ಕುಡಿವ ನೀರಿಲ್ಲದೆ ಪರಿತಪಿಸುವ ತಿಮ್ಲಾಪುರ ಕೋಡಿ ಜನ


Team Udayavani, Nov 15, 2019, 5:06 PM IST

tk-tdy-1

ಹುಳಿಯಾರು: ನಮ್ಮ ಬೀದಿಗೆ ನೀರು ಸರಬರಾಜು ಮಾಡುವ ಕೊಳವೆಬಾವಿ ಮೋಟಾರ್‌ ಕೆಟ್ಟು 15 ದಿನವಾಗಿದೆ, ಈವರೆಗೂ ರಿಪೇರಿ ಮಾಡಿಸಿಲ್ಲ, 2-3 ಬಾರಿ ಕೆಟ್ಟು ಹೋಗಿದ್ದ ಮೋಟಾರ್‌ ಅನ್ನು ರಿಪೇರಿ ಮಾಡಿಸಿದ್ದೇವೆ. ಆದರೆ, ಈಗ, ಪಪಂಗೆ ಮನವಿ ಮಾಡಿದರೂ ರಿಪೇರಿ ಮಾಡಿಸುತ್ತಿಲ್ಲ, ಅಕ್ಕಪಕ್ಕದ ಜಮೀನುಗಳಿಗೆ ಹೋಗಿ ಕಾಡಿಬೇಡಿ ನೀರು ತರಬೇಕಿದೆ.

ಇದು ಹುಳಿಯಾರು ಪಪಂ ವ್ಯಾಪ್ತಿಯ ತಿಮ್ಲಾಪುರ ಕೋಡಿ ನಿವಾಸಿಗಳ ಅಳಲಾಗಿದೆ. ತಿಮ್ಲಾಪುರ ಕೋಡಿಯಲ್ಲಿನ ಕೈ ಪಂಪು ಹುಳಿಯಾರು ಪಟ್ಟಣಕ್ಕೆ ಹತ್ತಾರು ವರ್ಷಗಳ ಕಾಲ ಕುಡಿವ ನೀರು ಸರಬರಾಜು ಮಾಡಿತ್ತು. ಸರಿಯಾದ ಮಳೆಯಿಲ್ಲದೆ ಕೊಳವೆ ಬಾವಿಯ ಅಂತರ್ಜಲ ಕಡಿಮೆಯಾಯಿತು. ಹಾಗಾಗಿ 2-3 ವರ್ಷಗಳ ಹಿಂದೆ ಕೈ ಪಂಪು ತೆಗೆದು ಮೋಟರ್‌ ಬಿಟ್ಟು ಇರುವ ನೀರನ್ನು ಸಿಸ್ಟನ್‌ ಮೂಲಕ ಕೋಡಿ ನಿವಾಸಿಗಳಿಗೆ ನೀಡಲಾಗುತ್ತಿತ್ತು.

3-4 ಕಿ.ಮೀ.ದೂರ ಹೋಗಬೇಕಿದೆ: ಮುಂಜಾನೆ ತ್ರಿಫೇಸ್‌ ವಿದ್ಯುತ್‌ ಕೊಟ್ಟಾಗ ಅಕ್ಕಪಕ್ಕದ ಜಮೀನಿಗೆ ಹೋಗಿ ಅಲ್ಲಿನ ಮಾಲಿಕರನ್ನು ಕಾಡಿಬೇಡಿ ನೀರು ತರುವ ಅನಿವಾರ್ಯತೆಯಿದೆ. ಅವರೂ ಬಿಡದಿದ್ದರೆ 3-4 ಕಿ.ಮೀ.ದೂರಕ್ಕೆ ಹೋಗಿ ನೀರನ್ನು ತರಬೇಕಿದೆ. ಹಾಗಾಗಿ ದಿನಬೆಳಗಾದರೆ ಇಲ್ಲಿನ ಮಹಿಳೆಯರಿಗೆ ನೀರು ತರುವುದೇ ಗೋಳಾಗಿ ಪರಿಣಮಿಸಿದೆ. ಅಲ್ಲದೆ ಈ ಸ್ಥಳ ಪಟ್ಟಣ ಪ್ರದೇಶದಿಂದ 1 ಕಿ.ಮೀ. ದೂರವಿದ್ದು ಕೆರೆಯ ಕೋಡಿ ಬಳಿಯಿದೆ. ಇಲ್ಲಿನ ನಿವಾಸಿಗಳು ಆಸ್ಪತ್ರೆ, ಸಂತೆ, ಅಂಗಡಿ, ಶಾಲೆಗಳಿಗೆ ಬರಲು 1 ಕಿ.ಮೀ ನಡೆಯುವುದು ಅನಿವಾರ್ಯ. ವಿಧಿಯಿಲ್ಲದೆ ನಡೆದುಕೊಂಡೆ ಓಡಾಡುವ ಇಲ್ಲಿನ ಜನರಿಗೆ ಈ ರಸ್ತೆಯ ಇಕ್ಕೆಲಗಳಲ್ಲಿ ಹೆಮ್ಮರವಾಗಿ ಬೆಳೆದಿರುವ ಜಾಲಿ ಗಿಡಗಳು ತೊಡಕಾಗಿದ್ದು ತೆರವು ಮಾಡಿಸುವಂತೆ ಪಪಂ ಅಧಿಕಾರಿಗಳಿಗೆ ಹೇಳಿದರೂ ತೆರವು ಮಾಡಿಸಿಲ್ಲ

ಸ್ಪಂದಿಸದ ಅಧಿಕಾರಿಗಳು: ಇನ್ನು ಈ ರಸ್ತೆಯ ಕಂಬಳಿಗೆ ಬೀದಿ ದೀಪಗಳನ್ನು ಕಟ್ಟಿ ವರ್ಷಗಳೇ ಕಳೆದಿದೆ. ಹಾಗಾಗಿ ರಾತ್ರಿ ಸಂದರ್ಭದಲ್ಲಿ ಅಂಗೈಯಲ್ಲಿ ಜೀವ ಹಿಡಿದು ಓಡಾಡುತ್ತಿದ್ದಾರೆ. ಅಲ್ಲದೆ ಮನೆ ಗಳಿರುವ ಸ್ಥಳದಲ್ಲೂ ಬೀದಿ ದೀಪ ಕೆಟ್ಟಿದ್ದು ಬಡಾ ವಣೆಯ ಜನ ಕತ್ತಲೆಯಲ್ಲಿ ದಿನ ದೂಡುತ್ತಿದ್ದಾರೆ. ಪ್ರತಿ ನಿತ್ಯ ನೀರು, ಬೀದಿ ದೀಪ, ಜಾಲಿ ತೆರವಿಗೆ ಕೇಳಿಕೇಳಿ ಸಾಕಾಗಿ ಹೋಗಿದ್ದಾರೆ. ಆದರೂ ಅಧಿಕಾರಿಗಳು ಮಾತ್ರ ಸ್ಪಂದಿಸದೆ ಮೌನಕ್ಕೆ ಶರಣಾಗಿದ್ದಾರೆ.

15 ದಿನಗಳ ಹಿಂದೆಯೇ ಅಧಿಕಾರಿಗಳಿಗೆ ಮನವಿ:  2-3 ವರ್ಷ ಇಲ್ಲಿನ ನಿವಾಸಿಗಳು ನೀರಿನ ಸಮಸ್ಯೆ ಯಿಲ್ಲದೆ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು. ನಂತರ ಕೊಳವೆಬಾವಿಗೆ ಬಿಟ್ಟಿದ್ದ ಮೋಟರ್‌ ಕೆಡಲು ಆರಂಭವಾಯಿತು. ಗ್ರಾಪಂಗೆ ಎಷ್ಟು ಹೇಳಿದರೂ ಕೇಳದಿದ್ದಾಗ ಸ್ಥಳೀಯರೇ ಮನೆಗಿಷ್ಟು ಎಂದು ಹಣ ಹಾಕಿ ರಿಪೇರಿ ಮಾಡಿಸುತ್ತಿದ್ದರು. ಹೀಗೆ 3-4 ಬಾರಿ ರಿಪೇರಿ ಮಾಡಿಸಿದ್ದರು. ಆದರೆ ಈಗ ಪುನಃ ಮೋಟಾರ್‌ ಕೆಟ್ಟಿದೆ. ಹೀಗೆ ಪದೇ ಪದೆ ರಿಪೇರಿ ಮಾಡಿಸಿ ಸೋತಿರುವ ಸ್ಥಳೀಯರು ಪಟ್ಟಣ ಪಂಚಾಯ್ತಿಯವರೇ ಒಳ್ಳೆಯ ಕಡೆ ರಿಪೇರಿ ಮಾಡಿಸಲಿ ಅಥವಾ ಮೋಟಾರ್‌ ಬದ ಲಾಯಿಸಲೆಂದು ಮನವಿ ಸಲ್ಲಿಸಿದ್ದಾರೆ. ಮನವಿ ಸಲ್ಲಿಸಿ 15 ದಿನಗಳಾದರೂ ಯಾರೊಬ್ಬರೂ ಇತ್ತ ಗಮನ ಹರಿಸದೆ ನಿರ್ಲಕ್ಷಿಸಿದ್ದಾರೆ. ಹೀಗಾಗಿ ನೀರಿಗೆ ಹಾಹಾಕಾರ ಆರಂಭವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇಲ್ಲಿನ ಕೊಳವೆ ಬಾವಿ ಮೋಟರ್‌ ಅನ್ನು 2-3 ಬಾರಿ ಕೆಟ್ಟಾಗ ಸ್ಥಳೀಯರಿಂದ ಹಣ ಸಂಗ್ರಹಿಸಿ ರಿಪೇರಿ ಮಾಡಿಸಿದ್ದೇವೆ. ಒಮ್ಮೆ ಸ್ಟಾರ್ಟರ್‌ ಸಹ ಸುಟ್ಟು ಹೋಗಿತ್ತು. ಇಲ್ಲಿನ ಜನರೇ ಹಣ ಸಂಗ್ರಹಿಸಿ ತಂದಿದ್ದಾರೆ. ಹೀಗೆ ಪದೇ ಪದೇ ನಾವೇ ಮಾಡಿಸುತ್ತಿದ್ದು ಈ ಬಾರಿಯಾದರೂ ಪಪಂ ಮಾಡಿಸಲಿ ಎಂದರೆ ಇತ್ತ ತಿರುಗಿಯೂ ನೋಡದೆ ನಿರ್ಲಕ್ಷ್ಯ ವಹಿಸಿದ್ದಾರೆ. –ವರದಣ್ಣ, ತಿಮ್ಲಾಪುರ ಕೋಡಿ ನಿವಾಸಿ

 

-ಎಚ್‌.ಬಿ.ಕಿರಣ್‌ ಕುಮಾರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.