ಕೋವಿಡ್‌: ಶಬರಿಮಲೆ ಯಾತ್ರಿಕರ ಸಂಖ್ಯೆ ಇಳಿಮುಖ


Team Udayavani, Jan 14, 2022, 10:27 PM IST

ರತಯುಇಯತಗ್ದಸ

ಹುಳಿಯಾರು: ಕೋವಿಡ್‌ ಆತಂಕದ ಹಿನ್ನೆಲೆಯಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಸಹ ಶಬರಿಮಲೆ ಯಾತ್ರಿಕರ ಸಂಖ್ಯೆ ಕುಸಿದಿದೆ. ಇದರಿಂದ ಟ್ಯಾಕ್ಸಿ, ಟಿಟಿ ವಾಹನಗಳ ಚಾಲಕರು, ಮಾಲೀಕರಿಗೆ ನಷ್ಟ ಉಂಟಾಗಿದೆ. ಹೌದು, ಪ್ರತಿ ವರ್ಷ ತುಮಕೂರು ಜಿಲ್ಲೆಯಿಂದ ಸಾವಿರಾರೂ ಮಂದಿ ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದರು.

ಹೀಗಾಗಿ ಡಿಸೆಂಬರ್‌ ಮತ್ತು ಜನವರಿ ಮಾಹೆಯಲ್ಲಿ ಟ್ಯಾಕ್ಸಿಗಳಿಗೆ ಬಿಡುವಿಲ್ಲದ ಬಾಡಿಗೆ ಸಿಗುತ್ತಿತ್ತು. ಟ್ಯಾಕ್ಸಿಗಳೆಲ್ಲವೂ ಬುಕ್‌ ಆಗಿ ಬೇರೆ ಸ್ಥಳಗಳಿಂದ ವಾಹನಗಳನ್ನು ತರಿಸುತ್ತಿದ್ದ ನಿದರ್ಶನಗಳೂ ಇದ್ದವು. ಆದರೆ, ಮೊದಲ ಮತ್ತು ಎರಡನೇ ಅಲೆ ವೇಳೆ ಎರಡು ಬಾರಿ ಸರ್ಕಾರ ಲಾಕ್‌ಡೌನ್‌ ಘೋಷಣೆ ಮಾಡಿತ್ತು. ಆ ಬಳಿಕ ಕುಸಿದ ಪ್ರವಾಸೋದ್ಯಮ ಇನ್ನೂ ಚೇತರಿಕೆ ಕಂಡಿಲ್ಲ. ಪ್ರವಾಸೋದ್ಯಮ ನಂಬಿದವರಿಗೆ ಆತಂಕ: ಶೇ.90ರಷ್ಟು ಲಸಿಕೆ ಗುರಿ ಮುಟ್ಟಿರುವುದರಿಂದ ಈ ವರ್ಷ ಕೋವಿಡ್‌ ಕಾಟ ಕಡಿಮೆಯಾಗಿ ಪ್ರವಾಸೋದ್ಯಮ ಚೇತರಿಕೆ ಕಾಣುತ್ತದೆಂದು ಊಹಿಸಲಾಗಿತ್ತು. ಅಲ್ಲದೆ, ಕೋವಿಡ್‌ ನಿಯಮ ಸಡಿಲಿಸಿರುವುದರಿಂದ ಈ ವರ್ಷ ಗತಕಾಲದ ವೈಭವ ಮರಳಬಹುದೆಂದು ಟ್ಯಾಕ್ಸಿ ಮಾಲೀಕರು, ಚಾಲಕರು ನಿರೀಕ್ಷಿಸಿದ್ದರು.

ಆದರೆ, ಸರ್ಕಾರ ರಾತ್ರಿ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಜಾರಿ ಮಾಡಿರುವುದರಿಂದ ಮತ್ತೆ ಪ್ರವಾಸೋದ್ಯಮಕ್ಕೆ ಗ್ರಹ ಹಿಡಿದಿದೆ. ಅಲ್ಲದೆ, ಶಬರಿಮಲೆ ಯಾತ್ರೆಗೂ ಸಹ ಭಕ್ತರು ಮುಂದಾಗ ದಿರುವುದು ಪ್ರವಾಸೋದ್ಯಮವನ್ನೇ ನಂಬಿದವರಲ್ಲಿ ಆತಂಕ ಸೃಷ್ಟಿಸಿದೆ. ವಾಹನ ಚಾಲಕರು, ಮಾಲೀಕರಿಗೆ ಆರ್ಥಿಕ ನಷ್ಟ: ಶಬರಿಮಲೆ ಯಾತ್ರೆ ನೆಪದಲ್ಲಿ ತಮಿಳುನಾಡು ತೀರ್ಥ ಕ್ಷೇತ್ರಗಳ ಯಾತ್ರೆಯ ಜೊತೆಗೆ ರಾಜ್ಯದ ಪ್ರಸಿದ್ಧ ದೇವಾಲಯಗಳಿಗೂ ಭಕ್ತರು ಪ್ರವಾಸ ಮಾಡುವುದರಿಂದ ಹತ್ತದಿನೈದು ದಿನಗಳ ವರೆವಿಗೂ ವಾಹನಗಳು ಬುಕ್‌ ಆಗುತ್ತಿದ್ದವು. ಅಲ್ಲದೆ, ಪ್ರವಾಸಿಗರ ಆಯ್ಕೆಗೆ ತಕ್ಕಂತೆ ಟೂರಿಸ್ಟ್‌ ವಾಹನಗಳಾದ ಸಿಫ್ಟ್‌, ಟೆಂಪೋ ಟ್ರಾÂವಲರ್‌, ಇನೋವಾ, ಎರಿಟಿಗ, ವ್ಯಾನ್‌ಗಳು ಇಲ್ಲಿ ಸಿಗುತ್ತಿದ್ದರಿಂದ ಸುತ್ತಮುತ್ತಲ 50 ಕಿ.ಮಿ.ವ್ಯಾಪ್ತಿಯ ಬಾಡಿಗೆ ಸಿಗುತ್ತಿತ್ತು.

ಪರಿಣಾಮ ಮಕರ ಸಂಕ್ರಾಂತಿ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟ್ಯಾಕ್ಸಿ, ಟಿಟಿ ವಾಹನಗಳು ಬುಕ್ಕಿಂಗ್‌ ಆಗುತ್ತಿದ್ದವು. ಅದರಲ್ಲೂ ಹೊಸ ವಾಹನ, ಉತ್ತಮ ಚಾಲಕರನ್ನು ತಿಂಗಳ ಮೊದಲೇ ಬುಕ್ಕಿಂಗ್‌ ಮಾಡುತ್ತಿದ್ದರು. ಆದರೆ, ಕರ್ಫ್ಯೂಯಿಂದಾಗಿ ಈ ಬಾರಿ ಮಾಸಿಕ ಪೂಜೆ, ಪಡಿ ಪೂಜೆ ಹಾಗೂ ಜ್ಯೋತಿ ಪೂಜೆಗೆ ಕೆಲವೇ ಮಾತ್ರ ತೆರಳಿದ್ದಾರೆ. ಇದರಿಂದ ಶಬರಿಮಲೆ ಸೀಜನ್‌ ನೆಚ್ಚಿಕೊಂಡಿದ್ದ ವಾಹನ ಚಾಲಕರು ಮತ್ತು ಮಾಲೀಕರಿಗೆ ಭಾರಿ ಆರ್ಥಿಕ ನಷ್ಟವಾಗಿದೆ.

ವಾಹನ ನಿರ್ವಹಣೆಗೆ ಪರದಾಟ: ನಿತ್ಯ ಕನಿಷ್ಠ 400 ಬಾಟಾ ನೆಚ್ಚಿಕೊಂಡು ಜೀವನ ನಡೆಸುತ್ತಿದ್ದ ಟೂರಿಸ್ಟ್‌ ಡೈವರ್‌ಗಳು ಕೋವಿಡ್‌ನಿಂದ ಕೆಲಸ ಇಲ್ಲದೆ ಬರಿಗೈಯಲ್ಲಿ ಮನೆಗೆ ತೆರಳುತ್ತಿದ್ದಾರೆ. ಖಾಸಗಿ ಫೈನಾನ್ಸ್‌ನಲ್ಲಿ ಸಾಲ ಮಾಡಿ, ವಾಹನ ತಂದವರು ಇದರ ಇಎಂಐ ಕಟ್ಟಲು ಪರದಾಡುತ್ತಿದ್ದಾರೆ. ಜೊತೆಗೆ ಟ್ಯಾಕ್ಸ್‌, ವಿಮೆ ನವೀಕರಣ, ವಾಹನ ದುರಸ್ತಿ ಸೇರಿದಂತೆ ಹಲವು ಬಗೆಯ ಖರ್ಚುಗಳನ್ನು ನಿರ್ವಹಿಸಲು ಪರದಾಡುತ್ತಿದ್ದಾರೆ. ಮುಂದೇನು ಎಂಬ ಆತಂಕದಲ್ಲಿ ಬಹಳಷ್ಟು ಮಂದಿ ಇದ್ದಾರೆ. ಪರಿಸ್ಥಿತಿ ಸುಧಾರಿಸದೆ ಹೋದರೆ ನೂರಾರು ಮಂದಿಯ ಬದುಕು ದುರ್ಬರವಾಗಲಿದೆ.

 

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.