ಶೌಚಾಲಯ, ನೀರಿನ ಅವ್ಯವಸ್ಥೆ: ಅಧಿಕಾರಿಗೆ ತರಾಟೆ

ಕೊರೊನಾ ಹಿನ್ನಲೆಯಲ್ಲಿ 80 ವಿದ್ಯಾರ್ಥಿಗಳು ಮಾತ್ರ ಬರುತ್ತಿದ್ದಾರೆ.

Team Udayavani, Jan 20, 2022, 6:15 PM IST

ಶೌಚಾಲಯ, ನೀರಿನ ಅವ್ಯವಸ್ಥೆ: ಅಧಿಕಾರಿಗೆ ತರಾಟೆ

ಕುಣಿಗಲ್‌: ಪಟ್ಟಣದ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣಕ್ಕೆ ದಿಢೀರ್‌ ಭೇಟಿ ನೀಡಿದ ಪಿಕಾರ್ಡ್‌ ಬ್ಯಾಂಕ್‌ ರಾಜ್ಯಾಧ್ಯಕ್ಷ ಡಿ.ಕೃಷ್ಣಕುಮಾರ್‌, ಅಲ್ಲಿನ ಶೌಚಾಲಯ, ಕುಡಿಯುವ ನೀರಿನ ಅವ್ಯವಸ್ಥೆಯನ್ನು ಕಂಡು ಸಾರಿಗೆ ನಿಯಂತ್ರಕ ರನ್ನು ತರಾಟೆ ತೆಗೆದುಕೊಂಡ ಪ್ರಸಂಗ ನಡೆಯಿತು.

ಇಲ್ಲಿನ ಸಾರಿಗೆ ಬಸ್‌ ನಿಲ್ದಾಣಕ್ಕೆ ಬುಧವಾರ ಭೇಟಿ ನೀಡಿದ ಡಿ.ಕೃಷ್ಣಕುಮಾರ್‌, ಶೌಚಾಲಯಗಳನ್ನು ಪರಿ ಶೀಲಿಸಿದರು. ಶೌಚಾಲಯಗಳ ಟೈಲ್ಸ್‌, ಟಾಯ್ಲೆಟ್‌ ಬೇಸಿನ್‌ ಹಾಗೂ ಬೇಸಿನ ಪೈಪ್‌ಗ್ಳು ಹೊಡೆದು ಗಬ್ಬೆದ್ದು ನಾರುತ್ತಾ, ಕಲುಷಿತ ನೀರು ಪ್ರಯಾಣಿಕರು ತಿರುಗಾಡುವ ನಿಲ್ದಾಣದ ಹೊರಗೆ ಹರಿಯುತ್ತಿತ್ತು. ಶೌಚಾಲ ಯದ ವಾಸನೆ ಹೊರಕ್ಕೂ ಬರುತ್ತಿತ್ತು. ಇದರಿಂದ ಆಕ್ರೋಶಗೊಂಡ ಕೃಷ್ಣಕುಮಾರ್‌, ಸಂಸ್ಥೆಯ ನಿಯಂತ್ರಕ ಬಿ.ಎಲ್‌.ಪಾತಲಿಂಗರೆಡ್ಡಿ ಅವರನ್ನು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು. ಇದೇನು ಬಸ್‌ ನಿಲ್ದಾಣದ ಶೌಚಾಲಯವೋ, ಕೊಳಚೆ ಚರಂಡಿಯೋ, ನಿಮ್ಮ ಮನೆಯ ಶೌಚಾಲಯವನ್ನು ನೀವು ಹೀಗೆ ಇಟ್ಟು ಕೊಳ್ಳುತ್ತೀರ ಎಂದು ಕಾರವಾಗಿ ಪ್ರಶ್ನಿಸಿದರು.

ಕೊರೊನಾ ಸಂದರ್ಭದಲ್ಲಿ ಶೌಚಾಲಯ ಹಾಗೂ ನಿಲ್ದಾಣವನ್ನು ಸ್ವತ್ಛವಾಗಿ ಇಟ್ಟುಕೊಳ್ಳಬೇಕು, ನಿತ್ಯ ಸಾವಿರಾರು ಪ್ರಯಾಣಿಕರು ಇಲ್ಲಿಗೆ ಬಂದು ಪ್ರಯಾಣಿಸುತ್ತಾರೆ. ನಿಮ್ಮ ಬೇಜವಾಬ್ದಾರಿಯಿಂದ ಪ್ರಯಾಣಿಕ ರಿಗೆ ಸಾಂಕ್ರಾಮಿಕ ರೋಗ ಅಂಟುಕೊಳ್ಳಲಿದೆ. ಇದರ ಹೊಣೆಯನ್ನು ನೀವೆ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಲುಷಿತ ಕುಡಿಯುವ ನೀರು: ಬಳಿಕ ಶುದ್ಧ ಕುಡಿವ ನೀರಿನ ಘಟಕವನ್ನು ಕೃಷ್ಣಕುಮಾರ್‌ ಪರಿಶೀಲಿಸದರು. ನೆಪಕ್ಕೆ ಮಾತ್ರ ಶುದ್ಧ ನೀರಿನ ಘಟಕವಿದೆ. ಆದರೆ, ಶುದ್ಧಕುಡಿಯುವ ನೀರಿನ ಬದಲಿಗೆ ಕಲುಷಿತ ನೀರು ಬರುತ್ತಿದೆ. ಇದರ ಸುತ್ತಾ ಜಾಡು ಕಟ್ಟಿದೇ ಸ್ವಚ್ಛತೆ ಮಾಡಿಲ್ಲ. ಪ್ರಯಾಣಿಕರು ಈ ನೀರು ಕುಡಿದರೇ ಅವರ ಆರೋಗ್ಯ ಏನಾಗಬಹುದು ಎಂದು ಸಂಸ್ಥೆಯ ನಿಯಂತ್ರಕ ಬಿ.ಎಲ್‌. ಪಾತಲಿಂಗರೆಡ್ಡಿ ಅವರನ್ನು ಪ್ರಶ್ನಿಸಿದರು.

ಕೂಡಲೇ ಈ ಅವ್ಯವಸ್ಥೆಯನ್ನು ವಾರದೊಳಗಾಗಿ ಸರಿಪಡಿಸಬೇಕು. ಸಮಯಕ್ಕೆ ಸರಿಯಾಗಿ ಗ್ರಾಮೀಣ ಪ್ರದೇಶಕ್ಕೆ ಬಸ್‌ಗಳನ್ನು ಬಿಟ್ಟು ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ನಿಮ್ಮ ವಿರುದ್ಧ ಕ್ರಮಕ್ಕೆ ಸಚಿವರಿಗೆ ದೂರು ನೀಡುವುದ್ದಾಗಿ ಎಚ್ಚರಿಕೆ ನೀಡಿದರು.

ಹಾಸ್ಟೆಲ್‌ ಪರಿಶೀಲನೆ: ಬಸ್‌ ನಿಲ್ದಾಣ ಪರಿಶೀಲಿಸಿದ ಬಳಿಕ ಪಟ್ಟಣದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿ ನಿಯಲಯಕ್ಕೆ ಭೇಟಿ ನೀಡಿದ ಕೃಷ್ಣಕುಮಾರ್‌, ಹಾಸ್ಟೆಲ್‌ ಸ್ವತ್ಛತೆ, ಅಡುಗೆ ಕೊಠಡಿ, ಗುಣಮಟ್ಟದ ಆಹಾರ ತಯಾರಿಕೆಯನ್ನು ಪರಿಶೀಲಿಸಿದರು. ಹಾಸ್ಟೆಲ್‌ನಲ್ಲಿ ಎಷ್ಟು ಜನ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಊಟ, ತಿಂಡಿ, ಏನೇನು ಕೊಡುತ್ತೀದ್ದೀರ ಎಂದು ಅಡಿಗೆ ತಯಾರಕರನ್ನು ಕೇಳಿದರು. 200 ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ದಾಖಲಾಗಿದ್ದಾರೆ. ಆದರೆ, ಕೊರೊನಾ ಹಿನ್ನಲೆಯಲ್ಲಿ 80 ವಿದ್ಯಾರ್ಥಿಗಳು ಮಾತ್ರ ಬರುತ್ತಿದ್ದಾರೆ. ಅವರಿಗೆ ಆಹಾರದ ಪಟ್ಟಿ ಪ್ರಕಾರ ಊಟ ನೀಡಲಾಗುತ್ತಿದೆ ಎಂದು ಅಡಿಗೆ ತಯಾರಕಿ ತಿಳಿಸಿದರು.

ಆಹಾರದ ಪಟ್ಟಿಯಲ್ಲಿ ಮಧ್ಯಾಹ್ನದ ಊಟಕ್ಕೆ ಮುದ್ದೆ ಕೊಡಲಾಗುವುದೆಂದು ಹಾಕಲಾಗಿದೆ. ಆದರೆ, ಮುದ್ದೆ ಏಕೆ ಮಾಡಿಲ್ಲ ಎಂದು ಪ್ರಶ್ನಿಸಿ ಅನ್ನ ಸಾಂಬರ್‌ ಸವಿದರು. ಸಾಂಬರ್‌ ಚನ್ನಾಗಿದೆ. ಹೀಗೆ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ತಿಳಿಸಿದರು. ಸರ್ಕಾರ ನೀಡುವ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ತಲುಪಿಸುವಂತಹ ಕೆಲಸವನ್ನು ಇಲಾಖೆಯ ವಿಸ್ತರಣಾಧಿಕಾರಿ ಮಾಡುವಂತೆ ತಿಳಿಸಬೇಕೆಂದು ಸೂಚಿಸಿದರು.

ಕೊರೊನಾ ಬಗ್ಗೆ ಎಚ್ಚರವಹಿಸಿ: ಕೊರೊನಾ ಬಗ್ಗೆ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ದೈಹಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಕೈಗಳಿಗೆ ಸ್ಯಾನಿಟೈಸರ್‌ ಹಾಕಿಕೊಳ್ಳಬೇಕು ಎಂದು ಹೇಳಿದರು. ಪುರಸಭಾ ಸದಸ್ಯ ಆನಂದ್‌ಕುಮಾರ್‌, ಗ್ರಾಪಂ ಸದಸ್ಯ ಜೆಸಿಬಿ ನಾಗರಾಜು, ಮುಖಂಡ ತಿಮ್ಮೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.