![modi (4)](https://www.udayavani.com/wp-content/uploads/2024/07/modi-4-4-415x256.jpg)
ನಾಯಿಗಳ ಹಾವಳಿ ತಪ್ಪಿಸಲು ಆಗ್ರಹ
Team Udayavani, May 25, 2020, 7:23 AM IST
![bidi haavali](https://www.udayavani.com/wp-content/uploads/2020/05/bidi-haavali-620x405.jpg)
ತಿಪಟೂರು: ತಾಲೂಕಿನ ನೊಣವಿನಕೆರೆಯಲ್ಲಿ ಹುಚ್ಚು ನಾಯಿ ಮತ್ತು ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, 20-25 ಜನರಿಗೆ ಈಗಾಗಲೇ ಹುಚ್ಚುನಾಯಿ ಕಡಿ ದಿದ್ದು, ಜನರು ಓಡಾಡಲು ಭಯಬೀತರಾಗುತ್ತಿದ್ದಾರೆ. ಇದನ್ನು ತಡೆಗಟ್ಟಬೇಕಾದ ಗ್ರಾಪಂ ಕಣ್ಮುಚ್ಚಿ ಕುಳಿತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೊಣವಿನಕೆರೆ ಹೋಬಳಿಯ ಯಾವ ಬಡಾವಣೆ ಗಳನ್ನು ನೋಡಿದರೂ ಬೀದಿ ನಾಯಿಗಳದ್ದೇ ಕಾರುಬಾರಾ ಗಿದ್ದು, ದೊಡ್ಡವರಿಂದ ಮಕ್ಕಳಾದಿಯಾಗಿ ಭಯದಿಂದ ಓಡಾಡುವಂತಾಗಿದೆ. ವಾಹನಗಳಲ್ಲಿ ಹೋಗುತ್ತಿದ್ದರೂಬೀದಿನಾಯಿಗಳು ಅಟ್ಟಿಸಿಕೊಂಡು ಬರುತ್ತವೆ. ಹಾದಿಬೀದಿಯಲ್ಲಿ ಹಾಕುವ ಕಸದ ರಾಶಿ ಹಾಗೂ ಮಾಂಸದಂಗಡಿಗಳವರು ಎಲ್ಲೆಂದರಲ್ಲಿ ಎಸೆಯುವ ತ್ಯಾಜ್ಯವನ್ನೆ ನಾಯಿಗಳು ತಮ್ಮ ಆವಾಸ ಸ್ಥಾನವಾಗಿಸಿ ಕೊಂಡಿವೆ ಎಂದು ದೂರಿದರು.
ಮನೆಗಳಿಂದ ಹೊರ ಬರಬೇಕಾದರೆ ಬೀದಿನಾಯಿಗಳು ಎಲ್ಲಿ ಓಡಿಸಿಕೊಂಡು ಬರುತ್ತವೋ ಎಂದು ನೋಡಿ ಕೊಂಡು ಹೊರಗೆ ಬರಬೇಕಾದ ಪರಿಸ್ಥಿತಿ ಬಂದಿದೆ. ಮಕ್ಕಳು ಮನೆಗಳಿಗೆ ತೆರಳಬೇಕಾದರೆ ಎಲ್ಲಿ ನಾಯಿ ಬಂದು ನಮ್ಮನ್ನು ಕಚ್ಚಿಬಿಡುತ್ತದೆಯೋ ಎಂಬ ಭಯ ದಿಂದ ಓಡಾಡುವಂತಾಗಿದೆ. ಪೋಷಕರಂತೂ ಮಕ್ಕಳ ಮೇಲೆ ಹದ್ದಿನ ಕಣ್ಣಿಟ್ಟು ಕಾಯುವಂತಾಗಿದೆ.
ಗ್ರಾಪಂ ನಿರ್ಲಕ್ಷ: ಹುಚ್ಚುನಾಯಿ ಮತ್ತು ಬೀದಿನಾಯಿ ಗಳ ಹಾವಳಿ ವಿಪರೀತವಾಗಿದ್ದು, ಈ ಬಗ್ಗೆ ಗ್ರಾಪಂಗೆ ಹತ್ತು ಹಲವು ಬಾರಿ ಮನವಿ ಮಾಡಿದರೂ ಕ್ಯಾರೆ ಎನ್ನದೆ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ನಾಯಿ ಗಳನ್ನು ಹಿಡಿಯಲು ಜಿಲ್ಲಾಧಿಕಾರಿಗಳ ಆದೇಶಬೇಕಿದ್ದು ಆದೇಶ ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎನ್ನು ತ್ತಾರೆ. ಆದರೆ ಜನರು ಪ್ರಾಣಭಯದಿಂದ ಓಡಾಡು ತ್ತಿದ್ದು ಆದೇಶ ಬರುವತ್ತಿಗೆ ಎಷ್ಟು ಜನರ ಜೀವವನ್ನು ಬಲಿ ಪಡೆದಿರುತ್ತವೆಯೋ ಗೊತ್ತಿಲ್ಲ.
ಅಧಿಕಾರಿಗಳ ನಿರ್ಲಕ್ಷಕ್ಕೆ ಅಮಾಯಕ ಜೀವಗಳು ಬಲಿಯಾಗಲಿದ್ದು ಇದೇ ರೀತಿ ಮುಂದುವರಿದರೆ ರೇಬಿಸ್ ರೋಗ ಹರಡುವ ಸಾಧ್ಯತೆ ಹೆಚ್ಚುವ ಸಾಧ್ಯತೆ ಇದೆ ಎಂಬುದು ಗ್ರಾಮಸ್ಥರ ಆತಂಕವಾಗಿದೆ. ಕೂಡಲೇ ಅಧಿಕಾರಿಗಳು ನಾಯಿಗಳ ಸಮಸ್ಯೆ ಬಗೆಹರಿಸದಿದ್ದರೆ ಗ್ರಾಪಂ ಮುಂದೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.