“ಪ್ರಜೆಗಳ ಹಕ್ಕನ್ನು ಕಸಿಯಲಾಗದು’


Team Udayavani, Jul 4, 2017, 10:34 AM IST

tumukuru-7.jpg

ತುಮಕೂರು: ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ರಾಷ್ಟ್ರಗಳಲ್ಲಿ ಪ್ರಜೆಗಳ  ಹಕ್ಕುಗಳನ್ನು ಸಂರಕ್ಷಿಸುವಲ್ಲಿ ನ್ಯಾಯಾಂಗ
ತನ್ನದೇ ಆದ ಮಹತ್ವ ಹೊಂದಿದ್ದು ಬಲಾಡ್ಯರಿಂದ ಅಶಕ್ತರ ಹಕ್ಕುಗಳನ್ನು ಸದಾ ಕಾಪಾಡುತ್ತಿದೆ ಎಂದು ರಾಜ್ಯ ಉತ್ಛ
ನ್ಯಾಯಾಲಯದ ನ್ಯಾಯಮೂರ್ತಿ ಜಯಂತ್‌ ಪಟೇಲ್‌ ತಿಳಿಸಿದರು.

ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ 3ನೇ ಹಂತದ ಜಿಲ್ಲಾ ನ್ಯಾಯಾಲಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು.
ಸಮಾಜದಲ್ಲಿ ಬಲಾಡ್ಯರಿಂದ, ಅಧಿಕಾರವಂತರಿಂದ ಪ್ರಜೆಗಳ ಹಕ್ಕನ್ನು ಕಸಿಯಲಾಗದು. ಎಲ್ಲಾ ಪ್ರಜೆಗಳ
ಹಕ್ಕುಗಳ ಸಂರಕ್ಷಕನಾಗಿ ನ್ಯಾಯಾಂಗ ಕಾರ್ಯನಿರ್ವಹಿಸುತ್ತಿದೆ. ಕಾನೂನು ಮೇಲುಗೈ ಪಡೆಯಬೇಕೇ ಹೊರತು,
ಶಕ್ತಿಯೂ ಅಲ್ಲ, ಅಧಿಕಾರವೂ ಅಲ್ಲ ಎಂದು ಹೇಳಿದರು.

ನ್ಯಾಯಾಂಗದಲ್ಲಿ ಕಾರ್ಯನಿರ್ವ ಹಿಸುವವರಿಗೆ 3 ಪ್ರಮುಖ ಲಕ್ಷಣಗಳು ಇರಬೇಕು. ಅದರಲ್ಲಿ ಮೊದಲನೆಯದು
ಸ್ಪಷ್ಟ ನೋಟ. ಕಾನೂನಿನ ಜಾನದೊಂದಿಗೆ ಸಾಮಾಜಿಕ ಹಿನ್ನೆಲೆಯ ಜಾನವೂ ಇರಬೇಕು. ಇಂತಹ ದೃಷ್ಟಿಕೋನ ಇದ್ದಾಗ ಉತ್ತಮ ಕಾರ್ಯ ಮತ್ತು ನಿರ್ಣಯ ಕೈಗೊಳ್ಳಲು ಸಾಧ್ಯವಾಗುತ್ತದೆ. ಎರಡನೆಯದು ಜಾಣತನ ಅಥವಾ ವಿವೇಕ. ವಿವೇಕದ ಜಾನವಿದ್ದರೆ ಯಾವುದೇ ಒಂದು ಪ್ರಕರಣ ಎದುರಾದಾಗ ಅದನ್ನು ಹೇಗೆ ನಿಭಾಯಿಸಬೇಕು
ಎಂಬ ಶಕ್ತಿ ಬರುತ್ತದೆ. ಮೂರನೆಯದು ಸಾಮರ್ಥ್ಯ ಅಥವಾ ಧೈರ್ಯ. ಕಾನೂನನ್ನು ಎತ್ತಿಹಿಡಿಯಬೇಕಾದ ಸಂದರ್ಭ ಬಂದಾಗ ಗೊಂದಲಕ್ಕೆ ಒಳಗಾಗುವ ಅವಕಾಶಗಳಿರುತ್ತವೆ. ಅಂತಹ ಸಂದರ್ಭದಲ್ಲಿ ಧೈರ್ಯ ಮತ್ತು ಸಾಮರ್ಥ್ಯವಿದ್ದರೆ ಎಂತಹುದೇ ಪ್ರಕರಣ ಬಂದರೂ ಅದನ್ನು ಆ ಸಾಮರ್ಥ್ಯದಿಂದ ನಿಭಾಯಿಸಬಹುದು ಎಂದು ಹೇಳಿದರು. 

ನ್ಯಾಯಾಂಗದಿಂದ ಜನತೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಜನತೆ ನಿರೀಕ್ಷೆಯನ್ನು ಹುಸಿ ಮಾಡಬಾರದು. ಸಂವಿಧಾನದತ್ತವಾಗಿ ಇರುವ ಅಧಿಕಾರ ಚಲಾಯಿಸಿ ಕಾನೂನಿನ ಪರಿಧಿಯೊಳಗೆ ಎಲ್ಲರೂ ಕೆಲಸ ಮಾಡಬೇಕು.
ತುಮಕೂರಿನಲ್ಲಿ ಇರುವ ನ್ಯಾಯಾಲಯ ಸಂಕೀರ್ಣ ಅತ್ಯಂತ ಉತ್ತಮ ಕಟ್ಟಡವಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಇಲ್ಲಿ ಉತ್ತಮ ಕಟ್ಟಡ ನಿರ್ಮಾಣವಾಗಿದೆ. ಇದು ವಕೀಲರಿಗೆ, ನ್ಯಾಯಾಧೀಶರಿಗೆ, ಕಕ್ಷಿದಾರರಿಗೆ ಎಲ್ಲರಿಗೂ ಲಭ್ಯವಾಗುವಂತಾಗಬೇಕು. ಕಟ್ಟಡ ಕೇವಲ ಕಟ್ಟಡವಾಗಬಾರದು. ಅದು ಜಾನ ಮಂದಿರವಾಗಬೇಕು ಎಂದು ಕರೆ ನೀಡಿದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಂದ್ರ ಬಾದಾಮಿಕರ್‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಹಿಂದಿನ ದಿನಗಳಲ್ಲಿ ಸಣ್ಣ ಕೊಠಡಿಗಳಲ್ಲಿ ಕಾರ್ಯನಿರ್ವಹಿಸಬೇ ಕಾಗಿತ್ತು. ಇದೀಗ ಕಟ್ಟಡಗಳು ವಿಶಾಲವಾಗಿರುವುದರಿಂದ ನ್ಯಾಯಾಧೀ ಶರಿಗೆ, ವಕೀಲರಿಗೆ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಲು ಸಾಧ್ಯವಾಗಿದೆ.
ಕೆ.ಎಚ್‌.ಹರಿಕುಮಾರ್‌, ವಕೀಲರ ಸಂಘದ ಅಧ್ಯಕ್ಷ 

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.