
ತುಮಕೂರು ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಕೋಟಿ ನಾಟಿ ಹಸಿರೀಕರಣದ ಜನಾಂದೋಲನದ ಕಾರ್ಯಾಗಾರವನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಉದ್ಘಾಟಿಸಿದರು.
ತುಮಕೂರು: ಮುಂಬರುವ ಜೂನ್ 5ರ ವಿಶ್ವ ಪರಿಸರ ದಿನದಂದು ಜಿಲ್ಲೆಯಲ್ಲಿ 1 ಕೋಟಿ ಸಸಿಗಳನ್ನು ನೆಡುವ ಮೂಲಕ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸ್ಥಾಪಿಸುವ ಸಂಬಂಧ ಸಾರ್ವಜನಿಕರೊಂದಿಗೆ ಚರ್ಚಿಸಿ ಕಾರ್ಯಕ್ರಮವನ್ನು ರೂಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಬೆಂಗಳೂರು ರೋಟರಿ ಕ್ಲಬ್ ಜಂಟಿಯಾಗಿ ಆಯೋಜಿಸಿದ್ದ ಕೋಟಿ ನಾಟಿ ಹಸಿರೀಕರಣದ ಜನಾಂದೋಲನದ ಕಾರ್ಯಾಗಾರವನ್ನು ಉದ್ಘಾಟಿಸಿದ ಅವರು ಮಾತನಾಡಿ, ಒಂದು ಕೋಟಿ ಸಸಿಗಳನ್ನು ತುಮಕೂರು ಜಿಲ್ಲೆಯಲ್ಲಿ ನೆಡಬೇಕು. ರೋಟರಿ ಸಂಸ್ಥೆ ತುಮಕೂರು ತಾಲೂಕಿನಲ್ಲಿ 1 ಕೋಟಿ ಸಸಿಗಳನ್ನು ನೆಡಲು ಕಾರ್ಯಕ್ರಮ ರೂಪಿಸಿದೆ. ಪ್ರತಿ ತಾಲೂಕಿನಲ್ಲಿ 10 ಲಕ್ಷ ಸಸಿಗಳಂತೆ ಜಿಲ್ಲೆಯಲ್ಲಿ 1 ಕೋಟಿ ಸಸಿ ನೆಡಲು ಮುಂದಾಗಬೇಕು ಎಂದರು.
ಸಸಿ ನೆಡಲು ಎಲ್ಲಾ ರೀತಿಯ ನೆರವು: ಸಸಿ ನೆಡಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು. ಮುಂಬರುವ ಜೂನ್ 5ರಂದು ಜಿಲ್ಲೆಯಲ್ಲಿ 1 ಕೋಟಿ ಸಸಿಗಳನ್ನು ನೆಟ್ಟು ಗಿನ್ನಿಸ್ ಬುಕ್ ಆಫ್ ರೆಕಾರ್ಡ್ನ್ನು ಸ್ಥಾಪನೆ ಮಾಡಬೇಕು. ಇದಕ್ಕಾಗಿ ಸಾರ್ವಜನಿಕರ ಸಹಕಾರವು ಅತಿ ಮುಖ್ಯ, ಜನರೊಂದಿಗೂ ಚರ್ಚಿಸಿ ಕಾರ್ಯಕ್ರಮ ರೂಪಿಸಿ ಎಂದು ಸಲಹೆ ನೀಡಿದರು.
ತುಮಕೂರು ಜಿಲ್ಲೆ ಕಲ್ಪತರು ನಾಡು ಎಂದು ಪ್ರಸಿದ್ಧಿಯಾಗಿದೆ. ಆದರೆ, ಜಿಲ್ಲೆಯು ಬರಪೀಡಿತ ನಾಡಾಗಿದೆ. ಇದನ್ನು ಹಸಿರು ತುಮಕೂರು ಮಾಡಲು ಎಲ್ಲರೂ ಕೈಜೋಡಿಸಬೇಕು. ನರೇಗಾ ಮತ್ತು ಜಲಾಮೃತ ಯೋಜನೆಯಡಿ ಗಿಡಗಳನ್ನು ನೆಡಲು ಅವಕಾಶವಿದೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಸ್ವಸಹಾಯ ಸಂಸ್ಥೆಗಳು, ಸಂಘ- ಸಂಸ್ಥೆಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ ಸಮುದಾಯದ ಎಲ್ಲಾ ಜನರ ಸಹಕಾರ ಅತಿ ಮುಖ್ಯ ಎಂದು ತಿಳಿಸಿದರು.
ತಾಲೂಕುಗಳಲ್ಲಿ ಮರಗಳ ಸಂಖ್ಯೆ ಕಡಿಮೆ: ನಿವೃತ್ತ ಐಎಎಸ್ ಅಧಿಕಾರಿ ಹಾಗೂ ರೋಟರಿ ಕೋಟಿ-ನಾಟಿ ಯೋಜನೆಯ ಅಧ್ಯಕ್ಷ ಅಮರ ನಾರಾಯಣ ಮಾತನಾಡಿ, ಪೊಲಿಯೋವನ್ನು ಮುಕ್ತಗೊಳಿಸಿದಂತೆ ಭೂ ಮಾತೆಗೆ ಅಂಟಿಕೊಂಡಿರುವ ಮಾಲಿನ್ಯವನ್ನು ಗಿಡ-ಸಸಿಗಳನ್ನು ನೆಡುವ ಮೂಲಕ ಹೋಗಲಾಡಿಸಬೇಕು. ತುಮಕೂರು ಜಿಲ್ಲೆಯಲ್ಲಿ ಶೇ.6.58ರಷ್ಟು ಅರಣ್ಯ ಪ್ರದೇಶ ಮಾತ್ರವಿದೆ. ತುಮಕೂರು ಜಿಲ್ಲೆಯ 10 ತಾಲೂಕುಗಳು ವೈವಿಧ್ಯಮಯದಿಂದ ಕೂಡಿವೆ. ಒಂದೆಡೆ ಶಿರಾ, ಮಧುಗಿರಿ, ಪಾವಗಡ, ಚಿಕ್ಕನಾಯಕನಹಳ್ಳಿ ತಾಲೂಕುಗಳಲ್ಲಿ ಮರಗಳ ಸಂಖ್ಯೆ ಕಡಿಮೆ ಇದೆ ಎಂದರು.
ಪ್ರದೇಶ ಹಸಿರುಮಯವನ್ನಾಗಿಸಿ: ಜಿಲ್ಲೆಯು 10,64,755 ಹೆಕ್ಟೇರ್ ಭೌಗೋಳಿಕ ಪ್ರದೇಶವನ್ನು ಹೊಂದಿದು, 67,539 ಹೆಕ್ಟೇರ್ ಬಂಜರುಭೂಮಿ ಹಾಗೂ 2,35,101 ಹೆಕ್ಟೇರ್ ಬೀಳುಭೂಮಿಯನ್ನು ಹೊಂದಿದೆ ಎಂದು ಹೇಳಿದರು.
ಈ ಪ್ರದೇಶಗಳಲ್ಲಿ ಸಸಿಗಳನ್ನು ನೆಟ್ಟು ಹಸಿರುಮಯವನ್ನಾಗಿ ಮಾಡಬೇಕು. ಪ್ರತಿ ಮನುಷ್ಯ 28 ಮರಗಳನ್ನು ಹಾಕಬೇಕು. ಜಿಲ್ಲೆಯು 26ಲಕ್ಷ ಜನಸಂಖ್ಯೆಯನ್ನು ಹೊಂದಿದ್ದು, ಪ್ರತಿಯೊಬ್ಬರು 28 ಸಸಿಗಳನ್ನು ಹಾಕಿದರೆ ಒಟ್ಟು 7.50 ಕೋಟಿ ಸಸಿಗಳನ್ನು ನೆಡಬಹುದಾಗಿದೆ ಎಂದು ತಿಳಿಸಿದರು.
ರಸ್ತೆ, ಕೆರೆದಂಡೆ, ವಸತಿ ಪ್ರದೇಶಗಳಲ್ಲಿ ಸಸಿ ನೆಡಲು ಅವಕಾಶವಿದ್ದು, ಈ ಬಗ್ಗೆ ಪಿಡಿಒಗಳು ಕ್ರಮ ಕೈಗೊಳ್ಳಬೇಕು. ಪ್ರಾರಂಭದಲ್ಲಿ ತುಮಕೂರು ತಾಲೂಕಿನಲ್ಲಿ ಸಸಿ ನೆಡುವ ಕಾರ್ಯಕ್ರಮವಿದೆ. 28.34 ಲಕ್ಷ ಗುಂಡಿಗಳನ್ನು ತೆಗೆಸಿ ಸಿದ್ಧವಾಗಿ ಇಟ್ಟುಕೊಳ್ಳುವಂತೆ ಪಿಡಿಒಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಶುಭಾಕಲ್ಯಾಣ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ರೋಟರಿ ಕೋಟಿ ನಾಟಿ ಯೋಜನೆಯ ಸಹ ಅಧ್ಯಕ್ಷ ನೀಲ್ ಮೈಕಲ್ ಜೋಸೆಫ್, ಕೆ.ಪಿ. ನಾಗೇಶ್, ಆಶಾ ಪ್ರಸನ್ನಕುಮಾರ್, ರೋಟರಿ ರವಿಶಂಕರ್ ಸೇರಿದಂತೆ ತಾಲೂಕು ಪಂಚಾಯ್ತಿ ಇಒ, ಪಿಡಿಒಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್