ಜಿಲ್ಲೆಯಲ್ಲಿ ಹೊಸ ಪ್ರಕರಣಗಳಿಗೆ ಬ್ರೇಕ್‌


Team Udayavani, Apr 11, 2020, 6:40 PM IST

ಜಿಲ್ಲೆಯಲ್ಲಿ ಹೊಸ ಪ್ರಕರಣಗಳಿಗೆ ಬ್ರೇಕ್‌

ತುಮಕೂರು: ಕೋವಿಡ್‌-19 ಮಹಾಮಾರಿ ವ್ಯಾಪಕವಾಗಿ ಎಲ್ಲಾಕಡೆ ಹಬ್ಬುತ್ತಿದೆ ಆರಂಭದಲ್ಲಿ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟು ಇಬ್ಬರಲ್ಲಿ ರೋಗದ ಸೋಂಕು ಕಾಣಿಸಿ ಕೊಂಡಾಗ ಇಡೀ ಜಿಲ್ಲೆ ಬೆಚ್ಚಿ ಬಿದ್ದಿತ್ತು ನಂತರ ಜಿಲ್ಲಾಡಳಿತ ಕೈಗೊಂಡ ಹಲವು ಮುಂಜಾಗ್ರತಾ ಕ್ರಮದಿಂದ ಹೊಸ ಕೋವಿಡ್‌-19 ಪ್ರಕರಣಗಳು ಗೋಚರಗೊಂಡಿಲ್ಲ.

ಜಿಲ್ಲೆಗೆ ವಿದೇಶದಿಂದ 480 ಜನ ಬಂದಿದ್ದರೂ ಕೋವಿಡ್‌-19ರ ಹರಡುವಿಕೆ ನಿಯಂತ್ರಿಸಲು ಸಾಮಾಜಿಕ ಅಂತರ ಮುಖ್ಯ. ಸುರಕ್ಷತಾ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಜಿಲ್ಲಾ ಆರೋಗ್ಯ ಕಾರ್ಯಪಡೆ ಪ್ರತಿ ದಿನ ಸಭೆ ನಡೆಸಲು ಮಾಹಿತಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ವಿದೇಶದಿಂದ ಬಂದವರ ಮೇಲೆ ಮತ್ತು ದೆಹಲಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಮೇಲೆ ನಿಗಾವಹಿಸಿದರು.

ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆ ಮಾಡಿದರು. ಅವರನ್ನು ಹಂತ ಹಂತ ವಾಗಿ ಹೋಂ ಕ್ವಾರೆಂಟೈನ್‌ನಲ್ಲಿ ಇರಿಸಲಾಗಿತ್ತು, ಅವರಿಗೆ ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರಬಾರದೆಂದು ಜಿಲ್ಲಾಡಳಿತದಿಂದ ಕಟ್ಟು ನಿಟ್ಟಿನ ಸೂಚನೆ ನೀಡಿತ್ತು, ಸಂಶಯವಿರುವವರನ್ನು ಐಸೋಲೇಷನ್‌ನಲ್ಲಿ ಇಟ್ಟು ಚಿಕಿತ್ಸೆ ನೀಡಿದರು.

ಈವರೆಗೂ 202 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 188 ಮಾದರಿಗಳು ನೆಗೆಟಿವ್‌ ಎಂದು ದೃಢಪಟ್ಟಿದೆ. 2 ಪ್ರಕರಣಗಳು ಮಾತ್ರ ಪಾಸಿಟಿವ್‌ ಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. 3 ಮಾದರಿಗಳು ತಿರಸ್ಕೃತಗೊಂಡಿವೆ ಹಾಗೂ ಬಾಕಿ ಇದ್ದ 9 ತಪಾಸಣೆಯ ವರದಿಯೂ ಬಂದಿದ್ದು ಎಲ್ಲವೂ ನೆಗೆಟೀವ್‌ ಎಂದು ವರದಿ ಬಂದಿದೆ ಎನ್ನುತ್ತಾರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಿ.ಆರ್‌.ಚಂದ್ರಿಕಾ.

ಕ್ರಿಮಿ ನಾಶಕ ಸಿಂಪಡನೆ: ನಗರದಲ್ಲಿ ಮಹಾ ನಗರ ಪಾಲಿಕೆ ವತಿಯಿಂದ ಕೋವಿಡ್‌-19 ವೈರಸ್‌ ಹಿನ್ನಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಮತ್ತು ಶ್ರೀ ಕ್ಷೇತ್ರ ಸಿದ್ಧಗಂಗಾ ಮಠ ಮತ್ತು ಜನ ಹೆಚ್ಚು ಇರುವ ಪ್ರದೇಶಗಳಲ್ಲಿ ಕ್ರಿಮಿನಾಶಕ ಸಿಂಪಡನೆ ಮಾಡಲಾಗಿದೆ.

ದ್ರೋಣ್‌ ಕ್ಯಾಮೆರಾ ಕಣ್ಗಾವಲು: ಜಿಲ್ಲಾದ್ಯಂತ ಲಾಕ್‌ಡೌನ್‌ ವಿಧಿಸಿರುವ ಹಿನ್ನೆಲೆ ನಗರದಲ್ಲಿ ದ್ರೋಣ್‌ ಕ್ಯಾಮೆರಾ ಕಣ್ಗಾವಲನ್ನು ಎಸ್ಪಿ ಡಾ.ಕೊ.ನ.ವಂಸಿಕೃಷ್ಣ ಮಾಡಿದ್ದರು. ನಗರದಲ್ಲಿ ಸುಖಾಸುಮ್ಮನೆ ತಿರುಗಾಡುವವರ ಚಲನ- ವಲನವನ್ನು ಸೆರೆ ಹಿಡಿದು ಕ್ರಮ ಕೈಗೊಂಡು ದ್ವಿಚಕ್ರ ವಾಹನ ವಶಪಡಿಸಿ ಕೊಂಡು ಲಾಕ್‌ ಡೌನ್‌ ಮುಗಿಯುವ ವರೆಗೆ ಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನಗರದ ಸ್ಮಾರ್ಟ್‌ ಸಿಟಿ ಯೋಜನೆಯನ್ನು ಬಳಸಿ ಕೊಂಡಿರುವುದಕ್ಕೆ ಕೇಂದ್ರ ಆರೋಗ್ಯ ಸಚಿವರಿಂದಲೂ ಮೆಚ್ಚುಗೆ ಬಂದಿದೆ. ನಿರಾಶ್ರಿತರಿಗೆ, ವಲಸಿಗರಿಗೆ ಊಟ ವಸತಿಯನ್ನು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ.

ಕೋವಿಡ್‌-19ವೈರಸ್‌ ಎಲ್ಲಾ ಕಡೆ ವ್ಯಾಪಕವಾಗಿ ಹರಡುತ್ತಿರುವ ಈವೇಳೆಯಲ್ಲಿ ಸೋಂಕು ಹರಡದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಹಾಗೆಯೇ ಜಿಲ್ಲೆಯ ಕೆಲ ಜನರು ಅಂತರವಿಲ್ಲದೆ ಓಡಾಡಿದ್ದು ಬಿಟ್ಟರೆ ಎಲ್ಲಾ ಕಡೆ ಸಹಕಾರ ನೀಡಿದ್ದಾರೆ.ಡಾ.ಕೆ.ರಾಕೇಶ್‌ಕುಮಾರ್‌, ಜಿಲ್ಲಾಧಿಕಾರಿ

 

-ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.