ಮಧುಗಿರಿ: ಆಟೋ ತಲೆ ಮೇಲೆ ಹರಿದು ಬಾಲಕ ಸ್ಥಳದಲ್ಲೇ ಸಾವು
Team Udayavani, Sep 27, 2022, 7:01 PM IST
ಮಧುಗಿರಿ: ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕನ ತಲೆ ಮೇಲೆ ಆಟೋ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಪಟ್ಟಣದ ಶಾಲರಯೊಂದರ ಕುಶಾಲ್ (9) ಮೃತಪಟ್ಟ ಬಾಲಕ.
ಘಟನೆಯ ವಿವರ:
ಬಾಲಕ ಕುಶಾಲ್ ಬೆಂಕಿಪುರದ ಅಶ್ವತ್ಥ್ ಎಂಬುವವರ ಪುತ್ರನಾಗಿದ್ದು ನಗರದ ಶಾಲೆವೊಂದರಲ್ಲಿ 3 ನೇ ತರಗತಿಯಲ್ಲಿ ಓದುತ್ತಿದ್ದ. ಸಂಜೆ ಮನೆಗೆ ಮರಳುವಾಗ ಆಟೋದಲ್ಲಿ ಬರುವಾಗ ಆಟೋ ಮುಂದೆ ಕುಳಿತಿದ್ದವನು ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದು ಅದೇ ಆಟೋದ ಹಿಂಬದಿಯ ಚಕ್ರ ತಲೆ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸುರಕ್ಷತೆಯಿಲ್ಲದೆ ಸಂಚಾರ :
ಪಟ್ಟಣದಲ್ಲಿ ಖಾಸಗಿ ಶಾಲೆಗಳು ತಮ್ಮ ವಾಹನಗಳಲ್ಲಿ ಮಕ್ಕಳನ್ನು ಕರೆತರಲು ಹೆಚ್ಚು ಶುಲ್ಕ ವಿಧಿಸಿದ ಕಾರಣ ಬಡ ಪೋಷಕರು ಇಂತಹ ಆಟೋವನ್ನು ಅವಲಂಬಿಸುವುದು ಸಾಮಾನ್ಯವಾಗಿದೆ. ಇದರಲ್ಲಿ ತಿಂಗಳಿಗೆ 700 ರೂ.ಗಳಿದ್ದು ಶಾಲಾ ವಾಹನದಲ್ಲಿ 6-7 ಸಾವಿರವಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಆಟೋ ಚಾಲಕರು ಒಂದೇ ಬಾರಿ 10-15 ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಾರೆ. ಇಂತಹ ಆಟೋಗಳ ಬಗ್ಗೆ ಪೊಲೀಸರು, ಸಾರಿಗೆ ಇಲಾಖೆಯವರು ಕಂಡೂ ಕಾಣದಂತಿರುವುದು ಇಂತಹ ಅವಘಡಗಳಿಗೆ ಕಾರಣವಾಗಿದೆ ಎಂಬುದು ಜನರ ಆರೋಪ.
ಘಟನೆ ಸಂಬಂಧಿಸಿ ಆಟೋ ಚಾಲಕನನ್ನು ಬಂಧಿಸಿದ್ದು, ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ