![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಮಾವಿನ ಬೆಳೆಯೂ ಇಲ್ಲ, ಬೆಲೆಯೂ ಇಲ್ಲ: ನಷ್ಟ ಭೀತಿ
Team Udayavani, May 13, 2019, 4:26 PM IST
![tumkur-tdy-2..](https://www.udayavani.com/wp-content/uploads/2019/05/tumkur-tdy-2..-3-620x323.jpg)
ಚೇಳೂರು: ಈ ವರ್ಷ ಮಾವಿನ ಬೆಳೆಯೂ ಇಲ್ಲ, ಬಂದಂತಹ ಬೆಳೆಗೆ ಸರಿಯಾದ ಬೆಲೆಯೂ ಇಲ್ಲದೇ ಮಾವು ಬೆಳೆಗಾರರು ಹಾಗೂ ವರ್ತಕರು ಕಂಗೆಟ್ಟಿರುವುದು ಕಂಡುಬರುತ್ತಿದೆ.
ಗುಬ್ಬಿ ತಾಲೂಕಿನ ಚೇಳೂರು ರಾಜ್ಯದಲ್ಲಿಯೇ ಮಾವು ಮತ್ತು ಹಲಸಿಗೆ ಹೆಸರುವಾಸಿಯಾದ ಮಾರುಕಟ್ಟೆ. ಕಳೆದ ವರ್ಷಕ್ಕಿಂತ ಈ ವರ್ಷ ಕಡಿಮೆ ಹಣ್ಣುಗಳು ಈ ಮಾರುಕಟ್ಟೆಗೆ ಬರುತ್ತಿವೆ. ಕಳೆದ ವರ್ಷಉತ್ತಮ ಮಳೆಯಾಗಿ ಉತ್ತಮ ಬೆಳೆಯೂ ಬಂದಿತ್ತು. ಆದರೆ, ಈ ಬಾರಿ ಮಾವಿನ ಗಿಡದಲ್ಲಿ ಕಾಯಿ ಬಂದಾಗ ಸರಿಯಾದ ಸಮಯಕ್ಕೆ ಮಳೆಯಾಗದೇ ಫಲವತ್ತಾಗಿ ಬರ ಬೇಕಾಗಿದ್ದ ಮಾವಿನಕಾಯಿಗಳ ಇಳುವರಿ ಕಡಿಮೆಯಾಗಿ ಸಣ್ಣ ಗಾತ್ರದಲ್ಲಿಯೇ ನಿಂತುಕೊಂಡಿವೆ.
ಶೇ.25ಭಾಗ ಫಸಲು: ಕೆಲವು ಮರಗಳಲ್ಲಿ ಗಾಳಿಗೂ ಸಹ ಸಣ್ಣ ಗಾತ್ರದಲ್ಲೆಯೇ ಇದ್ದಾಗಲೇ ಮಾವಿನಕಾಯಿಗಳು ಬಿದ್ದಿವೆ. ಜೊತೆಗೆ ಇರುವ ಫಸಲು ಸಹ ಉತ್ತಮವಾಗಿ ಬಂದಿಲ್ಲ. ಅದು ಸಹ ಶೇ.25ಭಾಗದಷ್ಟು ಫಸಲು ಮಾತ್ರ ಈ ವರ್ಷ ಬಂದಿದೆ ಎಂದು ರೈತರು ಹಾಗೂ ವರ್ತಕರು ಹೇಳುತ್ತಿದ್ದಾರೆ.
ನಷ್ಟದ ಭೀತಿ: ಬಂದಂತಹ ಮಾವಿನಕಾಯಿಗಳನ್ನು ತೆಗೆದುಕೊಳ್ಳುಲು ಮಂಡಿ ವರ್ತಕರು ಯೋಚನೆ ಮಾಡುತ್ತಿದ್ದಾರೆ. ಇದಕ್ಕೆ ಸೂಕ್ತ ಬೆಲೆ ಸಿಗುತ್ತದೋ ಇಲ್ಲವೋಎಂಬ ಚಿಂತೆಯಾಗಿದೆ. ಉತ್ತಮ ಬೆಲೆ ಇಲ್ಲದಿದ್ದರೆ ರೈತರಷ್ಟೇ ನಮಗೂ ನಷ್ಟವಾಗಬಹುದು ಎಂಬ ಯೋಚನೆ ಮಾಡುವ ಪರಿಸ್ಥಿತಿ ವರ್ತಕರಿಗೆ ಎದುರಾಗಿದೆ.
ದಿನಕ್ಕೆ 5ರಿಂದ 10ಲೋಡ್ ರವಾನೆ: ಕಳೆದ ವರ್ಷ ಈ ವೇಳೆ ಪ್ರತಿದಿನ ಮಾರುಕಟ್ಟೆಯಿಂದ 30ಕ್ಕೂ ಹೆಚ್ಚು ಲೋಡ್ ಮಾವಿನಕಾಯಿ ಬೆಂಗಳೂರು, ದಾವಣಗೆರೆ, ವಿಜಯಪುರ, ಬಾಗಲಕೋಟೆ, ಪೂನಾ, ದೆಹಲಿ, ಮಹಾರಾಷ್ಟ್ರದ ನಗರ ಪ್ರದೇಶಗಳಿಗೆ ಹಾಗೂ ಅನೇಕ ದೂರದೂರುಗಳಿಗೆ, ರಾಜ್ಯಗಳಿಗೆ ಇಲ್ಲಿಂದ ಹೋಗುತ್ತಿತ್ತು. ಆದರೆ, ಈ ವರ್ಷ ದಿನಕ್ಕೆ 5ರಿಂದ 10ಲೋಡ್ ಹಣ್ಣು ಹೋಗುವುದೇ ಕಷ್ಟವಾಗಿದೆ ಎಂದು ಇಲ್ಲಿನ ವರ್ತಕರು ಅಳಲು ತೋಡಿಕೊಂಡಿದ್ದಾರೆ.
ಈ ವರ್ಷ ತೋತಪುರಿ ಕೆ.ಜಿ.ಗೆ 8-12ರೂ., ಮಲಗೊಬಾ 20-30 ರೂ., ರಸಪುರಿ 15-20ರೂ., ಸೆಂಧೂರ 10-15 ರೂ., ಬೆನೀಷ್ 15-20ರೂ., ಬಾದಾಮಿ 20-30 ರೂ. ಬೆಲೆ ಪಡೆದುಕೊಂಡಿವೆ. ಇತರೆ ಜಾತಿಯ ಹಣ್ಣುಗಳಿಗೂ ಉತ್ತಮ ಬೆಲೆಯಿಲ್ಲ. ಇಂತಹ ಬೆಲೆಯಲ್ಲಿ ಮಾವಿನಕಾಯಿ ಕೀಳುವ ಕೂಲಿ ಯೂ ಸಿಗುವುದು ಕಷ್ಟವಾಗಿದೆ. ಸರಿಯಾದ ಬೆಳೆಯಿಲ್ಲದೇ ಕಂಗೆಟ್ಟ ಕೆಲವು ರೈತರು, ಮಾವಿನಗಿಡಗಳನ್ನೇ ತೆಗೆಯುವ ಯೋಚನೆ ಮಾಡುತ್ತಿದ್ದಾರೆ.
ಇಂತಹ ಪರಿಸ್ಥಿತಿಯಲ್ಲಿ ಮಾವು ಅಭಿವೃದ್ಧಿ ಮಂಡಳಿ ಸೂಕ್ತ ಸಲಹೆ ಹಾಗೂ ಸಹಕಾರವನ್ನು ರೈತರಿಗೆ ನೀಡಬೇಕಾಗಿದೆ ಎಂದು ರೈತರ ಅಭಿಪ್ರಾಯವಾಗಿದೆ.
● ಸಿ.ಟಿ.ಮೋಹನ್ರಾವ್
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.