ಮಧುಗಿರಿ: ಆಟೋ ತಲೆ ಮೇಲೆ ಹರಿದು ಬಾಲಕ ಸ್ಥಳದಲ್ಲೇ ಸಾವು
Team Udayavani, Sep 27, 2022, 7:01 PM IST
ಮಧುಗಿರಿ: ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕನ ತಲೆ ಮೇಲೆ ಆಟೋ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಪಟ್ಟಣದ ಶಾಲರಯೊಂದರ ಕುಶಾಲ್ (9) ಮೃತಪಟ್ಟ ಬಾಲಕ.
ಘಟನೆಯ ವಿವರ:
ಬಾಲಕ ಕುಶಾಲ್ ಬೆಂಕಿಪುರದ ಅಶ್ವತ್ಥ್ ಎಂಬುವವರ ಪುತ್ರನಾಗಿದ್ದು ನಗರದ ಶಾಲೆವೊಂದರಲ್ಲಿ 3 ನೇ ತರಗತಿಯಲ್ಲಿ ಓದುತ್ತಿದ್ದ. ಸಂಜೆ ಮನೆಗೆ ಮರಳುವಾಗ ಆಟೋದಲ್ಲಿ ಬರುವಾಗ ಆಟೋ ಮುಂದೆ ಕುಳಿತಿದ್ದವನು ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದು ಅದೇ ಆಟೋದ ಹಿಂಬದಿಯ ಚಕ್ರ ತಲೆ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸುರಕ್ಷತೆಯಿಲ್ಲದೆ ಸಂಚಾರ :
ಪಟ್ಟಣದಲ್ಲಿ ಖಾಸಗಿ ಶಾಲೆಗಳು ತಮ್ಮ ವಾಹನಗಳಲ್ಲಿ ಮಕ್ಕಳನ್ನು ಕರೆತರಲು ಹೆಚ್ಚು ಶುಲ್ಕ ವಿಧಿಸಿದ ಕಾರಣ ಬಡ ಪೋಷಕರು ಇಂತಹ ಆಟೋವನ್ನು ಅವಲಂಬಿಸುವುದು ಸಾಮಾನ್ಯವಾಗಿದೆ. ಇದರಲ್ಲಿ ತಿಂಗಳಿಗೆ 700 ರೂ.ಗಳಿದ್ದು ಶಾಲಾ ವಾಹನದಲ್ಲಿ 6-7 ಸಾವಿರವಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಆಟೋ ಚಾಲಕರು ಒಂದೇ ಬಾರಿ 10-15 ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಾರೆ. ಇಂತಹ ಆಟೋಗಳ ಬಗ್ಗೆ ಪೊಲೀಸರು, ಸಾರಿಗೆ ಇಲಾಖೆಯವರು ಕಂಡೂ ಕಾಣದಂತಿರುವುದು ಇಂತಹ ಅವಘಡಗಳಿಗೆ ಕಾರಣವಾಗಿದೆ ಎಂಬುದು ಜನರ ಆರೋಪ.
ಘಟನೆ ಸಂಬಂಧಿಸಿ ಆಟೋ ಚಾಲಕನನ್ನು ಬಂಧಿಸಿದ್ದು, ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ