ಮಾವಿನ‌ ಬೆಳೆಯೂ ಇಲ್ಲ, ಬೆಲೆಯೂ ಇಲ್ಲ: ನಷ್ಟ ಭೀತಿ


Team Udayavani, May 13, 2019, 4:26 PM IST

tumkur-tdy-2..

ಚೇಳೂರು: ಈ ವರ್ಷ ಮಾವಿನ‌ ಬೆಳೆಯೂ ಇಲ್ಲ, ಬಂದಂತಹ ಬೆಳೆಗೆ ಸರಿಯಾದ ಬೆಲೆಯೂ ಇಲ್ಲದೇ ಮಾವು ಬೆಳೆಗಾರರು ಹಾಗೂ ವರ್ತಕರು ಕಂಗೆಟ್ಟಿರುವುದು ಕಂಡುಬರುತ್ತಿದೆ.

ಗುಬ್ಬಿ ತಾಲೂಕಿನ ಚೇಳೂರು ರಾಜ್ಯದಲ್ಲಿಯೇ ಮಾವು ಮತ್ತು ಹಲಸಿಗೆ ಹೆಸರುವಾಸಿಯಾದ ಮಾರುಕಟ್ಟೆ. ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆ ಹಣ್ಣುಗಳು ಈ ಮಾರುಕಟ್ಟೆಗೆ ಬರುತ್ತಿವೆ. ಕಳೆದ ವರ್ಷಉತ್ತಮ ಮಳೆಯಾಗಿ ಉತ್ತಮ ಬೆಳೆಯೂ ಬಂದಿತ್ತು. ಆದರೆ, ಈ ಬಾರಿ ಮಾವಿನ ಗಿಡದಲ್ಲಿ ಕಾಯಿ ಬಂದಾಗ ಸರಿಯಾದ ಸಮಯಕ್ಕೆ ಮಳೆಯಾಗದೇ ಫ‌ಲವತ್ತಾಗಿ ಬರ ಬೇಕಾಗಿದ್ದ ಮಾವಿನಕಾಯಿಗಳ ಇಳುವರಿ ಕಡಿಮೆಯಾಗಿ ಸಣ್ಣ ಗಾತ್ರದಲ್ಲಿಯೇ ನಿಂತುಕೊಂಡಿವೆ.

ಶೇ.25ಭಾಗ ಫ‌ಸಲು: ಕೆಲವು ಮರಗಳಲ್ಲಿ ಗಾಳಿಗೂ ಸಹ ಸಣ್ಣ ಗಾತ್ರದಲ್ಲೆಯೇ ಇದ್ದಾಗಲೇ ಮಾವಿನಕಾಯಿಗಳು ಬಿದ್ದಿವೆ. ಜೊತೆಗೆ ಇರುವ ಫ‌ಸಲು ಸಹ ಉತ್ತಮವಾಗಿ ಬಂದಿಲ್ಲ. ಅದು ಸಹ ಶೇ.25ಭಾಗದಷ್ಟು ಫ‌ಸಲು ಮಾತ್ರ ಈ ವರ್ಷ ಬಂದಿದೆ ಎಂದು ರೈತರು ಹಾಗೂ ವರ್ತಕರು ಹೇಳುತ್ತಿದ್ದಾರೆ.

ನಷ್ಟದ ಭೀತಿ: ಬಂದಂತಹ ಮಾವಿನಕಾಯಿಗಳನ್ನು ತೆಗೆದುಕೊಳ್ಳುಲು ಮಂಡಿ ವರ್ತಕರು ಯೋಚನೆ ಮಾಡುತ್ತಿದ್ದಾರೆ. ಇದಕ್ಕೆ ಸೂಕ್ತ ಬೆಲೆ ಸಿಗುತ್ತದೋ ಇಲ್ಲವೋಎಂಬ ಚಿಂತೆಯಾಗಿದೆ. ಉತ್ತಮ ಬೆಲೆ ಇಲ್ಲದಿದ್ದರೆ ರೈತರಷ್ಟೇ ನಮಗೂ ನಷ್ಟವಾಗಬಹುದು ಎಂಬ ಯೋಚನೆ ಮಾಡುವ ಪರಿಸ್ಥಿತಿ ವರ್ತಕರಿಗೆ ಎದುರಾಗಿದೆ.

ದಿನಕ್ಕೆ 5ರಿಂದ 10ಲೋಡ್‌ ರವಾನೆ: ಕಳೆದ ವರ್ಷ ಈ ವೇಳೆ ಪ್ರತಿದಿನ ಮಾರುಕಟ್ಟೆಯಿಂದ 30ಕ್ಕೂ ಹೆಚ್ಚು ಲೋಡ್‌ ಮಾವಿನಕಾಯಿ ಬೆಂಗಳೂರು, ದಾವಣಗೆರೆ, ವಿಜಯಪುರ, ಬಾಗಲಕೋಟೆ, ಪೂನಾ, ದೆಹಲಿ, ಮಹಾರಾಷ್ಟ್ರದ ನಗರ ಪ್ರದೇಶಗಳಿಗೆ ಹಾಗೂ ಅನೇಕ ದೂರದೂರುಗಳಿಗೆ, ರಾಜ್ಯಗಳಿಗೆ ಇಲ್ಲಿಂದ ಹೋಗುತ್ತಿತ್ತು. ಆದರೆ, ಈ ವರ್ಷ ದಿನಕ್ಕೆ 5ರಿಂದ 10ಲೋಡ್‌ ಹಣ್ಣು ಹೋಗುವುದೇ ಕಷ್ಟವಾಗಿದೆ ಎಂದು ಇಲ್ಲಿನ ವರ್ತಕರು ಅಳಲು ತೋಡಿಕೊಂಡಿದ್ದಾರೆ.

ಈ ವರ್ಷ ತೋತಪುರಿ ಕೆ.ಜಿ.ಗೆ 8-12ರೂ., ಮಲಗೊಬಾ 20-30 ರೂ., ರಸಪುರಿ 15-20ರೂ., ಸೆಂಧೂರ 10-15 ರೂ., ಬೆನೀಷ್‌ 15-20ರೂ., ಬಾದಾಮಿ 20-30 ರೂ. ಬೆಲೆ ಪಡೆದುಕೊಂಡಿವೆ. ಇತರೆ ಜಾತಿಯ ಹಣ್ಣುಗಳಿಗೂ ಉತ್ತಮ ಬೆಲೆಯಿಲ್ಲ. ಇಂತಹ ಬೆಲೆಯಲ್ಲಿ ಮಾವಿನಕಾಯಿ ಕೀಳುವ ಕೂಲಿ ಯೂ ಸಿಗುವುದು ಕಷ್ಟವಾಗಿದೆ. ಸರಿಯಾದ ಬೆಳೆಯಿಲ್ಲದೇ ಕಂಗೆಟ್ಟ ಕೆಲವು ರೈತರು, ಮಾವಿನಗಿಡಗಳನ್ನೇ ತೆಗೆಯುವ ಯೋಚನೆ ಮಾಡುತ್ತಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ ಮಾವು ಅಭಿವೃದ್ಧಿ ಮಂಡಳಿ ಸೂಕ್ತ ಸಲಹೆ ಹಾಗೂ ಸಹಕಾರವನ್ನು ರೈತರಿಗೆ ನೀಡಬೇಕಾಗಿದೆ ಎಂದು ರೈತರ ಅಭಿಪ್ರಾಯವಾಗಿದೆ.

● ಸಿ.ಟಿ.ಮೋಹನ್‌ರಾವ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.