ಸಚಿವರ ವಿಡಿಯೊ ಸಂವಾದ: ಗ್ರಾಪಂ ಅಧ್ಯಕ ಭಾಗಿ
Team Udayavani, May 27, 2021, 8:35 PM IST
ಹುಳಿಯಾರು: ಸಚಿವ ಕೆ.ಎಸ್.ಈಶ್ವರಪ್ಪಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೈಸೂರು ಹಾಗೂ ಬೆಂಗಳೂರುಕಂದಾಯ ವಿಭಾಗಗಳ ಗ್ರಾಪಂ ಅಧ್ಯಕ್ಷರವಿಡಿಯೊ ಸಂವಾದದ ಮೂಲಕ ಸಭೆ ನಡೆಸಿದರು.
ಈ ಸಭೆಯಲ್ಲಿ ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಪಂ ಅಧ್ಯಕ್ಷ ಕೆ.ಸಿ.ವಿಕಾಸ್ ಭಾಗವಹಿಸಿ ತಮ್ಮಸಲಹೆ ನೀಡಿದರು.ಪ್ರಮುಖವಾಗಿ ಹೋಮ್ ಐಸೋಲೇಷನ್ನಲ್ಲಿ ಇದ್ದವರ ಸಂಖ್ಯೆ ಹೆಚ್ಚಾಗುತ್ತಿದ್ದು, ಐಸೋಲೇಷನ್ಗೆ ಮನೆಯಲ್ಲಿ ವ್ಯವಸ್ಥೆ ಇಲ್ಲದವರನ್ನು ಕೋವಿಡ್ ಕೇರ್ಸೆಂಟರ್ಗೆ ಕಳುಹಿಸಲು ಸಿಸಿಸಿ ಕೇಂದ್ರಗಳನ್ನು ಹೆಚ್ಚಿಸಬೇಕು. ಸ್ಥಳೀಯವಾಗಿ ಖಾಸಗಿ ವೈದ್ಯರು ಕೋವಿಡ್ ಪರೀಕ್ಷೆ ಮಾಡದೇ, ಚಿಕಿತ್ಸೆ ನೀಡುತ್ತಿರುವುದರಿಂದ ಅಂತಹವರು ಗ್ರಾಮದಲ್ಲಿ ತಿರುಗಾಡಿ ಹೆಚ್ಚು ಸೋಂಕು ಹಬ್ಬಿಸುತ್ತಿದ್ದಾರೆ. ಹೀಗಾಗಿ ಸ್ಥಳೀಯ ವೈದ್ಯರು ಕೂಡ ಕೋವಿಡ್ ಪರೀಕ್ಷೆಯ ಬಳಿಕ ಚಿಕಿತ್ಸೆನೀಡುವಂತೆ ಸೂಚಿಸಲು ತಿಳಿಸಿದರು.
ಲಸಿಕೆ ಮೊದಲ ಡೋಸ್ ಹಾಕಿಸಿಕೊಂಡಿರುವವರು ಎರಡನೇ ಡೋಸ್ಗೆಪಕ್ಕದ ಹೋಬಳಿಯ ಪ್ರಾಥಮಿಕಆರೋಗ್ಯ ಕೇಂದ್ರಗಳಿಗೆ ತೆರಳಲು ಸಾಧ್ಯವಿರುವುದಿಲ್ಲ, ಹೀಗಾಗಿ ಗ್ರಾಪಂ ಮಟ್ಟದಲ್ಲೇ ಲಸಿಕೆ ಕೊಡಿಸುವ ವ್ಯವಸ್ಥೆಮಾಡಿದರೆ ವೃದ್ಧರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ