ಅತಿ ವೇಗ ಮತ್ತು ಅವೈಜ್ಞಾನಿಕ ಚಾಲನೆ: ಕ್ರಷರ್ ಲಾರಿ ತಡೆದು ಸಾರಿಗೆ ಇಲಾಖೆ ವಿರುದ್ದ ಆಕ್ರೋಶ.


Team Udayavani, Oct 6, 2021, 5:55 PM IST

thumakuru news

ಕೊರಟಗೆರೆ: ಕಲ್ಲು ಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ ನ ಅವೈಜ್ಞಾನಿಕ ವಾಹನ ಚಾಲನೆಯಿಂದ ರೈತಾಪಿ ವರ್ಗ ಹಾಗೂ ಸಾರ್ವಜನಿಕರಿಗೆ ರಸ್ತೆಯಲ್ಲಿ ಚಲಿಸಲು ಭಯ ಪಡುವಂತ ಪರಿಸ್ಥಿತಿ ಎದುರಾಗಿದೆ  ಎಂದು ಆರೋಪಿಸಿ ಸ್ಥಳೀಯ ರೈತರು ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ನಡೆದಿದೆ.

ತಾಲ್ಲೂಕಿನ ಚನ್ನರಾಯನ ದುರ್ಗ ಹೋಬಳಿಯ ಕುರಂಕೋಟೆ ಗ್ರಾಪಂ ವ್ಯಾಪ್ತಿಯ ಶಾರದ ಮಠದ ಸಮೀಪ ತೋವಿನಕೆರೆ ರಸ್ತೆಯಲ್ಲಿ 30 ಕ್ಕೂ ಹೆಚ್ಚು ಕ ಜಲ್ಲಿ ತುಂಬಿದ ಲಾರಿಗಳನ್ನು ತಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ, ಸಾರಿಗೆ ಮತ್ತು ಪಿಡಬ್ಲ್ಯೂಡಿ ಇಲಖೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜುಂಜರಾಮನಹಳ್ಳಿ ಸ್ಥಳೀಯ ನಿವಾಸಿ ವಿರಣ್ಣ ಗೌಡ ಮಾತನಾಡಿ ಬಿಕ್ಕೆಗುಟ್ಟೆ ಕಲ್ಲ ಗಣಿಗಾರಿಕೆ ಪ್ರದೇಶದಿಂದ ತೋವಿನಕೆರೆ ಮಾರ್ಗವಾಗಿ  ಪ್ರತಿನಿತ್ಯ ನೂರಾರು ಲಾರಿಗಳು ಚಲಿಸುತ್ತೀವೆ. ಬಾರದ ಮೀತಿ ಹೆಚ್ಚಾಗಿ ರಸ್ತೆ ಮತ್ತು ಸೇತುವೆ ಬಿರುಕು ಬಿಟ್ಟಿವೆ. ಜಲ್ಲಿ ಲಾರಿ ಮತ್ತು ಚಾಲಕರಿಗೆ ಪರವಾನಗಿ ಇಲ್ಲದೇ ವಾಹನ ಚಲಾಯಿಸುತ್ತಾರೆ. ಕಂದಾಯ ಮತ್ತು ಸಾರಿಗೆ ಇಲಾಖೆ ಮೌನಕ್ಕೆ ಹಲವು ಅನುಮಾನ ಮೂಡುತ್ತೀವೆ ಎಂದು ಆರೋಪಿಸಿದರು.

ಕುರಂಕೋಟೆಯ ಸ್ಥಳೀಯ ಮನೋಹರ್ ಮಾತನಾಡಿ ಬಿಕ್ಕೆಗುಟ್ಟೆ ಕಲ್ಲು ಗಣಿಗಾರಿಕೆ ಬ್ಲಾಸ್ಟಿಂಗ್ ಶಬ್ದಕ್ಕೆ ಮನೆಗಳೆಲ್ಲಾ  ಬಿರುಕು ಬಿಟ್ಟಿವೆ. ಜಲ್ಲಿ ವಾಹನದ ಮೇಲೆ ಟಾರ್ಪಲ್ ಮತ್ತು ನೀರು ಹಾಕದಿರುವ ಪರಿಣಾಮ ಹಿಂಬದಿ ಪ್ರಯಾಣಿಸುವ ದ್ವಿಚಕ್ರ ವಾಹನ ಸವಾರರ ಕಣ್ಣಿಗೆ ಕಲ್ಲಿನ ಚೂರುಗಳು ಹಾರಿ ಬಂದು ಬಿದ್ದಿವೆ. ಬಲಿಷ್ಟ ರಾಜ ಕಾರಣಿ ಹಾಗೂ ಸರ್ಕಾರದ ಶಕ್ತಿಯನ್ನು ಬಳಸಿಕೊಂಡು ಅಧಿಕಾರಿಗಳ ಮೂಲಕ ಜನ ಸಾಮಾನ್ಯರ ಮೇಲೆ ದಬ್ಬಾಳಿಕೆಯ ಪ್ರಯತ್ನ ನಡೆಯುತ್ತೀದೆ. ರೈತರ ಕೃಷಿ  ಜಮೀನು ಮತ್ತು ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಧುಗಿರಿ ಸಾರಿಗೆ ಇಲಾಖೆಯ ಎಆರ್ ಟಿಒ ಸುಧಾ ಮಾತನಾಡಿ ಓವರ್ ಲೋಡ್ ತುಂಬಿಕೊಂಡು ಸಾಗಣೆ ಮಾಡುತ್ತೀದ್ದ 6 ಲಾರಿಗಳಿಗೆ ಪೈನ್  ಹಾಕಲಾಗಿದೆ. ಲಾರಿಗಳ ದಾಖಲೆ ಮತ್ತು  ಚಾಲಕನ ಪರವಾನಗಿ ಇಲ್ಲದವರ ಮೇಲೆ ಪ್ರಕರಣ ದಾಖಲು ಮಾಡುತ್ತೇವೆ. ಮಧುಗಿರಿ ಕಛೇರಿ ಅವರಣದಲ್ಲಿ ಜಾಗದ ಸಮಸ್ಯೆ ಇರುವುದರಿಂದ ದಂಡ ಹಾಕಿ ಬಿಡಲಾಗಿದೆ. ಖಾಲಿ ವಾಹನಗಳ ದಾಖಲೆ ಪರೀಶೀಲನೆ ನಡೆಸಿ ಬಿಡುತ್ತೇವೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಮೋದಿ ಆಡಳಿತದಿಂದ ದೇಶಕ್ಕೆ ಹೊಸ ಶಕ್ತಿ: ರಾಘವೇಂದ್ರ

ಸ್ಥಳೀಯರು ಪ್ರತಿಭಟನೆ ನಡೆಸಿದಾಗ ನೆಪ ಮಾತ್ರಕ್ಕೆ ಸ್ಥಳಕ್ಕೆ ಬರುತ್ತೀರಾ. ರಾಜಕಾರಣಿಗಳ ಪರವಾಗಿ ಕೆಲಸ ಮಾಡುತ್ತೀರಾ. ಜನ ಸಾಮಾನ್ಯರು ತಪ್ಪು ಮಾಡಿದರೇ ನೀವು ಬೀಡ್ತಿರಾ. ನೀವು ಹೇಗೆ ಲಾರಿಗಳನ್ನು ಪರಿಶೀಲನೆ ನಡೆಸದೇ ಬೀಡ್ತಿರಾ. ಸಾರಿಗೆ ಇಲಾಖೆ ನಿಯಮವೇನು? ಬಡವರಿಗೆ ಒಂದು ನ್ಯಾಯನಾ ಶ್ರೀಮಂತರಿಗೆ ಒಂದು ನ್ಯಾಯನಾ. ಎಂದು ಶಾರದ ಮಠದ ತೋವಿನಕೆರೆ ರಸ್ತೆಯಲ್ಲಿ ಲಾರಿಗಳನ್ನು ತಡೆದು ಪ್ರತಿಭಟನೆ ನಡೆಸುತ್ತೀದ್ದ ವೇಳೆ ಸಾರಿಗೆ ಇಲಾಖೆ ಸಿಬ್ಬಂದಿಗಳ ವಿರುದ್ದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಪ್ರತಿಭಟನೆಯಲ್ಲಿ ಸ್ಥಳೀಯರಾದ ಮಂಜುನಾಥ್,ಶಿವಕುಮಾರ್, ದೊಡ್ಡಯ್ಯ,ಸಿದ್ದರಾಜು ,ನಟರಾಜು,ರಂಗರಾಜು, ಹನುಮಂತರಾಯಪ್ಪ,ಗೀರೀಶ್, ರಾಮಯ್ಯ, ಅನಂತರಾಜು,ಮೋಹನ್ ಕುಮಾರ್, ಕಾಂತರಾಜು, ರಾಜೇಶ್ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.