ತುಮಕೂರಲ್ಲಿ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆ


Team Udayavani, May 26, 2020, 7:07 AM IST

tmk-sankhye

ತುಮಕೂರು: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಿಗೆ ಆಗುತ್ತಲೇ ಇದ್ದು ಸೋಮವಾರವೂ ಒಬ್ಬರಲ್ಲಿ ಕೋವಿಡ್‌ 19 ಸೋಂಕು ಕಾಣಿಸಿ ಕೊಂಡಿದ್ದು, ಈಗ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.  ಇದುವರೆಗೂ ನಗರ ಪ್ರದೇಶದಲ್ಲಿ ಮಾತ್ರ ಕಾಣುತ್ತಿದ್ದ ಕೋವಿಡ್‌-19 ಈಗ ಹಳ್ಳಿಗಳತ್ತ ಮುಖ ಮಾಡಿದೆ, ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ತನ್ನ ಕಬಂದ ಬಾಹು ಹೆಚ್ಚಿಸಿ ಕೊಳ್ಳುತ್ತಿದೆ. ಹೆಬ್ಬೂರು ಹೋಬಳಿಯಲ್ಲಿ  ಕಾಣಿಸಿ ಕೊಂಡಿರುವ ಈ ಮಹಾಮಾರಿ ಈಗ ಬೆಳ್ಳಾವಿ ಹೋಬಳಿಯಲ್ಲಿ ಕಾಣಿಸಿ ಕೊಂಡಿದೆ. ಈ ವರೆಗೆ ಸೋಂಕಿನಿಂದ ಮುಕ್ತವಾಗಿದ್ದ ಗ್ರಾಮಾಂತರಕ್ಕೂ ಕೋವಿಡ್‌ 19 ಲಗ್ಗೆ ಇಟ್ಟಿದೆ.

ಚಾಲಕನಿಗೆ ಕೋವಿಡ್‌ 19: ತುಮಕೂರು ತಾಲೂಕಿನ ಬೆಳ್ಳಾವಿ ಹೋಬಳಿ ಮಾವಿನ ಕುಂಟೆ ಗ್ರಾಮದ 35 ವರ್ಷದ ಕೆಎಸ್ಸಾರ್ಟಿಸಿ ಚಾಲಕನಿಗೆ ಕೋವಿಡ್‌ 19 ಪಾಸಿಟಿವ್‌  ಇರುವುದು ದೃಢಪಟ್ಟಿದೆ, ಇವರನ್ನು ಪಿ- 2135 ಎಂದು ಗುರುತಿಸಲಾದೆ. ಆರೋಗ್ಯಾಧಿಕಾರಿ ಮಾಹಿತಿ: ಸೋಂಕಿತ ವ್ಯಕ್ತಿ ಕೆ.ಎಸ್‌.ಆರ್‌.ಟಿ.ಸಿ ಮಾಗಡಿ ಡಿಪೋ ನಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸು ತ್ತಿದ್ದರು, ಕರ್ತವ್ಯಕ್ಕೆ ಹಾಜರಾಗುವ ವೇಳೆ ಚಾಲಕನ ಗಂಟಲು ದ್ರವ ಪರೀಕ್ಷೆ ನಡೆಸಲಾ ಗಿತ್ತು ಅದರ ವರದಿ ಈಗ ಬಂದಿದ್ದು ಚಾಲಕ ನಲ್ಲಿ ಕೋವಿಡ್‌ 19 ಸೋಂಕು ಇರುವುದು ದೃಢ ಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.

25 ಮಂದಿ ಕ್ವಾರಂಟೈನ್‌: ಸೋಂಕು ತಗುಲಿ ರುವ ಕೆಎಸ್‌ಆರ್‌ಟಿಸಿ ಚಾಲಕನ ಬಗ್ಗೆ ಮಾಹಿತಿ ಪಡೆದು, ಆತನ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 25 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದ್ದು ಗ್ರಮವನ್ನು ಸೀಲ್‌ ಡೌನ್‌  ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವೃದ್ಧೆ ತುಮಕೂರು ಕೋವಿಡ್‌ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಅವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮೃತರ  ಸಂಖ್ಯೆ ಮೂರಾದರೂ ಬೇರೆ ಮೃತರು ಬೇರೆ ಜಿಲ್ಲೆಯವರಾಗಿರುವುದರಿಂದ ಜಿಲ್ಲೆಯಲ್ಲಿ ಇಬ್ಬರು ಮೃತರು ಎಂದು ಡಿಎಚ್‌ಒ ಸ್ಪಷ್ಟಪಡಿಸಿದರು.

ಇನ್ನೂ 1,433 ಮಂದಿ ವರದಿ ಬರಬೇಕು: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲೇ ಇದೆ. ಈವರೆಗೂ ನಗರ ಪ್ರದೇಶದಲ್ಲಿ ಇದ್ದ ಈ ಸೋಂಕು ಈಗ ಗ್ರಾಮೀಣ ಪ್ರದೇಶ ಹಳ್ಳಿಗಳಲ್ಲಿ ಕಾಣಿಸಿ  ಕೊಳ್ಳುತ್ತಿದ್ದು, ಇದರಿಂದ ಜನರಲ್ಲಿ ಕೋವಿಡ್‌ 19 ಬಗ್ಗೆ ಆತಂಕ ಹೆಚ್ಚಾಗಲು ಕಾರಣವಾಗಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಸಂಚಾರ ಮಾಡುತ್ತಾರೆ. ಜಿಲ್ಲೆಯಲ್ಲಿ ಕೋವಿಡ್‌ 19 ಮಾದರಿ ಪರೀಕ್ಷೆಗೆ ಲ್ಯಾಬ್‌ ಗೆ ಕಳುಹಿಸಿರುವ  1,433 ವರದಿ ಬಾಕಿ ಇದೆ.

ತುಮಕೂರು ತಾಲೂಕಿನ ಮಾವಿನ ಕುಂಟೆ ಗ್ರಾಮದ ಕೆ.ಎಸ್‌.ಆರ್‌.ಟಿ.ಸಿ. ಚಾಲಕನು ಕೆಲಸಕ್ಕೆ ಹೋಗುವ ವೇಳೆಯಲ್ಲಿ ಗಂಟಲು ಸ್ರಾವ ಪರೀಕ್ಷಿಸ ಲಾಗಿತ್ತು, ಅದರ ವರದಿ ಬಂದಿದ್ದು ವರದಿಯಲ್ಲಿ ಪಾಸಿಟಿವ್‌ ಬಂದಿದೆ. ಅವರಿಗೆ ಜಿಲ್ಲಾ  ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು 1686 ಸೋಂಕಿತ ವೃದ್ಧೆ ಚಿಕಿತ್ಸೆ ಫ‌ಲಕಾರಿಯಾಗದೇ ಕೋವಿಡ್‌ -19 ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದು ಅವರು ನೆಲಮಂಗಲದವರಾಗಿದ್ದು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ  ದಾಖಲಾಗಿದ್ದರು. ಅವರ ಗಂಟಲು ದ್ರವ ಪರೀಕ್ಷಿಸಲಾಗಿ ಅವರಲ್ಲಿ ಕೋವಿಡ್‌ 19 ಸೋಂಕು ಇರುವುದು ಬೆಳಕಿಗೆ ಬಂದಿತ್ತು. ಅವರಿಗೆ ಚಿಕಿತ್ಸೆ ನೀಡಲಾಗಿತ್ತಾದರೂ ಅವರು ಮೃತಪಟ್ಟಿದ್ದಾರೆ.
-ಡಾ.ನಾಗೇಂದ್ರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

12-pavagada

Pavagada: ರಸ್ತೆ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

1-qweqewq

Koratagere;ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

9-pavagada

Pavagada: ಪತ್ನಿಯನ್ನು ಹತ್ಯೆ ಮಾಡಿ ಪತಿ ಪರಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.