ಟ್ಯಾಂಕರ್‌ ನೀರಿನ ಬೆಲೆ ಹೆಚ್ಚಳ ಸಾಧ್ಯತೆ

ಪಟ್ಟಣದಲ್ಲಿ ನೀರಿಗಾಗಿ ಪರದಾಟ • ಒಂದು ಟ್ಯಾಂಕ್‌ ನೀರಿಗೆ 300ರಿಂದ 400 ರೂ

Team Udayavani, May 6, 2019, 5:50 PM IST

TUMKUR-TDY-2..

ಚಿಕ್ಕನಾಯಕನಹಳ್ಳಿಯ 23ನೇ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ನೀಗಿಸಲು ವಾರ್ಡ್‌ ಸದಸ್ಯೆ ಉಮಾ ಪುರಸಭೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿರುವುದು.

ಚಿಕ್ಕನಾಯಕನಹಳ್ಳಿ: ಪಟ್ಟಣದ ಬಹುತೇಕ ನೀರಿನ ಸಮಸ್ಯೆಗಳನ್ನು ಖಾಸಗಿ ಟ್ಯಾಂಕರ್‌ಗಳು ನೀಗಿಸುತ್ತಿದೆ. ಟ್ಯಾಂಕ್‌ಗಳಿಗೆ ನೀರು ತುಂಬುತ್ತಿದ್ದ ಬೋರ್‌ವೇಲ್ಗಳಿಗೆ ವಿದ್ಯುತ್‌ ಸಮಸ್ಯೆ ಎದುರಾಗಿದ್ದು, ಪಟ್ಟಣದ ಜನತೆ ನೀರಿಗಾಗಿ ಪರದಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಟ್ಯಾಂಕರ್‌ ನೀರಿನ ಬೆಲೆ ಹೆಚ್ಚಾಗುವ ಜೊತೆಗೆ ಪಟ್ಟಣದಲ್ಲಿ ನೀರಿಗಾಗಿ ಮತ್ತೂಷ್ಟು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಲಿದೆ.

ಪಟ್ಟಣದಲ್ಲಿ ಸುಮಾರು 25ರಿಂದ 30 ಟ್ಯಾಂಕರ್‌ಗಳು ದಿನನಿತ್ಯ ಮನೆ, ಹೋಟಲ್, ಕಟ್ಟಡ ಕಾಮಾಗಾರಿಗಳಿಗೆ ಹಾಗೂ ತೋಟಗಳಿಗೆ ನೀರನ್ನು ಸರಬರಾಜು ಮಾಡುತ್ತಿದೆ. ವಿದ್ಯುತ್‌ ಇಲಾಖೆಯಿಂದ ಬೋರ್‌ವೇಲ್ಗಳಿಗೆ 3ರಿಂದ 4 ಗಂಟೆಗಳು ಮಾತ್ರ ವಿದ್ಯುತ್‌ ಸಂಪರ್ಕ ನೀಡುತ್ತಿರುವುದು ಖಾಸಗಿ ಟ್ಯಾಂಕರ್‌ಗಳಿಗೆ ನೀರನ್ನು ತುಂಬಿಸಲು ಅಸಾಧ್ಯವಾಗಿದೆ. ಪಟ್ಟಣಕ್ಕೆ ನೀರಿನ ಪೂರೈಕೆ ಪ್ರಮಾಣ ಕುಸಿಯುತ್ತಿದ್ದು, ಟ್ಯಾಂಕರ್‌ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

ಒಂದು ಟ್ಯಾಂಕ್‌ಗೆ 300 ರಿಂದ 400: ಪಟ್ಟಣದಲ್ಲಿ ಖಾಸಗಿ ಟ್ಯಾಂಕರ್‌ಗಳಿಗೆ ಅಧಿಕೃತವಾಗಿ ಮೂರು- ನಾಲ್ಕು ಬೋರ್‌ವೇಲ್ಗಳಲ್ಲಿ ನೀರನ್ನು ತುಂಬಿಸುತ್ತಿದ್ದು, ಒಂದು ಟ್ಯಾಂಕರ್‌ ನೀರು ತುಂಬಲು 100ರಿಂದ 150 ರೂ.ಗಳನ್ನು ಪಡೆಯುತ್ತಿದೆ. ಅದೇ ಟ್ಯಾಂಕರ್‌ನ್ನು ಪಟ್ಟಣದಲ್ಲಿ 300- 400 ರೂ.ಗಳಿಗೆ ನೀಡಲಾಗುತ್ತಿದೆ.

ಮಳೆ ಬಾರದಿದ್ದರೆ ನೀರಿ ಪರದಾಟ: ಪಟ್ಟಣದಲ್ಲಿ 23ವಾರ್ಡ್‌ ಗಳಲ್ಲಿ ಸುಮಾರು 20 ಸಾವಿರ ಜನರಿದ್ದು, ಬಹುತೇಕ ವಾರ್ಡ್‌ ಗಳಲ್ಲಿ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಪುರಸಭೆ ನಲ್ಲಿಗಳಲ್ಲಿ ತಿಂಗಳು ಕಳೆದರು ನೀರು ಬಾರದೆ ಹಾಹಾಕಾರ ಸೃಷ್ಟಿ ಯಾಗಿದೆ. ಕೊಳವೆ ಬಾವಿಗಳಲ್ಲಿ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ಮಳೆ ಬಾರದಿದ್ದರೆ ಪಟ್ಟಣದಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವುದರಲ್ಲಿ ಅನುಮಾನವಿಲ್ಲ.

ಪಟ್ಟಣಕ್ಕೆ ಪುರಸಭೆ ನೀರು ಕಲ್ಪಿಸಲಿ: ಪುರಸಭೆ ವ್ಯಾಪ್ತಿಯಲ್ಲಿನ ಮನೆಗಳಿಗೆ 15ರಿಂದ 20 ದಿನಗಳು ಕಳೆದರು ನೀರು ಬಿಡುತ್ತಿಲ್ಲ. ಹನಿ ನೀರಿಗಾಗಿ ಬಹುತೇಕ ಜನರು ರಾತ್ರಿಯಾದರು ನೀರನ್ನು ಸಂಗ್ರಹಿಸುವುದು ಸಮಾನ್ಯವಾಗಿದೆ. ಪುರಸಭೆ ಅಧಿಕಾರಿಗಳು ಮುಂದೆ ಬರುವ ನೀರಿನ ಸಮಸ್ಯೆಗಳ ಬಗ್ಗೆ ಮುಂಜಾಗೃತ ಕ್ರಮ ವಹಿಸಬೇಕಾಗಿದೆ. ಇಲ್ಲವಾದರೇ ಕಳೆದ ವರ್ಷ ನಡೆದ ನೀರಿನ ಪ್ರತಿಭಟನೆಗಳನ್ನು ಎದುರಿಸಬೇಕಾಗುತ್ತದೆ.

● ಚೇತನ್‌ ಪ್ರಸಾದ್‌

ಟಾಪ್ ನ್ಯೂಸ್

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.