ಮಧುಗಿರಿ: ಮಕ್ಕಳಿಲ್ಲದ ಖಿನ್ನತೆ; ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
Team Udayavani, Jul 27, 2022, 1:14 PM IST
ಮಧುಗಿರಿ: ಮಕ್ಕಳಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ತಾಲೂಕಿನ ಕಸಬಾ ಬಸವನಹಳ್ಳಿಯ ವಾಸಿ ಚೌಡಪ್ಪ (33) ಮೃತ ದುರ್ದೈವಿ.
ಈತನಿಗೆ ಮದುವೆಯಾಗಿ 8 ವರ್ಷವಾಗಿದ್ದು, ಮಕ್ಕಳಿರಲಿಲ್ಲ. ಆದರೂ ಕುಟುಂಬದಲ್ಲಿ ಸಂತೋಷವಾಗಿ ಇದ್ದನು. ಒಂದು ಗಾರ್ಮೆಂಟ್ಸ್ ಕಂಪನಿಗೆ ಕೆಲಸಕ್ಕೂ ಸೇರಿದ್ದು ಕೈ ತುಂಬಾ ದುಡಿಮೆಯಿದ್ದು ಸುಖ ಸಂಸಾರ ಇತ್ತು. ಆದರೆ ಬುಧವಾರ ಬೆಳಿಗ್ಗೆ ಚಹಾ ಸೇವಿಸಿ ಜಮೀನಿನ ಬಳಿ ಹೋಗಿ ಬರುವುದಾಗಿ ಹೋದವನು ತನ್ನ ಜಮೀನಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮರಣೊತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!