![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ತಿಪಟೂರು: ಕುಡಿವ ನೀರಿಗೆ ಹಾಹಾಕಾರ
Team Udayavani, Jun 2, 2020, 6:49 AM IST
![tipaturu-neeru](https://www.udayavani.com/wp-content/uploads/2020/06/tipaturu-neeru-620x348.jpg)
ತಿಪಟೂರು: ತಾಲೂಕಿನ ಕೆಲ ಭಾಗಗಳಲ್ಲಿ ಜನ, ಜಾನುವಾರುಗಳಿಗೆ ಕುಡಿವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ. ನಗರ ಮತ್ತು ಹಳ್ಳಿಗಳ ಕುಡಿವ ನೀರಿನ ಸಮಸ್ಯೆ ಜೊತೆಗೆ, ಅಂತರ್ಜಲ ಪಾತಾಳ ಸೇರುವುದ ರಿಂದ ರೈತರ ಸ್ಥಿತಿ ಶೋಚನೀಯವಾಗಿದೆ. ತಾಲೂಕಾದ್ಯಂತ ಜನರು ಹನಿ ನೀರಿಗೂ ಪರದಾಡು ವಂತಾಗಿದೆ.
ಹಳ್ಳಿಗಳಲ್ಲಿಯೂ ಇದೇ ಸ್ಥಿತಿ ನಿರ್ಮಾಣ ವಾಗಿದ್ದು, ಮಹಿಳೆಯರು ಹಾಗೂ ಮಕ್ಕಳು ಪ್ರತಿನಿತ್ಯ ದೂರದ ತೋಟಗಳಿಗೆ ಹೋಗಿ ನೀರು ತರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಾಕಷ್ಟು ಗ್ರಾಮಗಳಲ್ಲಿನ ಬೋರ್ವೆಲ್ಗಳು ನೀರಿಲ್ಲದೆ ಬತ್ತಿಹೋಗಿವೆ. ಹೊಸ ಬೋರ್ವೆಲ್ಗಳನ್ನು ಕೊರೆಸುವ ಬಗ್ಗೆ ತಾ.ಆಡಳಿತ ಸಮರೋಪಾದಿಯಲ್ಲಿ ಕಾರ್ಯೋನ್ಮುಖವಾಗಬೇಕು. ಗ್ರಾಮೀಣ ಹಾಗೂ ನಗರದ ಕೆಲವು ಭಾಗಗಳಲ್ಲಿ ಸರ್ಕಾರದಿಂದ ಆರಂಭಿಸಿರುವ ಶುದ್ಧ ಕುಡಿವ ನೀರಿನ ಘಟಕಗಳು ಹಾಳಾಗಿವೆ.
ತಾಲೂಕು ಗ್ರಾಮೀಣ ಕುಡಿವ ನೀರು ಇಲಾಖೆ ಯಿಂದ ತಾಲೂಕಿನಲ್ಲಿ ಒಟ್ಟು 111 ಶುದ್ಧ ಕುಡಿವ ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ. ಅದರಲ್ಲಿ 94 ಚಾಲ್ತಿ ಯಲ್ಲಿವೆ. 14 ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ. ತಾಲೂಕಿನ ಕಿಬ್ಬನಹಳ್ಳಿ, ಪಟ್ರೇಹಳ್ಳಿ, ಸಾರ್ಥವಳ್ಳಿ, ಹಾಲ್ಕುರಿಕೆ, ಸಣ್ಣೇನಹಳ್ಳಿ, ಶಿವರ, ಹೊನ್ನವಳ್ಳಿ, ಈಚನೂರು, ರಂಗಾಪುರ, ನಾಗರಘಟ್ಟ ಗ್ರಾಮಗಳಲ್ಲಿ ನೀರಿನ ಘಟಕಗಳು ಹಾಳಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ಘಟಕಗಳನ್ನು ರಿಪೇರಿ ಮಾಡಿಸಿ ಉಪಯೋಗಕ್ಕೆ ಅವಕಾಶ ಕಲ್ಪಿಸಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಯಾವ ಹೋಬಳಿಗಳಲ್ಲಿ ಹೆಚ್ಚು ನೀರಿನ ಅಭಾವವಿದೆಯೋ ಅಲ್ಲಿಗೆ ಹಣ ಕೊಟ್ಟು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
-ನಟರಾಜು, ಸಹಾಯಕ ಕಾರ್ಯಪಾಲಕ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Shobha-Kharandlaje](https://www.udayavani.com/wp-content/uploads/2024/07/Shobha-Kharandlaje-150x90.jpg)
Congrees Government; ರಾಜ್ಯದಲ್ಲಿರುವುದು ಗೋಲ್ಮಾಲ್ ಸರ್ಕಾರ: ಕೇಂದ್ರ ಸಚಿವೆ ಶೋಭಾ
![5-tumkur](https://www.udayavani.com/wp-content/uploads/2024/07/5-tumkur-150x90.jpg)
Tumkur ZP CEO ಕೊರಟಗೆರೆ ರೌಂಡ್ಸ್; ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಇಓ ಪ್ರಭು.ಜಿ
![4-koratagere](https://www.udayavani.com/wp-content/uploads/2024/07/4-koratagere-150x90.jpg)
Koratagere: ಮಜ್ಜಿಗೆ ಫ್ಯಾಕ್ಟರಿಯ ಬಾಯ್ಲರ್ ಸ್ಪೋಟ; ಕಾರ್ಮಿಕನಿಗೆ ಗಂಭೀರ ಗಾಯ
![1-ewewqe](https://www.udayavani.com/wp-content/uploads/2024/07/1-ewewqe-150x85.jpg)
Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.